Homeಮುಖಪುಟಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನಂತೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಪರ್ಯಾಯವಾಗಿ ಮಸೀದಿಯ ನಿರ್ಮಾಣಕ್ಕೆ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರ ನೀಡಿರುವ ಐದು ಎಕರೆ ಭೂಮಿಯಲ್ಲಿ ಮಸೀದಿಗೆ ಅಡಿಗಲ್ಲು ಹಾಕಲಾಗುವುದು ಎಂದು ಐಐಸಿಎಫ್ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.

ಮಸೀದಿಯ ನೀಲನಕ್ಷೆಯನ್ನು ಈ ಶನಿವಾರ (ಡಿ.19) ಅನಾವರಣಗೊಳಿಸಲಾಗುವುದು ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಮಾಹಿತಿ ನೀಡಿದೆ.

“ಏಳು ದಶಕಗಳ ಹಿಂದೆ ನಮ್ಮ ಸಂವಿಧಾನವು ಜಾರಿಗೆ ಬಂದಿದ್ದು ಅಯೋಧ್ಯೆ ಮಸೀದಿಗೆ ಅಡಿಪಾಯ ಹಾಕಲು ಟ್ರಸ್ಟ್ ಜನವರಿ 26 ರನ್ನು ಆಯ್ಕೆ ಮಾಡಿದೆ. ನಮ್ಮ ಸಂವಿಧಾನವು ಬಹುತ್ವವನ್ನು ಆಧರಿಸಿದೆ, ಇದು ನಮ್ಮ ಮಸೀದಿ ಯೋಜನೆಯ ಪ್ರಮುಖ ಅಂಶವಾಗಿದೆ ”ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಮಸೀದಿ ನಿರ್ಮಿಸಲು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಅನ್ನು ಆರು ತಿಂಗಳ ಹಿಂದೆ ಸುನ್ನಿ ವಕ್ಫ್ ಬೋರ್ಡ್ ಸ್ಥಾಪಿಸಿತ್ತು.

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ. ಈ ಮಸೀದಿ ನಿರ್ಮಾಣದ ಯೋಜನೆಯನ್ನು ಅದರ ಮುಖ್ಯ ವಾಸ್ತುಶಿಲ್ಪಿ ಪ್ರೊಫೆಸರ್ ಎಸ್.ಎಂ.ಅಖ್ತರ್ ಈಗಾಗಲೇ ಅಂತಿಮಗೊಳಿಸಿದ್ದಾರೆ.

“ಹೊಸ ಮಸೀದಿಯಲ್ಲಿ ಒಂದು ಬಾರಿಗೆ 2,000 ಜನರು ನಮಾಜ್ ಮಾಡಬಹುದು. ಮಸೀದಿಯ ರಚನೆಯು ವೃತ್ತಾಕಾರದಲ್ಲಿರುತ್ತದೆ” ಎಂದು ಅಖ್ತರ್ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂಕೋರ್ಟ್ ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ-ಬಾಬರಿ ಮಸೀದಿ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿತ್ತು. ಬಾಬರಿ ಮಸೀದಿ ಪರವಿದ್ದ ಸುನ್ನಿ ವಕ್ಫ್ ಬೋರ್ಡ್‌ಗೆ ಕಟ್ಟಡ ನಿರ್ಮಿಸಲು ಪರ್ಯಾಯವಾಗಿ ಐದು ಎಕರೆ ಜಾಗವನ್ನು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತು.

ಸದ್ಯ ಅಯೋಧ್ಯೆಯ ಸೊಹವಾಲ್ ತಹಸಿಲ್‌ನ ಧನ್ನಿಪುರ ಗ್ರಾಮದಲ್ಲಿ ರಾಜ್ಯ ಸರ್ಕಾರವು ಐದು ಎಕರೆ ಭೂಮಿಯನ್ನು ಮಸೀದಿಗಾಗಿ ಮಂಜೂರು ಮಾಡಿದೆ.

“ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. ಕಟ್ಟಡದಲ್ಲಿ ಆಸ್ಪತ್ರೆಯು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇಸ್ಲಾಂ ಧರ್ಮದ ನಿಜವಾದ ಮಾನವೀಯತೆಯ ಸೇವೆ ಸಲ್ಲಿಸುತ್ತದೆ ”ಎಂದು ಅಖ್ತರ್ ಹೇಳಿದ್ದಾರೆ.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...