Homeಮುಖಪುಟ'ವಾಸನ್ ಐ ಕೇರ್' ಸಂಸ್ಥಾಪಕ ನಿಧನ: ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿದ ಪೊಲೀಸರು!

‘ವಾಸನ್ ಐ ಕೇರ್’ ಸಂಸ್ಥಾಪಕ ನಿಧನ: ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿದ ಪೊಲೀಸರು!

ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿ ಅವರ ನರಳಾಟ ಕೇಳುತ್ತಿತ್ತು ಎಂದು ಕೆಲ ಸಂಬಂಧಿಕರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೆಸರಾಂತ ಕಣ್ಣಿನ ಆಸ್ಪತ್ರೆ ‘ವಾಸನ್ ಐ ಕೇರ್’ ಸಂಸ್ಥಾಪಕ ಎ.ಎಂ.ಅರುಣ್ ಸೋಮವಾರ ಮೃತಪಟ್ಟಿದ್ದು, ಅವರ ಸಂಬಂಧಿಕರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರಿಂದ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಅರುಣ್ ತಿರುಚ್ಚಿಯಿಂದ ತಮ್ಮ ವೃತ್ತಿಜೀವನ ಆರಂಭಿಸಿದ್ದರು. ಇವರಿಗೆ 51 ವರ್ಷ ವಯಸ್ಸಾಗಿತ್ತು.
ಎ.ಎಂ.ಅರುಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರ ಕುಟುಂಬಸ್ಥರು ಇದು ಅನುಮಾನಾಸ್ಪದ ಸಾವು ಎಂದು ಹೇಳುತ್ತಿದ್ದಾರೆ.

ಪೊಲಿಸರ ಪ್ರಕಾರ, “ಅರುಣ್‌ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ತೇನಾಂಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ಅರುಣ್ ಅವರನ್ನು ಕರೆ ತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು. ಅವರ ಮೃತದೇಹವನ್ನು ಓಮಂದೂರಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

“ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿ ಅವರ ನರಳಾಟ ಕೇಳುತ್ತಿತ್ತು ಎಂದು ಕೆಲ ಸಂಬಂಧಿಕರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧರಿಸಿ ಐಪಿಸಿ ಸೆಕ್ಷನ್ 174ರ ಅನ್ವಯ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಪ್ರಕಾರ, ಆತ್ಮಹತ್ಯೆ ಅಥವಾ ಕೊಲೆಯ ಸಾಧ್ಯತೆ ಕಂಡುಬಂದಿಲ್ಲ. ಸಹಜ ಸಾವು ಸಂಭವಿಸಿದಂತಿದೆ. ಅಟಾಪ್ಸಿ ವರದಿ ಹಾಗೂ ವಿಸ್ಕೆರಾ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌…

ದೇಶದಾದ್ಯಂತ 100ಕ್ಕೂ ಹೆಚ್ಚು ಕಣ್ಣಿನ ಆಸ್ಪತ್ರೆಗಳ ಶಾಖೆಗಳನ್ನು ತೆರೆದಿದ್ದ ಅರುಣ್ ತಿರುಚ್ಚಿಯಲ್ಲಿ ಮೆಡಿಕಲ್ ಶಾಪ್ ಒಂದನ್ನು ನಿರ್ವಹಿಸುತ್ತಿದ್ದರು. ನಂತರ ವಾಸನ್ ಐ ಕೇರ್ ಎಂಬ ಹೆಸರಿನಲ್ಲಿ ಕಣ್ಣಿನ ಆಸ್ಪತ್ರೆ ತೆರೆದಿದ್ದರು. ಕೆಲವೇ ವರ್ಷಗಳಲ್ಲಿ ಇದು ಸಾಕಷ್ಟು ಪ್ರಸಿದ್ಧಿ ಪಡೆಯಿತು. ಹಲವು ಕಡೆ ವಾಸನ್ ಡೆಂಟಲ್ ಕೇರ್ ಕೂಡಾ ಸ್ಥಾಪಿಸಿದ್ದರು. ಸಂಸ್ಥೆಯಲ್ಲಿ 600ಕ್ಕೂ ಹೆಚ್ಚು ಕಣ್ಣಿನ ತಜ್ಞರು ಹಾಗೂ 6 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ.

ಅಮೆರಿಕಾ ಮೂಲದ ಸಂಸ್ಥೆಯಾದ ಫ್ರಾಸ್ಟ್ & ಸುಲ್ಲಿವಾನ್ 2011 ರ ತನ್ನ ಅಧ್ಯಯನದ ವರದಿಯಲ್ಲಿ ಈ ಆಸ್ಪತ್ರೆಯನ್ನು ‘ಗರಿಷ್ಠ ಸ್ವತಂತ್ರ ಶಸ್ತ್ರಚಿಕಿತ್ಸಾ ಕೇಂದ್ರಗಳನ್ನು ಹೊಂದಿರುವ ವಿಶ್ವದ ಅತಿದೊಡ್ಡ ಕಣ್ಣಿನ ಆರೈಕೆಯ ಕೇಂದ್ರ’ ಎಂದು ಹೇಳಿತ್ತು.


ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...