Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...