Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....