Homeಮುಖಪುಟ'ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ'ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

‘ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ’ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

- Advertisement -
- Advertisement -

ಬಿಜೆಪಿಯ ಓವರ್‌ಸೀಸ್ ಫ್ರೆಂಡ್ಸ್‌ನ (ಸಾಗರೋತ್ತರ ಸ್ನೇಹಿತರು) ಆಸ್ಟ್ರೇಲಿಯಾ ವಿಭಾಗದ ಸಂಸ್ಥಾಪಕರಲ್ಲಿ ಒಬ್ಬರಾದ ಬಾಲೇಶ್ ಧಂಖರ್ ಅವರು, ಸುಳ್ಳು ಉದ್ಯೋಗ ಜಾಹೀರಾತುಗಳ ಮೂಲಕ ಭೇಟಿಯಾಗಿ, ಐವರು ಮಹಿಳೆಯರಿಗೆ ಮಾದಕವಸ್ತು ನೀಡಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸೋಮವಾರದಂದು ಸಿಡ್ನಿಯ ಡೌನಿಂಗ್ ಸೆಂಟರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದ ತೀರ್ಪುಗಾರರು ಆತನ ವಿರುದ್ಧದ 39 ಆರೋಪಗಳಲ್ಲಿ ಪ್ರತಿಯೊಂದನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅವರು 13 ಅತ್ಯಾಚಾರ ಪ್ರಕರಣಗಳು, 6 ಅತ್ಯಾಚಾರಕ್ಕೆ ಅನುಕೂಲವಾಗುವಂತೆ ಮಾದಕ ವಸ್ತುವನ್ನು ಉದ್ದೇಶಪೂರ್ವಕವಾಗಿ ಸೇವಿಸಿದ ಘಟನೆಗಳು, 17 ಸಂಬಂಧಿಸಿದ ವೀಡಿಯೊಗಳನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿದ ಘಟನೆಗಳು ಮತ್ತು 3 ಅಸಭ್ಯವಾಗಿ ಹಲ್ಲೆಯ ಘಟನೆಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸಿದರು.

ಧಂಖರ್ ಮಹಿಳೆಯರಿಗೆ ವೈನ್ ಅಥವಾ ಐಸ್ ಕ್ರೀಂನಲ್ಲಿ ನಿದ್ರಾಮಾತ್ರೆ ಬೆರಸುತ್ತಿದ್ದನು. ಅವರು ಅದನ್ನು ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಅಲಾರಾಮ ಗಡಿಯಾರದ ಹಿಂದೆ ತನ್ನ ಫೋನ್ ಇಟ್ಟು, ತನ್ನ ಲೈಂಗಿಕ ಕ್ರಿಯೆಯ ವಿಡಿಯೋ ಚಿತ್ರಿಕರಿಸುತ್ತಿದ್ದನು.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ತೀರ್ಪುಗಾರರು, ಆತನ ಲೈಂಗಿಕ ದೌರ್ಜನ್ಯದ ರೆಕಾರ್ಡಿಂಗ್‌ಗಳನ್ನು ವೀಕ್ಷಿಸಬೇಕಾಗಿತ್ತು. ಆ ವೀಡಿಯೊಗಳನ್ನು ವೀಕ್ಷಿಸಿದ ನಂತರ ಅವರು ಆಘಾತಕ್ಕೊಳಗಾದರು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅಕ್ಟೋಬರ್ 2018 ರಲ್ಲಿ ಪೊಲೀಸರು ಧಂಖರ್ಸ್ ಸಿಬಿಡಿ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದಾಗ, ಡಜನ್‌ಗಟ್ಟಲೇ ವಿಡಿಯೋಗಳು ಸಿಕ್ಕಿವೆ. ಆ ವಿಡಿಯೋಗಳಲ್ಲಿ ಪ್ರಜ್ಞಾಹೀನರಾಗಿರುವ ಅಥವಾ ಹೆಣಗಾಡುತ್ತಿರುವ ಮಹಿಳೆಯರ ಲೈಂಗಿಕ ದೌರ್ಜನ್ಯದ ದೃಶ್ಯಗಳಿದ್ದವು. ಆ ವಿಡಿಯೊಗಳನ್ನು ಫೋಲ್ಡರ್‌ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದನ್ನು ಕೊರಿಯನ್ ಮಹಿಳೆಯ ಹೆಸರಿನಲ್ಲಿ ಸೇವ್ ಮಾಡಲಾಗಿದೆ.

ಏತನ್ಮಧ್ಯೆ, 2018 ರಲ್ಲಿ ಧಂಖರ್ ಅವರು ಸಂಘಟನೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿಯ ಆಸ್ಟ್ರೇಲಿಯಾ ಘಟಕ ಹೇಳಿದೆ. ”ಬಾಲೇಶ್ ಧನಕರ್ ಅವರು ಜುಲೈ 2018 ರಲ್ಲಿ OFBJP ಆಸ್ಟ್ರೇಲಿಯಾಕ್ಕೆ ರಾಜೀನಾಮೆ ನೀಡಿದ್ದಾರೆ. ನಾವು ಅವರ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಅವರು ಸಂಪೂರ್ಣ ಕಾನೂನು ಬಲವನ್ನು ಎದುರಿಸಬೇಕು” ಎಂದು ಸಂಘಟನೆ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...