Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...