Homeಮುಖಪುಟದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! - 80 ವರ್ಷದ...

ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

- Advertisement -
- Advertisement -

“ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೇನೆ; ಆದರೆ ಈಗ ನಾನು ಭಯೋತ್ಪಾಕ ಅಂತೆ” ಎಂದು ರೈತ ಹೋರಾಟದಲ್ಲಿ ಪಾಲ್ಗೊಂಡು ಬಂಧನವಾಗಿದ್ದ 80 ವರ್ಷದ ಮಾಜಿ ಯೋಧ ಗುರುಮುಖ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 15 ದಿನಗಳಿಂದ ಜೈಲಿನಲ್ಲಿದ್ದ ಇವರು ಕೊನೆಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ.

ಪಂಜಾಬಿನ ಫತೇಗಡ ಸಾಹಿಬ್ ಗ್ರಾಮದ ನಿವಾಸಿ ಸಿಂಗ್ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದರು. ತರಬೇತಿಯ ಬಳಿಕ 1962, ನವಂಬರ್ ತಿಂಗಳಿನಲ್ಲಿ ಉಭಯ ದೇಶಗಳು ಕದನ ವಿರಾಮವನ್ನು ಘೋಷಿಸುವವರೆಗೆ ಸಿಕ್ಕಿಮ್ ನ ನಾಥು ಲಾ ಪಾಸ್ ನಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. 1965ರ ಭಾರತ-ಪಾಕಿಸ್ತಾನ ಯುದ್ಧ ಮತ್ತು ಆರು ವರ್ಷಗಳ ಬಳಿಕ ಬಾಂಗ್ಲಾದೇಶ ವಿಮೋಚನಾ ಸಮರದಲ್ಲಿಯೂ ಅವರು ಹೋರಾಡಿದ್ದರು. 22 ವರ್ಷಗಳ ಸುದೀರ್ಘ ಸೇವೆಯ ಬಳಿಕ 1984ರಲ್ಲಿ ಅವರು ಸೇನೆಯಿಂದ ನಿವೃತ್ತಗೊಂಡಿದ್ದರು. ಉತ್ತಮ ಕುಸ್ತಿ ಮತ್ತು ಬಾಕ್ಸಿಂಗ್ ಪಟುವಾಗಿದ್ದ ಸಿಂಗ್ ಒಳ್ಳೆಯ ಕಬಡ್ಡಿ ಆಟಗಾರರೂ ಆಗಿದ್ದರು ಎಂದು ನ್ಯೂಸ್ ಲಾಂಡ್ರಿಯು ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಿಗೆ ಹೊರಟ ದಕ್ಷಿಣ ಭಾರತದ 140 ಕ್ಕೂ ಹೆಚ್ಚು ಹೋರಾಟಗಾರರು

“ಸೇನೆಯು ನನಗೆ ತುಂಬ ಪ್ರೀತಿ ಮತ್ತು ಗೌರವವನ್ನು ನೀಡಿತ್ತು. ಈ ದೇಶಕ್ಕಾಗಿ ಮೂರು ಯುದ್ಧಗಳಲ್ಲಿ ನಾನು ಹೋರಾಡಿದ್ದೇನೆ. 10 ಪದಕಗಳನ್ನೂ ಪಡೆದಿದ್ದೇನೆ. ಈಗ ಅವರು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಈ ಅವಮಾನವನ್ನು ಸಹಿಸಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ” ಎಂದು ಗುರುಮುಖ್ ಸಿಂಗ್ ಹೇಳಿದ್ದಾರೆ.

ಜ.25ರಂದು ಗುರುಮುಖ್ ಸಿಂಗ್ ಗಣರಾಜ್ಯೋತ್ಸವ ದಿನದಂದು ಆಯೋಜಿಸಲಾಗಿದ್ದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದು ತನ್ನ ಗ್ರಾಮದ 25 ರೈತರೊಂದಿಗೆ ದಿಲ್ಲಿ ಗಡಿಯನ್ನು ತಲುಪಿದ್ದರು. ಆದರೆ ಪ್ರಯಾಣದಿಂದ ಸುಸ್ತಾಗಿದ್ದ ಅವರು ಬುರಾರಿಯ ನಿರಂಕಾರಿ ಮೈದಾನದಲ್ಲಿಯ ಟೆಂಟ್‌ನಲ್ಲಿ ಉಳಿದುಕೊಂಡಿದ್ದರು. ಟ್ರಾಕ್ಟರ್ ರ್ಯಾಲಿಗಾಗಲೀ ಕೆಂಪು ಕೋಟೆಗಾಗಲೀ ಅವರು ಹೋಗಿರಲಿಲ್ಲ. ಟ್ರಾಕ್ಟರ್ ರ್ಯಾಲಿ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆ.1ರ ವೇಳೆಗೆ 122 ರೈತರನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರಲ್ಲಿ ಗುರುಮುಖ್ ಸಿಂಗ್ ಸೇರಿದ್ದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಟ್ರಾಕ್ಟರ್ ರ್ಯಾಲಿಯ ಮೂರು ದಿನಗಳ ಬಳಿಕ ನಿರಂಕಾರಿ ಮೈದಾನದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ರೈತರಿಗೆ ಬೆದರಿಕೆಯೊಡ್ಡಿದ್ದರು. ಜನವರಿ 28ರಂದು ಸಮುದಾಯ ಪಾಕಶಾಲೆಯಲ್ಲಿ ಅಡಿಗೆ ಕೆಲಸಕ್ಕೆ ನೆರವಾದ ಬಳಿಕ ಗುರುಮುಖ್ ಸಿಂಗ್ ತನ್ನ ಟೆಂಟ್‌ಗೆ ಮರಳಿದ್ದರು. ರಾತ್ರಿ 11ರ ಸುಮಾರಿಗೆ ರೈತರು ಮಲಗಲು ಸಜ್ಜಾಗುತ್ತಿದ್ದಾಗ ಏಕಾಏಕಿ ವಿದ್ಯುತ್ ನಿಲುಗಡೆಗೊಂಡಿತ್ತು. ಆಗ ಗುರುಮುಖ್ ಸಿಂಗ್ ಟೆಂಟ್‌ನಿಂದ ಹೊರಬಂದಾಗ ಅವರ ಮೇಲೆ ಮುಗಿಬಿದ್ದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಎಳೆದೊಯ್ದು ಪೊಲೀಸ್ ವ್ಯಾನ್‌ನಲ್ಲಿ ತಳ್ಳಿದ್ದರು. ಅವರೊಂದಿಗೆ ಇನ್ನೂ ಕೆಲವು ರೈತರನ್ನು ಬಂಧಿಸಲಾಗಿತ್ತು ಎಂದು ನ್ಯೂಸ್‌ ಲಾಂಡ್ರಿಯು ವರದಿ ಮಾಡಿದೆ.

ಪೊಲೀಸರು ಗುರುಮುಖ್ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ನಲ್ಲಿ ಅವರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ ಅವರು ಇದನ್ನು ನಿರಾಕರಿಸಿದ್ದಾರೆ.

ಜಾಮೀನು ಕೋರಿ ಗುರುಮುಖ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತನಿಖೆಯು ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣವನ್ನು ನೀಡಿ ಫೆ.9ರಂದು ನ್ಯಾಯಾಲಯವು ತಿರಸ್ಕರಿಸಿತ್ತು. ಆದಾಗ್ಯೂ ಮೂರು ದಿನಗಳ ಬಳಿಕ ಅವರ ವಯಸ್ಸು ಮತ್ತು ಅವರ ವಿರುದ್ಧ ಹಿಂದೆ ಯಾವುದೇ ಪ್ರಕರಣಗಳು ಇಲ್ಲದಿರುವುದನ್ನು ಪರಿಗಣಿಸಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ಗುರುಮುಖ್ ಸಿಂಗ್ ಈಗ ಸ್ವಗ್ರಾಮಕ್ಕೆ ಮರಳಿದ್ದಾರೆ. “ಪೊಲೀಸರು ನನಗೆ ಭಯೋತ್ಪಾದಕನ ಹಣೆಪಟ್ಟಿಯನ್ನು ಕಟ್ಟಿದ್ದರು. ಸೇನೆಯಲ್ಲಿ ನಾನು 22 ವರ್ಷಗಳ ಸೇವೆ ಸಲ್ಲಿಸಿದ್ದೇನೆ. ಸಾಯುವ ಮೊದಲು ಇದನ್ನು ನಾನು ಕೇಳಬೇಕಿತ್ತೇ” ಎಂದು ಸಿಂಗ್ ಪ್ರಶ್ನಿಸಿದರು.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...