Homeಮುಖಪುಟಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನಂತೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಪರ್ಯಾಯವಾಗಿ ಮಸೀದಿಯ ನಿರ್ಮಾಣಕ್ಕೆ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರ ನೀಡಿರುವ ಐದು ಎಕರೆ ಭೂಮಿಯಲ್ಲಿ ಮಸೀದಿಗೆ ಅಡಿಗಲ್ಲು ಹಾಕಲಾಗುವುದು ಎಂದು ಐಐಸಿಎಫ್ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.

ಮಸೀದಿಯ ನೀಲನಕ್ಷೆಯನ್ನು ಈ ಶನಿವಾರ (ಡಿ.19) ಅನಾವರಣಗೊಳಿಸಲಾಗುವುದು ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಮಾಹಿತಿ ನೀಡಿದೆ.

“ಏಳು ದಶಕಗಳ ಹಿಂದೆ ನಮ್ಮ ಸಂವಿಧಾನವು ಜಾರಿಗೆ ಬಂದಿದ್ದು ಅಯೋಧ್ಯೆ ಮಸೀದಿಗೆ ಅಡಿಪಾಯ ಹಾಕಲು ಟ್ರಸ್ಟ್ ಜನವರಿ 26 ರನ್ನು ಆಯ್ಕೆ ಮಾಡಿದೆ. ನಮ್ಮ ಸಂವಿಧಾನವು ಬಹುತ್ವವನ್ನು ಆಧರಿಸಿದೆ, ಇದು ನಮ್ಮ ಮಸೀದಿ ಯೋಜನೆಯ ಪ್ರಮುಖ ಅಂಶವಾಗಿದೆ ”ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಮಸೀದಿ ನಿರ್ಮಿಸಲು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಅನ್ನು ಆರು ತಿಂಗಳ ಹಿಂದೆ ಸುನ್ನಿ ವಕ್ಫ್ ಬೋರ್ಡ್ ಸ್ಥಾಪಿಸಿತ್ತು.

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ. ಈ ಮಸೀದಿ ನಿರ್ಮಾಣದ ಯೋಜನೆಯನ್ನು ಅದರ ಮುಖ್ಯ ವಾಸ್ತುಶಿಲ್ಪಿ ಪ್ರೊಫೆಸರ್ ಎಸ್.ಎಂ.ಅಖ್ತರ್ ಈಗಾಗಲೇ ಅಂತಿಮಗೊಳಿಸಿದ್ದಾರೆ.

“ಹೊಸ ಮಸೀದಿಯಲ್ಲಿ ಒಂದು ಬಾರಿಗೆ 2,000 ಜನರು ನಮಾಜ್ ಮಾಡಬಹುದು. ಮಸೀದಿಯ ರಚನೆಯು ವೃತ್ತಾಕಾರದಲ್ಲಿರುತ್ತದೆ” ಎಂದು ಅಖ್ತರ್ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂಕೋರ್ಟ್ ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ-ಬಾಬರಿ ಮಸೀದಿ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿತ್ತು. ಬಾಬರಿ ಮಸೀದಿ ಪರವಿದ್ದ ಸುನ್ನಿ ವಕ್ಫ್ ಬೋರ್ಡ್‌ಗೆ ಕಟ್ಟಡ ನಿರ್ಮಿಸಲು ಪರ್ಯಾಯವಾಗಿ ಐದು ಎಕರೆ ಜಾಗವನ್ನು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತು.

ಸದ್ಯ ಅಯೋಧ್ಯೆಯ ಸೊಹವಾಲ್ ತಹಸಿಲ್‌ನ ಧನ್ನಿಪುರ ಗ್ರಾಮದಲ್ಲಿ ರಾಜ್ಯ ಸರ್ಕಾರವು ಐದು ಎಕರೆ ಭೂಮಿಯನ್ನು ಮಸೀದಿಗಾಗಿ ಮಂಜೂರು ಮಾಡಿದೆ.

“ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. ಕಟ್ಟಡದಲ್ಲಿ ಆಸ್ಪತ್ರೆಯು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇಸ್ಲಾಂ ಧರ್ಮದ ನಿಜವಾದ ಮಾನವೀಯತೆಯ ಸೇವೆ ಸಲ್ಲಿಸುತ್ತದೆ ”ಎಂದು ಅಖ್ತರ್ ಹೇಳಿದ್ದಾರೆ.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...