Homeಮುಖಪುಟ'ವಾಸನ್ ಐ ಕೇರ್' ಸಂಸ್ಥಾಪಕ ನಿಧನ: ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿದ ಪೊಲೀಸರು!

‘ವಾಸನ್ ಐ ಕೇರ್’ ಸಂಸ್ಥಾಪಕ ನಿಧನ: ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿದ ಪೊಲೀಸರು!

ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿ ಅವರ ನರಳಾಟ ಕೇಳುತ್ತಿತ್ತು ಎಂದು ಕೆಲ ಸಂಬಂಧಿಕರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೆಸರಾಂತ ಕಣ್ಣಿನ ಆಸ್ಪತ್ರೆ ‘ವಾಸನ್ ಐ ಕೇರ್’ ಸಂಸ್ಥಾಪಕ ಎ.ಎಂ.ಅರುಣ್ ಸೋಮವಾರ ಮೃತಪಟ್ಟಿದ್ದು, ಅವರ ಸಂಬಂಧಿಕರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರಿಂದ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಅರುಣ್ ತಿರುಚ್ಚಿಯಿಂದ ತಮ್ಮ ವೃತ್ತಿಜೀವನ ಆರಂಭಿಸಿದ್ದರು. ಇವರಿಗೆ 51 ವರ್ಷ ವಯಸ್ಸಾಗಿತ್ತು.
ಎ.ಎಂ.ಅರುಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರ ಕುಟುಂಬಸ್ಥರು ಇದು ಅನುಮಾನಾಸ್ಪದ ಸಾವು ಎಂದು ಹೇಳುತ್ತಿದ್ದಾರೆ.

ಪೊಲಿಸರ ಪ್ರಕಾರ, “ಅರುಣ್‌ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ತೇನಾಂಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ಅರುಣ್ ಅವರನ್ನು ಕರೆ ತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು. ಅವರ ಮೃತದೇಹವನ್ನು ಓಮಂದೂರಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

“ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿ ಅವರ ನರಳಾಟ ಕೇಳುತ್ತಿತ್ತು ಎಂದು ಕೆಲ ಸಂಬಂಧಿಕರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧರಿಸಿ ಐಪಿಸಿ ಸೆಕ್ಷನ್ 174ರ ಅನ್ವಯ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಪ್ರಕಾರ, ಆತ್ಮಹತ್ಯೆ ಅಥವಾ ಕೊಲೆಯ ಸಾಧ್ಯತೆ ಕಂಡುಬಂದಿಲ್ಲ. ಸಹಜ ಸಾವು ಸಂಭವಿಸಿದಂತಿದೆ. ಅಟಾಪ್ಸಿ ವರದಿ ಹಾಗೂ ವಿಸ್ಕೆರಾ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌…

ದೇಶದಾದ್ಯಂತ 100ಕ್ಕೂ ಹೆಚ್ಚು ಕಣ್ಣಿನ ಆಸ್ಪತ್ರೆಗಳ ಶಾಖೆಗಳನ್ನು ತೆರೆದಿದ್ದ ಅರುಣ್ ತಿರುಚ್ಚಿಯಲ್ಲಿ ಮೆಡಿಕಲ್ ಶಾಪ್ ಒಂದನ್ನು ನಿರ್ವಹಿಸುತ್ತಿದ್ದರು. ನಂತರ ವಾಸನ್ ಐ ಕೇರ್ ಎಂಬ ಹೆಸರಿನಲ್ಲಿ ಕಣ್ಣಿನ ಆಸ್ಪತ್ರೆ ತೆರೆದಿದ್ದರು. ಕೆಲವೇ ವರ್ಷಗಳಲ್ಲಿ ಇದು ಸಾಕಷ್ಟು ಪ್ರಸಿದ್ಧಿ ಪಡೆಯಿತು. ಹಲವು ಕಡೆ ವಾಸನ್ ಡೆಂಟಲ್ ಕೇರ್ ಕೂಡಾ ಸ್ಥಾಪಿಸಿದ್ದರು. ಸಂಸ್ಥೆಯಲ್ಲಿ 600ಕ್ಕೂ ಹೆಚ್ಚು ಕಣ್ಣಿನ ತಜ್ಞರು ಹಾಗೂ 6 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ.

ಅಮೆರಿಕಾ ಮೂಲದ ಸಂಸ್ಥೆಯಾದ ಫ್ರಾಸ್ಟ್ & ಸುಲ್ಲಿವಾನ್ 2011 ರ ತನ್ನ ಅಧ್ಯಯನದ ವರದಿಯಲ್ಲಿ ಈ ಆಸ್ಪತ್ರೆಯನ್ನು ‘ಗರಿಷ್ಠ ಸ್ವತಂತ್ರ ಶಸ್ತ್ರಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ವಿಶ್ವದ ಅತಿದೊಡ್ಡ ಕಣ್ಣಿನ ಆರೈಕೆಯ ಕೇಂದ್ರ’ ಎಂದು ಹೇಳಿತ್ತು.


ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...