Homeಮುಖಪುಟನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

ನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

- Advertisement -
- Advertisement -

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್ ತನ್ನ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಜರ್ಮನ್ ಮೂಲದವರಾದ ಕಿಸ್ಸಿಂಜರ್ ಕನೆಕ್ಟಿಕಟ್‌ನಲ್ಲಿರುವ ಅವರ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ಅವರ ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ತಿಳಿಸಿದೆ.

1923ರಲ್ಲಿ ಜರ್ಮನಿಯಲ್ಲಿ ಜನಿಸಿದ ಕಿಸ್ಸಿಂಜರ್, 1938 ರಲ್ಲಿ ಕುಟುಂಬದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸಿದರು. 1943ರಲ್ಲಿ ಅವರು ಅಮೆರಿಕದ ಪೌರತ್ವ ಪಡೆದ ಕಿಸ್ಸಿಂಜರ್, ಯುಎಸ್ ಸೇನೆಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಇಂಟಲಿಜೆನ್ಸ್ ಕಾರ್ಪ್‌ನಲ್ಲಿ ಕೆಲಸ ಮಾಡಿದ್ದರು. 1969ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಡಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದರು. ತನ್ನ ಅಧಿಕಾರವಧಿಯಲ್ಲಿ ಕಿಸ್ಸಿಂಜರ್ ಯುಎಸ್ ವಿದೇಶಾಂಗ ನೀತಿಗಳ ಮಾರ್ಪಾಡು, ಹೊಸ ಪರಿಚಯ ಮಾಡಿದ್ದರು.

ವಿವಾದಕ್ಕೆ ಕಾರಣವಾಗಿತ್ತು ಕಿಸ್ಸಿಂಜರ್ ನೋಬೆಲ್ ಪುರಸ್ಕಾರ :

ಹೆನ್ರಿ ಕಿಸ್ಸಿಂಜರ್ ಎಂದಾಕ್ಷಣ ಅವರಿಗೆ ದೊರೆತ ನೋಬೆಲ್ ಪುರಸ್ಕಾರದ ವಿಚಾರ ಮುನ್ನಲೆಗೆ ಬರುತ್ತದೆ. 1973ರಲ್ಲಿ ವಿಯೆಟ್ನಾಂನ ಲೇ ಡುಕ್ ಥೋ ಅವರೊಂದಿಗೆ ಕಿಸ್ಸಿಂಜರ್ ಜಂಟಿಯಾಗಿ ನೋಬೆಲ್ ಶಾಂತಿ ಪುರಸ್ಕಾರ ಪಡೆದರು. ಕಿಸ್ಸಿಂಜರ್ ನೋಬೆಲ್ ಪಡೆಯುವುದಕ್ಕೆ ಜಾಗತಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಬೋಡಿಯಾದಲ್ಲಿ ಗೌಪ್ಯವಾಗಿ ಬಾಂಬ್ ದಾಳಿ ನಡೆಸಿದ್ದರ ಹಿಂದೆ ಕಿಸ್ಸಿಂಜರ್ ಕೈವಾಡ ಇದೆ ಎಂದು ನೋಬೆಲ್ ಸಮಿತಿಯ ಇಬ್ಬರು ಸದಸ್ಯರು ರಾಜೀನಾಮೆ ಕೂಡ ನೀಡಿದ್ದರು.

100 ನೇ ವರ್ಷಕ್ಕೆ ಕಾಲಿಟ್ಟ ನಂತರವೂ, ಕಿಸ್ಸಿಂಜರ್ ಶ್ವೇತಭವನದಲ್ಲಿ ಸಭೆಗಳಿಗೆ ಹಾಜರಾಗುತ್ತಿದ್ದರು. ನಾಯಕತ್ವದ ಶೈಲಿಗಳ ಬಗ್ಗೆ ಪುಸ್ತಕವನ್ನು ಪ್ರಕಟಿಸಿದ್ದರು. ಉತ್ತರ ಕೊರಿಯಾ ಒಡ್ಡಿದ ಪರಮಾಣು ಬೆದರಿಕೆಯ ಬಗ್ಗೆ ಅವರು ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದ್ದರು. ಈ ವರ್ಷದ ಜುಲೈನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಕಿಸ್ಸಿಂಜರ್ ಅಚ್ಚರಿ ಮೂಡಿಸಿದ್ದರು.

ಸೆಪ್ಟೆಂಬರ್ 11, 2001 ರ ಯುಎಸ್ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲಿನ ಅಲ್‌ ಖೈದಾ ದಾಳಿಯ ನಂತರ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಕಿಸ್ಸಿಂಜರ್ ಅವರನ್ನು ತನಿಖಾ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಡೆಮಾಕ್ರಟಿಕ್ ಪಕ್ಷದ ತೀವ್ರ ವಿರೋಧವು ಕಿಸ್ಸಿಂಜರ್ ಅವರನ್ನು ಆ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿಸಿತ್ತು.

1964 ರಲ್ಲಿ ತನ್ನ ಮೊದಲ ಪತ್ನಿ ಆನ್ ಫ್ಲೀಶರ್‌ಗೆ ವಿಚ್ಛೇದನ ನೀಡಿದ ನಂತರ, ಕಿಸ್ಸಿಂಜರ್ 1974 ರಲ್ಲಿ ನ್ಯೂಯಾರ್ಕ್ ಗವರ್ನರ್ ನೆಲ್ಸನ್ ರಾಕ್‌ಫೆಲ್ಲರ್ ಅವರ ಸಹಾಯಕಿ ನ್ಯಾನ್ಸಿ ಮ್ಯಾಗಿನ್ನೆಸ್ ಅವರನ್ನು ವಿವಾಹವಾದರು. ತಮ್ಮ ಮೊದಲ ಪತ್ನಿಯಿಂದ ಕಿಸ್ಸಿಂಜರ್ ಇಬ್ಬರು ಮಕ್ಕಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...