Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...