Homeಅಂತರಾಷ್ಟ್ರೀಯಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

- Advertisement -
- Advertisement -

ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಹೊರಗೆ ಪತ್ರಕರ್ತರು ತಂಗಿದ್ದ ಡೇರೆಯ ಮೇಲೆ ನಡೆದ ಇಸ್ರೇಲಿ ದಾಳಿಯ ಪರಿಣಾಮವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಅಲ್ ಜಝೀರಾ ಖಂಡಿಸಿದೆ. ಹತ್ಯೆಗೀಡಾದ ಅನಾಸ್ ಅಲ್-ಶರೀಫ್ (28) ಅವರು ಉತ್ತರ ಗಾಜಾದಲ್ಲಿ ವ್ಯಾಪಕವಾಗಿ ವರದಿ ಮಾಡಿದ್ದರಿಂದ ಅಲ್ಲಿ ಮನೆ ಮಾತಾಗಿದ್ದರು. ಇಸ್ರೇಲ್ ಪಡೆಗಳು ಈ ಪತ್ರಕರ್ತರ ವಿರುದ್ಧ, ವಿಶೇಷವಾಗಿ ಅಲ್-ಶರೀಫ್ ವಿರುದ್ಧ, “ಪ್ರಚೋದನೆಯ ಅಭಿಯಾನ” ನಡೆಸುತ್ತಿದ್ದವು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿದೆ.

ಆದರೆ, ಇಸ್ರೇಲ್ ಸೇನೆಯು ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಾ, ಅಲ್-ಶರೀಫ್ ಹಮಾಸ್ ಕೋಶದ ಮುಖ್ಯಸ್ಥನಾಗಿದ್ದ ಮತ್ತು “ಇಸ್ರೇಲಿ ನಾಗರಿಕರು ಮತ್ತು ಪಡೆಗಳ ವಿರುದ್ಧ ರಾಕೆಟ್ ದಾಳಿಗಳನ್ನು ಉತ್ತೇಜಿಸುತ್ತಿದ್ದ” ಎಂದು ಆರೋಪಿಸಿದೆ. ಈ ಆರೋಪಗಳನ್ನು ಅಲ್ ಜಝೀರಾ ಸಂಪೂರ್ಣವಾಗಿ ನಿರಾಕರಿಸಿದೆ.

ತಮ್ಮ ಹತ್ಯೆಯ ಕೆಲವು ಕ್ಷಣಗಳ ಮೊದಲು, ಅಲ್-ಶರೀಫ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಗಾಜಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳ ಮೇಲೆ ಇಸ್ರೇಲ್ ತೀವ್ರವಾದ ಮತ್ತು ಕೇಂದ್ರೀಕೃತ ಬಾಂಬ್ ದಾಳಿ ನಡೆಸುತ್ತಿದೆ ಎಂದು ಬರೆದಿದ್ದರು. ಈ ಬಾಂಬ್ ದಾಳಿಯನ್ನು “ಫೈರ್ ಬೆಲ್ಟ್‌ಗಳು” ಎಂದೂ ಕರೆಯಲಾಗುತ್ತದೆ. ಅವರ ಕೊನೆಯ ವೀಡಿಯೊದಲ್ಲಿ, ಹಿನ್ನೆಲೆಯಲ್ಲಿ ನಿರಂತರ ಬಾಂಬ್ ದಾಳಿಯ ಶಬ್ದಗಳು ಕೇಳಿಬರುತ್ತಿದ್ದು, ಕತ್ತಲೆ ಆಕಾಶ ಕಿತ್ತಳೆ ಬೆಳಕಿನಿಂದ ಮಿನುಗುತ್ತಿರುವುದು ಕಾಣುತ್ತದೆ. “ಕಳೆದ ಎರಡು ಗಂಟೆಗಳಿಂದ ಗಾಜಾ ನಗರದ ಮೇಲೆ ಇಸ್ರೇಲಿ ಆಕ್ರಮಣ ತೀವ್ರಗೊಂಡಿದೆ” ಎಂದು ಅವರು ಬರೆದಿದ್ದರು.

“ನಾನು ನಿಮಗೆ ಪ್ಯಾಲೆಸ್ಟೈನ್ ಅನ್ನು ಒಪ್ಪಿಸುತ್ತೇನೆ”: ಅನಾಸ್ ಅಲ್-ಶರೀಫ್ ಅವರ ಅಂತಿಮ ಸಂದೇಶ

ಅನಾಸ್ ಅಲ್-ಶರೀಫ್ ಅವರ ಹತ್ಯೆಯ ನಂತರ, ಅವರು ಈ ವರ್ಷದ ಆರಂಭದಲ್ಲಿ ಬರೆದಿದ್ದ ತಮ್ಮ ಅಂತಿಮ ಸಂದೇಶವನ್ನು ಅವರ ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಯಿತು. ಈ ಸಂದೇಶವು ಅವರ ನೋವು, ಕಷ್ಟಗಳು ಮತ್ತು ತಮ್ಮ ಜನರು ಹಾಗೂ ಮಾತೃಭೂಮಿಯ ಮೇಲಿದ್ದ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ.

ಅವರ ಅಂತಿಮ ಸಂದೇಶದ ಪೂರ್ಣ ಪಠ್ಯ ಇಲ್ಲಿದೆ:

“ನನ್ನ ಮಾತುಗಳು ನಿಮ್ಮನ್ನು ತಲುಪಿದರೆ, ಇಸ್ರೇಲ್ ನನ್ನನ್ನು ಕೊಲ್ಲುವಲ್ಲಿ ಮತ್ತು ನನ್ನ ಧ್ವನಿಯನ್ನು ಮೌನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಯಿರಿ. ಮೊದಲಿಗೆ, ನಿಮ್ಮೆಲ್ಲರ ಮೇಲೆ ಶಾಂತಿ, ಕರುಣೆ ಮತ್ತು ಆಶೀರ್ವಾದವಿರಲಿ.

ಜಬಾಲಿಯಾ ನಿರಾಶ್ರಿತರ ಶಿಬಿರದ ಗಲ್ಲಿಗಳಲ್ಲಿ ಮತ್ತು ಬೀದಿಗಳಲ್ಲಿ ನನ್ನ ಬದುಕು ಆರಂಭವಾದಾಗಿನಿಂದ, ನನ್ನ ಜನರಿಗೆ ಧ್ವನಿ ಮತ್ತು ಶಕ್ತಿಯಾಗಿ ನಿಲ್ಲಲು ನಾನು ನನ್ನ ಸರ್ವ ಪ್ರಯತ್ನವನ್ನೂ ಅರ್ಪಿಸಿದ್ದೇನೆ ಎಂದು ಅಲ್ಲಾಹನಿಗೆ ತಿಳಿದಿದೆ. ಅತಿಕ್ರಮಿತ ಭೂಮಿ, ನನ್ನ ಮೂಲ ಪಟ್ಟಣ ಅಸ್ಖಲಾನ್ (ಅಲ್-ಮಜ್ದಲ್)ಗೆ ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಹಿಂತಿರುಗುವ ಆಸೆಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೆ. ಆದರೆ ಅಲ್ಲಾಹನ ಇಚ್ಛೆಯು ಅನಿರೀಕ್ಷಿತವಾಗಿತ್ತು, ಮತ್ತು ಆತನ ತೀರ್ಮಾನವೇ ಅಂತಿಮ. ನೋವಿನ ಎಲ್ಲಾ ರೂಪಗಳನ್ನು ನಾನು ಅನುಭವಿಸಿದ್ದೇನೆ, ದುಃಖ ಮತ್ತು ನಷ್ಟವನ್ನು ಪದೇ ಪದೇ ಕಂಡಿದ್ದೇನೆ. ಆದರೂ, ಸತ್ಯವನ್ನು ಅದು ಇರುವಂತೆಯೇ, ಯಾವುದೇ ಬದಲಾವಣೆ ಅಥವಾ ಸುಳ್ಳಿಲ್ಲದೆ ಹೇಳಲು ನಾನು ಎಂದಿಗೂ ಹಿಂಜರಿಯಲಿಲ್ಲ. ನಮ್ಮ ಹತ್ಯೆಯನ್ನು ಒಪ್ಪಿಕೊಂಡ, ನಮ್ಮ ಉಸಿರುಗಳನ್ನು ಬಂಧಿಸಿದ, ನಮ್ಮ ಮಕ್ಕಳ ಮತ್ತು ಮಹಿಳೆಯರ ಛಿದ್ರಗೊಂಡ ದೇಹಗಳನ್ನು ನೋಡಿಯೂ ಹೃದಯ ಕರಗದ ಮತ್ತು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಮ್ಮ ಜನರ ಮೇಲೆ ನಡೆಯುತ್ತಿರುವ ಈ ಮಾರಣಹೋಮವನ್ನು ನಿಲ್ಲಿಸದವರ ವಿರುದ್ಧ ಅಲ್ಲಾಹನು ಸಾಕ್ಷಿಯಾಗಿರುತ್ತಾನೆ ಎಂದು ನಾನು ನಂಬಿದ್ದೇನೆ.

ನಾನು ಪ್ಯಾಲೆಸ್ಟೈನ್ ಅನ್ನು ನಿಮ್ಮ ಕೈಗೆ ಒಪ್ಪಿಸುತ್ತೇನೆ. ಇದು ಮುಸ್ಲಿಂ ಪ್ರಪಂಚದ ಒಂದು ರತ್ನ ಮತ್ತು ಪ್ರತಿಯೊಬ್ಬ ಸ್ವತಂತ್ರ ಹೃದಯದ ಆಸೆಯಾಗಿದೆ. ಸಾವಿರಾರು ಟನ್‌ಗಳ ಇಸ್ರೇಲಿ ಬಾಂಬ್‌ಗಳಿಂದ ಹರಿದುಹೋದ ಅಮಾಯಕ ಮಕ್ಕಳ ದೇಹಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಯಾವುದೇ ಬಂಧನಗಳು ನಿಮ್ಮನ್ನು ಮೌನವಾಗಿಸಬಾರದು. ನಮ್ಮ ನೆಲ ಮತ್ತು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯ ದೊರೆಯುವವರೆಗೂ ಅವರನ್ನು ಬಿಡುಗಡೆಗೊಳಿಸುವ ಸೇತುವೆಯಾಗಿ ನೀವು ಇರಿ.

ನನ್ನ ಪ್ರೀತಿಯ ಕುಟುಂಬವನ್ನು ನಿಮಗೆ ಒಪ್ಪಿಸುತ್ತಿದ್ದೇನೆ. ನನ್ನ ಕಣ್ಣಿನ ದೃಷ್ಟಿಯಂತಿದ್ದ ಮಗಳು ಶಮ್ಳನ್ನು ನಿಮಗೆ ವಹಿಸುತ್ತಿದ್ದೇನೆ, ಅವಳು ಬೆಳೆಯುವುದನ್ನು ನೋಡುವ ಆಸೆ ನನಗೆ ಈಡೇರಲಿಲ್ಲ. ನನ್ನ ಮಗ ಸಲಾಹ್‌ನನ್ನು ನಿಮಗೆ ಒಪ್ಪಿಸುತ್ತೇನೆ, ಅವನು ನನ್ನ ಜವಾಬ್ದಾರಿಯನ್ನು ಹೊರುವಷ್ಟು ಶಕ್ತಿಯುತನಾಗುವವರೆಗೆ ನಾನು ಅವನ ಬೆಂಬಲಕ್ಕೆ ನಿಲ್ಲಬೇಕಿತ್ತು.

ನನ್ನ ಶಕ್ತಿಯಾಗಿದ್ದ ಪ್ರೀತಿಯ ತಾಯಿಯನ್ನು, ಅವರ ಪ್ರಾರ್ಥನೆಗಳು ನನ್ನನ್ನು ಕಾಪಾಡಿದವು, ನಿಮಗೆ ಒಪ್ಪಿಸುತ್ತೇನೆ. ಜೀವನದುದ್ದಕ್ಕೂ ನನ್ನ ಜೊತೆಗಿದ್ದ ನನ್ನ ಪತ್ನಿ ಬಯಾನ್ಳನ್ನು ನಿಮಗೆ ವಹಿಸುತ್ತೇನೆ. ಯುದ್ಧವು ನಮ್ಮನ್ನು ದೂರಮಾಡಿದರೂ, ಅವಳು ದೃಢವಾಗಿ ಮತ್ತು ನಿಷ್ಠೆಯಿಂದ ಕುಟುಂಬವನ್ನು ನೋಡಿಕೊಂಡಳು. ದಯವಿಟ್ಟು ನೀವು ಎಲ್ಲರೂ ಸೇರಿ, ಅವರಿಗೆ ಅಲ್ಲಾಹನ ನಂತರ ದೊಡ್ಡ ಬೆಂಬಲವಾಗಿರಿ.

ನನ್ನ ಅಂತ್ಯ ಸಂಭವಿಸಿದರೆ, ನನ್ನ ತತ್ವಗಳಿಗೆ ಬದ್ಧನಾಗಿ ಈ ಜಗತ್ತನ್ನು ಬಿಡುತ್ತೇನೆ. ಅಲ್ಲಾಹನ ಇಚ್ಛೆಯಿಂದ ನಾನು ತೃಪ್ತನಾಗಿದ್ದೇನೆ ಮತ್ತು ಆತನನ್ನು ಸೇರುವುದು ಶಾಶ್ವತ ಶಾಂತಿಯ ದಾರಿ ಎಂದು ನಾನು ನಂಬಿದ್ದೇನೆ.

ಓ ಅಲ್ಲಾಹ್, ನನ್ನನ್ನು ಹುತಾತ್ಮನಾಗಿ ಸ್ವೀಕರಿಸು. ನನ್ನ ಭೂತ ಮತ್ತು ಭವಿಷ್ಯದ ಪಾಪಗಳನ್ನು ಕ್ಷಮಿಸು. ನನ್ನ ರಕ್ತದ ಹನಿಯು ನನ್ನ ಜನ ಮತ್ತು ಕುಟುಂಬದ ಸ್ವಾತಂತ್ರ್ಯಕ್ಕಾಗಿ ಪ್ರಕಾಶಿಸುವ ಬೆಳಕಾಗಲಿ. ಒಂದು ವೇಳೆ ನಾನು ಎಲ್ಲಿಯಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸು. ನನ್ನ ಒಡಂಬಡಿಕೆಗೆ ನಾನು ಸದಾ ನಿಷ್ಠನಾಗಿದ್ದೇನೆ. ಗಾಜಾವನ್ನು ಮರೆಯಬೇಡಿ… ಮತ್ತು ನಿಮ್ಮ ಒಳ್ಳೆಯ ಪ್ರಾರ್ಥನೆಗಳಲ್ಲಿ ನನ್ನನ್ನು ದಯೆಯಿಂದ ನೆನಪಿಸಿಕೊಳ್ಳಿ.

ಅನಾಸ್ ಅಲ್-ಶರೀಫ್

06.04.2025″

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...