Homeಮುಖಪುಟನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

ನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

- Advertisement -
- Advertisement -

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್ ತನ್ನ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಜರ್ಮನ್ ಮೂಲದವರಾದ ಕಿಸ್ಸಿಂಜರ್ ಕನೆಕ್ಟಿಕಟ್‌ನಲ್ಲಿರುವ ಅವರ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ಅವರ ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ತಿಳಿಸಿದೆ.

1923ರಲ್ಲಿ ಜರ್ಮನಿಯಲ್ಲಿ ಜನಿಸಿದ ಕಿಸ್ಸಿಂಜರ್, 1938 ರಲ್ಲಿ ಕುಟುಂಬದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸಿದರು. 1943ರಲ್ಲಿ ಅವರು ಅಮೆರಿಕದ ಪೌರತ್ವ ಪಡೆದ ಕಿಸ್ಸಿಂಜರ್, ಯುಎಸ್ ಸೇನೆಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಇಂಟಲಿಜೆನ್ಸ್ ಕಾರ್ಪ್‌ನಲ್ಲಿ ಕೆಲಸ ಮಾಡಿದ್ದರು. 1969ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಡಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದರು. ತನ್ನ ಅಧಿಕಾರವಧಿಯಲ್ಲಿ ಕಿಸ್ಸಿಂಜರ್ ಯುಎಸ್ ವಿದೇಶಾಂಗ ನೀತಿಗಳ ಮಾರ್ಪಾಡು, ಹೊಸ ಪರಿಚಯ ಮಾಡಿದ್ದರು.

ವಿವಾದಕ್ಕೆ ಕಾರಣವಾಗಿತ್ತು ಕಿಸ್ಸಿಂಜರ್ ನೋಬೆಲ್ ಪುರಸ್ಕಾರ :

ಹೆನ್ರಿ ಕಿಸ್ಸಿಂಜರ್ ಎಂದಾಕ್ಷಣ ಅವರಿಗೆ ದೊರೆತ ನೋಬೆಲ್ ಪುರಸ್ಕಾರದ ವಿಚಾರ ಮುನ್ನಲೆಗೆ ಬರುತ್ತದೆ. 1973ರಲ್ಲಿ ವಿಯೆಟ್ನಾಂನ ಲೇ ಡುಕ್ ಥೋ ಅವರೊಂದಿಗೆ ಕಿಸ್ಸಿಂಜರ್ ಜಂಟಿಯಾಗಿ ನೋಬೆಲ್ ಶಾಂತಿ ಪುರಸ್ಕಾರ ಪಡೆದರು. ಕಿಸ್ಸಿಂಜರ್ ನೋಬೆಲ್ ಪಡೆಯುವುದಕ್ಕೆ ಜಾಗತಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಬೋಡಿಯಾದಲ್ಲಿ ಗೌಪ್ಯವಾಗಿ ಬಾಂಬ್ ದಾಳಿ ನಡೆಸಿದ್ದರ ಹಿಂದೆ ಕಿಸ್ಸಿಂಜರ್ ಕೈವಾಡ ಇದೆ ಎಂದು ನೋಬೆಲ್ ಸಮಿತಿಯ ಇಬ್ಬರು ಸದಸ್ಯರು ರಾಜೀನಾಮೆ ಕೂಡ ನೀಡಿದ್ದರು.

100 ನೇ ವರ್ಷಕ್ಕೆ ಕಾಲಿಟ್ಟ ನಂತರವೂ, ಕಿಸ್ಸಿಂಜರ್ ಶ್ವೇತಭವನದಲ್ಲಿ ಸಭೆಗಳಿಗೆ ಹಾಜರಾಗುತ್ತಿದ್ದರು. ನಾಯಕತ್ವದ ಶೈಲಿಗಳ ಬಗ್ಗೆ ಪುಸ್ತಕವನ್ನು ಪ್ರಕಟಿಸಿದ್ದರು. ಉತ್ತರ ಕೊರಿಯಾ ಒಡ್ಡಿದ ಪರಮಾಣು ಬೆದರಿಕೆಯ ಬಗ್ಗೆ ಅವರು ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದ್ದರು. ಈ ವರ್ಷದ ಜುಲೈನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಕಿಸ್ಸಿಂಜರ್ ಅಚ್ಚರಿ ಮೂಡಿಸಿದ್ದರು.

ಸೆಪ್ಟೆಂಬರ್ 11, 2001 ರ ಯುಎಸ್ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲಿನ ಅಲ್‌ ಖೈದಾ ದಾಳಿಯ ನಂತರ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಕಿಸ್ಸಿಂಜರ್ ಅವರನ್ನು ತನಿಖಾ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಡೆಮಾಕ್ರಟಿಕ್ ಪಕ್ಷದ ತೀವ್ರ ವಿರೋಧವು ಕಿಸ್ಸಿಂಜರ್ ಅವರನ್ನು ಆ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿಸಿತ್ತು.

1964 ರಲ್ಲಿ ತನ್ನ ಮೊದಲ ಪತ್ನಿ ಆನ್ ಫ್ಲೀಶರ್‌ಗೆ ವಿಚ್ಛೇದನ ನೀಡಿದ ನಂತರ, ಕಿಸ್ಸಿಂಜರ್ 1974 ರಲ್ಲಿ ನ್ಯೂಯಾರ್ಕ್ ಗವರ್ನರ್ ನೆಲ್ಸನ್ ರಾಕ್‌ಫೆಲ್ಲರ್ ಅವರ ಸಹಾಯಕಿ ನ್ಯಾನ್ಸಿ ಮ್ಯಾಗಿನ್ನೆಸ್ ಅವರನ್ನು ವಿವಾಹವಾದರು. ತಮ್ಮ ಮೊದಲ ಪತ್ನಿಯಿಂದ ಕಿಸ್ಸಿಂಜರ್ ಇಬ್ಬರು ಮಕ್ಕಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...