Homeಮುಖಪುಟನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

ನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

- Advertisement -
- Advertisement -

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್ ತನ್ನ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಜರ್ಮನ್ ಮೂಲದವರಾದ ಕಿಸ್ಸಿಂಜರ್ ಕನೆಕ್ಟಿಕಟ್‌ನಲ್ಲಿರುವ ಅವರ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ಅವರ ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ತಿಳಿಸಿದೆ.

1923ರಲ್ಲಿ ಜರ್ಮನಿಯಲ್ಲಿ ಜನಿಸಿದ ಕಿಸ್ಸಿಂಜರ್, 1938 ರಲ್ಲಿ ಕುಟುಂಬದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸಿದರು. 1943ರಲ್ಲಿ ಅವರು ಅಮೆರಿಕದ ಪೌರತ್ವ ಪಡೆದ ಕಿಸ್ಸಿಂಜರ್, ಯುಎಸ್ ಸೇನೆಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಇಂಟಲಿಜೆನ್ಸ್ ಕಾರ್ಪ್‌ನಲ್ಲಿ ಕೆಲಸ ಮಾಡಿದ್ದರು. 1969ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಡಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದರು. ತನ್ನ ಅಧಿಕಾರವಧಿಯಲ್ಲಿ ಕಿಸ್ಸಿಂಜರ್ ಯುಎಸ್ ವಿದೇಶಾಂಗ ನೀತಿಗಳ ಮಾರ್ಪಾಡು, ಹೊಸ ಪರಿಚಯ ಮಾಡಿದ್ದರು.

ವಿವಾದಕ್ಕೆ ಕಾರಣವಾಗಿತ್ತು ಕಿಸ್ಸಿಂಜರ್ ನೋಬೆಲ್ ಪುರಸ್ಕಾರ :

ಹೆನ್ರಿ ಕಿಸ್ಸಿಂಜರ್ ಎಂದಾಕ್ಷಣ ಅವರಿಗೆ ದೊರೆತ ನೋಬೆಲ್ ಪುರಸ್ಕಾರದ ವಿಚಾರ ಮುನ್ನಲೆಗೆ ಬರುತ್ತದೆ. 1973ರಲ್ಲಿ ವಿಯೆಟ್ನಾಂನ ಲೇ ಡುಕ್ ಥೋ ಅವರೊಂದಿಗೆ ಕಿಸ್ಸಿಂಜರ್ ಜಂಟಿಯಾಗಿ ನೋಬೆಲ್ ಶಾಂತಿ ಪುರಸ್ಕಾರ ಪಡೆದರು. ಕಿಸ್ಸಿಂಜರ್ ನೋಬೆಲ್ ಪಡೆಯುವುದಕ್ಕೆ ಜಾಗತಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಬೋಡಿಯಾದಲ್ಲಿ ಗೌಪ್ಯವಾಗಿ ಬಾಂಬ್ ದಾಳಿ ನಡೆಸಿದ್ದರ ಹಿಂದೆ ಕಿಸ್ಸಿಂಜರ್ ಕೈವಾಡ ಇದೆ ಎಂದು ನೋಬೆಲ್ ಸಮಿತಿಯ ಇಬ್ಬರು ಸದಸ್ಯರು ರಾಜೀನಾಮೆ ಕೂಡ ನೀಡಿದ್ದರು.

100 ನೇ ವರ್ಷಕ್ಕೆ ಕಾಲಿಟ್ಟ ನಂತರವೂ, ಕಿಸ್ಸಿಂಜರ್ ಶ್ವೇತಭವನದಲ್ಲಿ ಸಭೆಗಳಿಗೆ ಹಾಜರಾಗುತ್ತಿದ್ದರು. ನಾಯಕತ್ವದ ಶೈಲಿಗಳ ಬಗ್ಗೆ ಪುಸ್ತಕವನ್ನು ಪ್ರಕಟಿಸಿದ್ದರು. ಉತ್ತರ ಕೊರಿಯಾ ಒಡ್ಡಿದ ಪರಮಾಣು ಬೆದರಿಕೆಯ ಬಗ್ಗೆ ಅವರು ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದ್ದರು. ಈ ವರ್ಷದ ಜುಲೈನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಕಿಸ್ಸಿಂಜರ್ ಅಚ್ಚರಿ ಮೂಡಿಸಿದ್ದರು.

ಸೆಪ್ಟೆಂಬರ್ 11, 2001 ರ ಯುಎಸ್ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲಿನ ಅಲ್‌ ಖೈದಾ ದಾಳಿಯ ನಂತರ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಕಿಸ್ಸಿಂಜರ್ ಅವರನ್ನು ತನಿಖಾ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಡೆಮಾಕ್ರಟಿಕ್ ಪಕ್ಷದ ತೀವ್ರ ವಿರೋಧವು ಕಿಸ್ಸಿಂಜರ್ ಅವರನ್ನು ಆ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿಸಿತ್ತು.

1964 ರಲ್ಲಿ ತನ್ನ ಮೊದಲ ಪತ್ನಿ ಆನ್ ಫ್ಲೀಶರ್‌ಗೆ ವಿಚ್ಛೇದನ ನೀಡಿದ ನಂತರ, ಕಿಸ್ಸಿಂಜರ್ 1974 ರಲ್ಲಿ ನ್ಯೂಯಾರ್ಕ್ ಗವರ್ನರ್ ನೆಲ್ಸನ್ ರಾಕ್‌ಫೆಲ್ಲರ್ ಅವರ ಸಹಾಯಕಿ ನ್ಯಾನ್ಸಿ ಮ್ಯಾಗಿನ್ನೆಸ್ ಅವರನ್ನು ವಿವಾಹವಾದರು. ತಮ್ಮ ಮೊದಲ ಪತ್ನಿಯಿಂದ ಕಿಸ್ಸಿಂಜರ್ ಇಬ್ಬರು ಮಕ್ಕಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...