Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...