Homeಅಂತರಾಷ್ಟ್ರೀಯಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

- Advertisement -
- Advertisement -

ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಹೊರಗೆ ಪತ್ರಕರ್ತರು ತಂಗಿದ್ದ ಡೇರೆಯ ಮೇಲೆ ನಡೆದ ಇಸ್ರೇಲಿ ದಾಳಿಯ ಪರಿಣಾಮವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಅಲ್ ಜಝೀರಾ ಖಂಡಿಸಿದೆ. ಹತ್ಯೆಗೀಡಾದ ಅನಾಸ್ ಅಲ್-ಶರೀಫ್ (28) ಅವರು ಉತ್ತರ ಗಾಜಾದಲ್ಲಿ ವ್ಯಾಪಕವಾಗಿ ವರದಿ ಮಾಡಿದ್ದರಿಂದ ಅಲ್ಲಿ ಮನೆ ಮಾತಾಗಿದ್ದರು. ಇಸ್ರೇಲ್ ಪಡೆಗಳು ಈ ಪತ್ರಕರ್ತರ ವಿರುದ್ಧ, ವಿಶೇಷವಾಗಿ ಅಲ್-ಶರೀಫ್ ವಿರುದ್ಧ, “ಪ್ರಚೋದನೆಯ ಅಭಿಯಾನ” ನಡೆಸುತ್ತಿದ್ದವು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿದೆ.

ಆದರೆ, ಇಸ್ರೇಲ್ ಸೇನೆಯು ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಾ, ಅಲ್-ಶರೀಫ್ ಹಮಾಸ್ ಕೋಶದ ಮುಖ್ಯಸ್ಥನಾಗಿದ್ದ ಮತ್ತು “ಇಸ್ರೇಲಿ ನಾಗರಿಕರು ಮತ್ತು ಪಡೆಗಳ ವಿರುದ್ಧ ರಾಕೆಟ್ ದಾಳಿಗಳನ್ನು ಉತ್ತೇಜಿಸುತ್ತಿದ್ದ” ಎಂದು ಆರೋಪಿಸಿದೆ. ಈ ಆರೋಪಗಳನ್ನು ಅಲ್ ಜಝೀರಾ ಸಂಪೂರ್ಣವಾಗಿ ನಿರಾಕರಿಸಿದೆ.

ತಮ್ಮ ಹತ್ಯೆಯ ಕೆಲವು ಕ್ಷಣಗಳ ಮೊದಲು, ಅಲ್-ಶರೀಫ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಗಾಜಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳ ಮೇಲೆ ಇಸ್ರೇಲ್ ತೀವ್ರವಾದ ಮತ್ತು ಕೇಂದ್ರೀಕೃತ ಬಾಂಬ್ ದಾಳಿ ನಡೆಸುತ್ತಿದೆ ಎಂದು ಬರೆದಿದ್ದರು. ಈ ಬಾಂಬ್ ದಾಳಿಯನ್ನು “ಫೈರ್ ಬೆಲ್ಟ್‌ಗಳು” ಎಂದೂ ಕರೆಯಲಾಗುತ್ತದೆ. ಅವರ ಕೊನೆಯ ವೀಡಿಯೊದಲ್ಲಿ, ಹಿನ್ನೆಲೆಯಲ್ಲಿ ನಿರಂತರ ಬಾಂಬ್ ದಾಳಿಯ ಶಬ್ದಗಳು ಕೇಳಿಬರುತ್ತಿದ್ದು, ಕತ್ತಲೆ ಆಕಾಶ ಕಿತ್ತಳೆ ಬೆಳಕಿನಿಂದ ಮಿನುಗುತ್ತಿರುವುದು ಕಾಣುತ್ತದೆ. “ಕಳೆದ ಎರಡು ಗಂಟೆಗಳಿಂದ ಗಾಜಾ ನಗರದ ಮೇಲೆ ಇಸ್ರೇಲಿ ಆಕ್ರಮಣ ತೀವ್ರಗೊಂಡಿದೆ” ಎಂದು ಅವರು ಬರೆದಿದ್ದರು.

“ನಾನು ನಿಮಗೆ ಪ್ಯಾಲೆಸ್ಟೈನ್ ಅನ್ನು ಒಪ್ಪಿಸುತ್ತೇನೆ”: ಅನಾಸ್ ಅಲ್-ಶರೀಫ್ ಅವರ ಅಂತಿಮ ಸಂದೇಶ

ಅನಾಸ್ ಅಲ್-ಶರೀಫ್ ಅವರ ಹತ್ಯೆಯ ನಂತರ, ಅವರು ಈ ವರ್ಷದ ಆರಂಭದಲ್ಲಿ ಬರೆದಿದ್ದ ತಮ್ಮ ಅಂತಿಮ ಸಂದೇಶವನ್ನು ಅವರ ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಯಿತು. ಈ ಸಂದೇಶವು ಅವರ ನೋವು, ಕಷ್ಟಗಳು ಮತ್ತು ತಮ್ಮ ಜನರು ಹಾಗೂ ಮಾತೃಭೂಮಿಯ ಮೇಲಿದ್ದ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ.

ಅವರ ಅಂತಿಮ ಸಂದೇಶದ ಪೂರ್ಣ ಪಠ್ಯ ಇಲ್ಲಿದೆ:

“ನನ್ನ ಮಾತುಗಳು ನಿಮ್ಮನ್ನು ತಲುಪಿದರೆ, ಇಸ್ರೇಲ್ ನನ್ನನ್ನು ಕೊಲ್ಲುವಲ್ಲಿ ಮತ್ತು ನನ್ನ ಧ್ವನಿಯನ್ನು ಮೌನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಯಿರಿ. ಮೊದಲಿಗೆ, ನಿಮ್ಮೆಲ್ಲರ ಮೇಲೆ ಶಾಂತಿ, ಕರುಣೆ ಮತ್ತು ಆಶೀರ್ವಾದವಿರಲಿ.

ಜಬಾಲಿಯಾ ನಿರಾಶ್ರಿತರ ಶಿಬಿರದ ಗಲ್ಲಿಗಳಲ್ಲಿ ಮತ್ತು ಬೀದಿಗಳಲ್ಲಿ ನನ್ನ ಬದುಕು ಆರಂಭವಾದಾಗಿನಿಂದ, ನನ್ನ ಜನರಿಗೆ ಧ್ವನಿ ಮತ್ತು ಶಕ್ತಿಯಾಗಿ ನಿಲ್ಲಲು ನಾನು ನನ್ನ ಸರ್ವ ಪ್ರಯತ್ನವನ್ನೂ ಅರ್ಪಿಸಿದ್ದೇನೆ ಎಂದು ಅಲ್ಲಾಹನಿಗೆ ತಿಳಿದಿದೆ. ಅತಿಕ್ರಮಿತ ಭೂಮಿ, ನನ್ನ ಮೂಲ ಪಟ್ಟಣ ಅಸ್ಖಲಾನ್ (ಅಲ್-ಮಜ್ದಲ್)ಗೆ ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಹಿಂತಿರುಗುವ ಆಸೆಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೆ. ಆದರೆ ಅಲ್ಲಾಹನ ಇಚ್ಛೆಯು ಅನಿರೀಕ್ಷಿತವಾಗಿತ್ತು, ಮತ್ತು ಆತನ ತೀರ್ಮಾನವೇ ಅಂತಿಮ. ನೋವಿನ ಎಲ್ಲಾ ರೂಪಗಳನ್ನು ನಾನು ಅನುಭವಿಸಿದ್ದೇನೆ, ದುಃಖ ಮತ್ತು ನಷ್ಟವನ್ನು ಪದೇ ಪದೇ ಕಂಡಿದ್ದೇನೆ. ಆದರೂ, ಸತ್ಯವನ್ನು ಅದು ಇರುವಂತೆಯೇ, ಯಾವುದೇ ಬದಲಾವಣೆ ಅಥವಾ ಸುಳ್ಳಿಲ್ಲದೆ ಹೇಳಲು ನಾನು ಎಂದಿಗೂ ಹಿಂಜರಿಯಲಿಲ್ಲ. ನಮ್ಮ ಹತ್ಯೆಯನ್ನು ಒಪ್ಪಿಕೊಂಡ, ನಮ್ಮ ಉಸಿರುಗಳನ್ನು ಬಂಧಿಸಿದ, ನಮ್ಮ ಮಕ್ಕಳ ಮತ್ತು ಮಹಿಳೆಯರ ಛಿದ್ರಗೊಂಡ ದೇಹಗಳನ್ನು ನೋಡಿಯೂ ಹೃದಯ ಕರಗದ ಮತ್ತು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಮ್ಮ ಜನರ ಮೇಲೆ ನಡೆಯುತ್ತಿರುವ ಈ ಮಾರಣಹೋಮವನ್ನು ನಿಲ್ಲಿಸದವರ ವಿರುದ್ಧ ಅಲ್ಲಾಹನು ಸಾಕ್ಷಿಯಾಗಿರುತ್ತಾನೆ ಎಂದು ನಾನು ನಂಬಿದ್ದೇನೆ.

ನಾನು ಪ್ಯಾಲೆಸ್ಟೈನ್ ಅನ್ನು ನಿಮ್ಮ ಕೈಗೆ ಒಪ್ಪಿಸುತ್ತೇನೆ. ಇದು ಮುಸ್ಲಿಂ ಪ್ರಪಂಚದ ಒಂದು ರತ್ನ ಮತ್ತು ಪ್ರತಿಯೊಬ್ಬ ಸ್ವತಂತ್ರ ಹೃದಯದ ಆಸೆಯಾಗಿದೆ. ಸಾವಿರಾರು ಟನ್‌ಗಳ ಇಸ್ರೇಲಿ ಬಾಂಬ್‌ಗಳಿಂದ ಹರಿದುಹೋದ ಅಮಾಯಕ ಮಕ್ಕಳ ದೇಹಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಯಾವುದೇ ಬಂಧನಗಳು ನಿಮ್ಮನ್ನು ಮೌನವಾಗಿಸಬಾರದು. ನಮ್ಮ ನೆಲ ಮತ್ತು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯ ದೊರೆಯುವವರೆಗೂ ಅವರನ್ನು ಬಿಡುಗಡೆಗೊಳಿಸುವ ಸೇತುವೆಯಾಗಿ ನೀವು ಇರಿ.

ನನ್ನ ಪ್ರೀತಿಯ ಕುಟುಂಬವನ್ನು ನಿಮಗೆ ಒಪ್ಪಿಸುತ್ತಿದ್ದೇನೆ. ನನ್ನ ಕಣ್ಣಿನ ದೃಷ್ಟಿಯಂತಿದ್ದ ಮಗಳು ಶಮ್ಳನ್ನು ನಿಮಗೆ ವಹಿಸುತ್ತಿದ್ದೇನೆ, ಅವಳು ಬೆಳೆಯುವುದನ್ನು ನೋಡುವ ಆಸೆ ನನಗೆ ಈಡೇರಲಿಲ್ಲ. ನನ್ನ ಮಗ ಸಲಾಹ್‌ನನ್ನು ನಿಮಗೆ ಒಪ್ಪಿಸುತ್ತೇನೆ, ಅವನು ನನ್ನ ಜವಾಬ್ದಾರಿಯನ್ನು ಹೊರುವಷ್ಟು ಶಕ್ತಿಯುತನಾಗುವವರೆಗೆ ನಾನು ಅವನ ಬೆಂಬಲಕ್ಕೆ ನಿಲ್ಲಬೇಕಿತ್ತು.

ನನ್ನ ಶಕ್ತಿಯಾಗಿದ್ದ ಪ್ರೀತಿಯ ತಾಯಿಯನ್ನು, ಅವರ ಪ್ರಾರ್ಥನೆಗಳು ನನ್ನನ್ನು ಕಾಪಾಡಿದವು, ನಿಮಗೆ ಒಪ್ಪಿಸುತ್ತೇನೆ. ಜೀವನದುದ್ದಕ್ಕೂ ನನ್ನ ಜೊತೆಗಿದ್ದ ನನ್ನ ಪತ್ನಿ ಬಯಾನ್ಳನ್ನು ನಿಮಗೆ ವಹಿಸುತ್ತೇನೆ. ಯುದ್ಧವು ನಮ್ಮನ್ನು ದೂರಮಾಡಿದರೂ, ಅವಳು ದೃಢವಾಗಿ ಮತ್ತು ನಿಷ್ಠೆಯಿಂದ ಕುಟುಂಬವನ್ನು ನೋಡಿಕೊಂಡಳು. ದಯವಿಟ್ಟು ನೀವು ಎಲ್ಲರೂ ಸೇರಿ, ಅವರಿಗೆ ಅಲ್ಲಾಹನ ನಂತರ ದೊಡ್ಡ ಬೆಂಬಲವಾಗಿರಿ.

ನನ್ನ ಅಂತ್ಯ ಸಂಭವಿಸಿದರೆ, ನನ್ನ ತತ್ವಗಳಿಗೆ ಬದ್ಧನಾಗಿ ಈ ಜಗತ್ತನ್ನು ಬಿಡುತ್ತೇನೆ. ಅಲ್ಲಾಹನ ಇಚ್ಛೆಯಿಂದ ನಾನು ತೃಪ್ತನಾಗಿದ್ದೇನೆ ಮತ್ತು ಆತನನ್ನು ಸೇರುವುದು ಶಾಶ್ವತ ಶಾಂತಿಯ ದಾರಿ ಎಂದು ನಾನು ನಂಬಿದ್ದೇನೆ.

ಓ ಅಲ್ಲಾಹ್, ನನ್ನನ್ನು ಹುತಾತ್ಮನಾಗಿ ಸ್ವೀಕರಿಸು. ನನ್ನ ಭೂತ ಮತ್ತು ಭವಿಷ್ಯದ ಪಾಪಗಳನ್ನು ಕ್ಷಮಿಸು. ನನ್ನ ರಕ್ತದ ಹನಿಯು ನನ್ನ ಜನ ಮತ್ತು ಕುಟುಂಬದ ಸ್ವಾತಂತ್ರ್ಯಕ್ಕಾಗಿ ಪ್ರಕಾಶಿಸುವ ಬೆಳಕಾಗಲಿ. ಒಂದು ವೇಳೆ ನಾನು ಎಲ್ಲಿಯಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸು. ನನ್ನ ಒಡಂಬಡಿಕೆಗೆ ನಾನು ಸದಾ ನಿಷ್ಠನಾಗಿದ್ದೇನೆ. ಗಾಜಾವನ್ನು ಮರೆಯಬೇಡಿ… ಮತ್ತು ನಿಮ್ಮ ಒಳ್ಳೆಯ ಪ್ರಾರ್ಥನೆಗಳಲ್ಲಿ ನನ್ನನ್ನು ದಯೆಯಿಂದ ನೆನಪಿಸಿಕೊಳ್ಳಿ.

ಅನಾಸ್ ಅಲ್-ಶರೀಫ್

06.04.2025″

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...