Homeಕರ್ನಾಟಕಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

- Advertisement -
- Advertisement -

ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ ಅಂದರೆ ಮೊಟ್ಟೆ ತಿನ್ನಬೇಡಿ, ಮಾಂಸ ತಿನ್ನಬೇಡಿ, ದನ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ ಎಂದು ಹೈಕೋರ್ಟ್ ವಕೀಲರಾದ ಬಾಲನ್‌ ಹೇಳಿದರು.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ” ಎಂದು ಎಚ್ಚರಿಸಿದರು.

“ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ” ಎಂದು ವಿವರಿಸಿದರು.

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷರಾದ ಆರ್‌‌.ಮಾನಸಯ್ಯ, “ದೆಹಲಿ ಗಡಿಯಲ್ಲಿ ರೈತರು ಪಟ್ಟು ಹಿಡಿದು ಕುಳಿತು ಮೋದಿ ಸರ್ಕಾರವನ್ನು ಸೋಲಿಸಿದಂತೆ ಎಲ್ಲಾ ಕಾರ್ಮಿಕರ ಸಂಟನೆಗಳನ್ನು ಒಂದು ವೇದಿಕೆಯಲ್ಲಿ ತಂದು ಅದೇ ಮಾದರಿ ಹೋರಾಟಕ್ಕೆ ಕಾರ್ಮಿಕರು ಹೋಗಬೇಕಾಗಿದೆ. ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ” ಎಂದು ತಿಳಿಸಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಕೇಂದ್ರೀಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿದರು. ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌, “ರೈತ ಮತ್ತು ಕಾರ್ಮಿಕ ಎಂಬ ಎರಡು ಹೆಜ್ಜೇನು ಗೂಡಿಗೆ ಇವರು ಕಲ್ಲು ಹೊಡೆದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಇವರ ವಿನಾಶಕ್ಕೆ ಇದು ನಾಂದಿಯಾಗಲಿದೆ. ಎದ್ದೇಳುವ ಹೆಜ್ಜೇನುಗಳು ಸುಮ್ಮನೆ ಬಿಡುವುದಿಲ್ಲ. ಹೀಗಾಗಲೇ ರೈತ ಜೇನುಗೂಡಿಗೆ ಕಲ್ಲು ಹೊಡೆದು ಕಚ್ಚಿಸಿಕೊಂಡು, ಮೈಯೆಲ್ಲ ಕೆರೆದುಕೊಂಡು ಒಂದು ವರ್ಷದ ಬಳಿಕ ಮೂರು ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ರೈತರು ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ನಾಟಕವನ್ನಾದರೂ ಆಡುವ ಪರಿಸ್ಥಿತಿಗೆ ಬಂದಿದ್ದಾರೆ” ಎಂದರು.


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...