Homeಅಂತರಾಷ್ಟ್ರೀಯಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

- Advertisement -
- Advertisement -

ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಹೊರಗೆ ಪತ್ರಕರ್ತರು ತಂಗಿದ್ದ ಡೇರೆಯ ಮೇಲೆ ನಡೆದ ಇಸ್ರೇಲಿ ದಾಳಿಯ ಪರಿಣಾಮವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಅಲ್ ಜಝೀರಾ ಖಂಡಿಸಿದೆ. ಹತ್ಯೆಗೀಡಾದ ಅನಾಸ್ ಅಲ್-ಶರೀಫ್ (28) ಅವರು ಉತ್ತರ ಗಾಜಾದಲ್ಲಿ ವ್ಯಾಪಕವಾಗಿ ವರದಿ ಮಾಡಿದ್ದರಿಂದ ಅಲ್ಲಿ ಮನೆ ಮಾತಾಗಿದ್ದರು. ಇಸ್ರೇಲ್ ಪಡೆಗಳು ಈ ಪತ್ರಕರ್ತರ ವಿರುದ್ಧ, ವಿಶೇಷವಾಗಿ ಅಲ್-ಶರೀಫ್ ವಿರುದ್ಧ, “ಪ್ರಚೋದನೆಯ ಅಭಿಯಾನ” ನಡೆಸುತ್ತಿದ್ದವು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿದೆ.

ಆದರೆ, ಇಸ್ರೇಲ್ ಸೇನೆಯು ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಾ, ಅಲ್-ಶರೀಫ್ ಹಮಾಸ್ ಕೋಶದ ಮುಖ್ಯಸ್ಥನಾಗಿದ್ದ ಮತ್ತು “ಇಸ್ರೇಲಿ ನಾಗರಿಕರು ಮತ್ತು ಪಡೆಗಳ ವಿರುದ್ಧ ರಾಕೆಟ್ ದಾಳಿಗಳನ್ನು ಉತ್ತೇಜಿಸುತ್ತಿದ್ದ” ಎಂದು ಆರೋಪಿಸಿದೆ. ಈ ಆರೋಪಗಳನ್ನು ಅಲ್ ಜಝೀರಾ ಸಂಪೂರ್ಣವಾಗಿ ನಿರಾಕರಿಸಿದೆ.

ತಮ್ಮ ಹತ್ಯೆಯ ಕೆಲವು ಕ್ಷಣಗಳ ಮೊದಲು, ಅಲ್-ಶರೀಫ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಗಾಜಾ ನಗರದ ಪೂರ್ವ ಮತ್ತು ದಕ್ಷಿಣ ಭಾಗಗಳ ಮೇಲೆ ಇಸ್ರೇಲ್ ತೀವ್ರವಾದ ಮತ್ತು ಕೇಂದ್ರೀಕೃತ ಬಾಂಬ್ ದಾಳಿ ನಡೆಸುತ್ತಿದೆ ಎಂದು ಬರೆದಿದ್ದರು. ಈ ಬಾಂಬ್ ದಾಳಿಯನ್ನು “ಫೈರ್ ಬೆಲ್ಟ್‌ಗಳು” ಎಂದೂ ಕರೆಯಲಾಗುತ್ತದೆ. ಅವರ ಕೊನೆಯ ವೀಡಿಯೊದಲ್ಲಿ, ಹಿನ್ನೆಲೆಯಲ್ಲಿ ನಿರಂತರ ಬಾಂಬ್ ದಾಳಿಯ ಶಬ್ದಗಳು ಕೇಳಿಬರುತ್ತಿದ್ದು, ಕತ್ತಲೆ ಆಕಾಶ ಕಿತ್ತಳೆ ಬೆಳಕಿನಿಂದ ಮಿನುಗುತ್ತಿರುವುದು ಕಾಣುತ್ತದೆ. “ಕಳೆದ ಎರಡು ಗಂಟೆಗಳಿಂದ ಗಾಜಾ ನಗರದ ಮೇಲೆ ಇಸ್ರೇಲಿ ಆಕ್ರಮಣ ತೀವ್ರಗೊಂಡಿದೆ” ಎಂದು ಅವರು ಬರೆದಿದ್ದರು.

“ನಾನು ನಿಮಗೆ ಪ್ಯಾಲೆಸ್ಟೈನ್ ಅನ್ನು ಒಪ್ಪಿಸುತ್ತೇನೆ”: ಅನಾಸ್ ಅಲ್-ಶರೀಫ್ ಅವರ ಅಂತಿಮ ಸಂದೇಶ

ಅನಾಸ್ ಅಲ್-ಶರೀಫ್ ಅವರ ಹತ್ಯೆಯ ನಂತರ, ಅವರು ಈ ವರ್ಷದ ಆರಂಭದಲ್ಲಿ ಬರೆದಿದ್ದ ತಮ್ಮ ಅಂತಿಮ ಸಂದೇಶವನ್ನು ಅವರ ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಯಿತು. ಈ ಸಂದೇಶವು ಅವರ ನೋವು, ಕಷ್ಟಗಳು ಮತ್ತು ತಮ್ಮ ಜನರು ಹಾಗೂ ಮಾತೃಭೂಮಿಯ ಮೇಲಿದ್ದ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ.

ಅವರ ಅಂತಿಮ ಸಂದೇಶದ ಪೂರ್ಣ ಪಠ್ಯ ಇಲ್ಲಿದೆ:

“ನನ್ನ ಮಾತುಗಳು ನಿಮ್ಮನ್ನು ತಲುಪಿದರೆ, ಇಸ್ರೇಲ್ ನನ್ನನ್ನು ಕೊಲ್ಲುವಲ್ಲಿ ಮತ್ತು ನನ್ನ ಧ್ವನಿಯನ್ನು ಮೌನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಯಿರಿ. ಮೊದಲಿಗೆ, ನಿಮ್ಮೆಲ್ಲರ ಮೇಲೆ ಶಾಂತಿ, ಕರುಣೆ ಮತ್ತು ಆಶೀರ್ವಾದವಿರಲಿ.

ಜಬಾಲಿಯಾ ನಿರಾಶ್ರಿತರ ಶಿಬಿರದ ಗಲ್ಲಿಗಳಲ್ಲಿ ಮತ್ತು ಬೀದಿಗಳಲ್ಲಿ ನನ್ನ ಬದುಕು ಆರಂಭವಾದಾಗಿನಿಂದ, ನನ್ನ ಜನರಿಗೆ ಧ್ವನಿ ಮತ್ತು ಶಕ್ತಿಯಾಗಿ ನಿಲ್ಲಲು ನಾನು ನನ್ನ ಸರ್ವ ಪ್ರಯತ್ನವನ್ನೂ ಅರ್ಪಿಸಿದ್ದೇನೆ ಎಂದು ಅಲ್ಲಾಹನಿಗೆ ತಿಳಿದಿದೆ. ಅತಿಕ್ರಮಿತ ಭೂಮಿ, ನನ್ನ ಮೂಲ ಪಟ್ಟಣ ಅಸ್ಖಲಾನ್ (ಅಲ್-ಮಜ್ದಲ್)ಗೆ ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಹಿಂತಿರುಗುವ ಆಸೆಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೆ. ಆದರೆ ಅಲ್ಲಾಹನ ಇಚ್ಛೆಯು ಅನಿರೀಕ್ಷಿತವಾಗಿತ್ತು, ಮತ್ತು ಆತನ ತೀರ್ಮಾನವೇ ಅಂತಿಮ. ನೋವಿನ ಎಲ್ಲಾ ರೂಪಗಳನ್ನು ನಾನು ಅನುಭವಿಸಿದ್ದೇನೆ, ದುಃಖ ಮತ್ತು ನಷ್ಟವನ್ನು ಪದೇ ಪದೇ ಕಂಡಿದ್ದೇನೆ. ಆದರೂ, ಸತ್ಯವನ್ನು ಅದು ಇರುವಂತೆಯೇ, ಯಾವುದೇ ಬದಲಾವಣೆ ಅಥವಾ ಸುಳ್ಳಿಲ್ಲದೆ ಹೇಳಲು ನಾನು ಎಂದಿಗೂ ಹಿಂಜರಿಯಲಿಲ್ಲ. ನಮ್ಮ ಹತ್ಯೆಯನ್ನು ಒಪ್ಪಿಕೊಂಡ, ನಮ್ಮ ಉಸಿರುಗಳನ್ನು ಬಂಧಿಸಿದ, ನಮ್ಮ ಮಕ್ಕಳ ಮತ್ತು ಮಹಿಳೆಯರ ಛಿದ್ರಗೊಂಡ ದೇಹಗಳನ್ನು ನೋಡಿಯೂ ಹೃದಯ ಕರಗದ ಮತ್ತು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಮ್ಮ ಜನರ ಮೇಲೆ ನಡೆಯುತ್ತಿರುವ ಈ ಮಾರಣಹೋಮವನ್ನು ನಿಲ್ಲಿಸದವರ ವಿರುದ್ಧ ಅಲ್ಲಾಹನು ಸಾಕ್ಷಿಯಾಗಿರುತ್ತಾನೆ ಎಂದು ನಾನು ನಂಬಿದ್ದೇನೆ.

ನಾನು ಪ್ಯಾಲೆಸ್ಟೈನ್ ಅನ್ನು ನಿಮ್ಮ ಕೈಗೆ ಒಪ್ಪಿಸುತ್ತೇನೆ. ಇದು ಮುಸ್ಲಿಂ ಪ್ರಪಂಚದ ಒಂದು ರತ್ನ ಮತ್ತು ಪ್ರತಿಯೊಬ್ಬ ಸ್ವತಂತ್ರ ಹೃದಯದ ಆಸೆಯಾಗಿದೆ. ಸಾವಿರಾರು ಟನ್‌ಗಳ ಇಸ್ರೇಲಿ ಬಾಂಬ್‌ಗಳಿಂದ ಹರಿದುಹೋದ ಅಮಾಯಕ ಮಕ್ಕಳ ದೇಹಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಯಾವುದೇ ಬಂಧನಗಳು ನಿಮ್ಮನ್ನು ಮೌನವಾಗಿಸಬಾರದು. ನಮ್ಮ ನೆಲ ಮತ್ತು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯ ದೊರೆಯುವವರೆಗೂ ಅವರನ್ನು ಬಿಡುಗಡೆಗೊಳಿಸುವ ಸೇತುವೆಯಾಗಿ ನೀವು ಇರಿ.

ನನ್ನ ಪ್ರೀತಿಯ ಕುಟುಂಬವನ್ನು ನಿಮಗೆ ಒಪ್ಪಿಸುತ್ತಿದ್ದೇನೆ. ನನ್ನ ಕಣ್ಣಿನ ದೃಷ್ಟಿಯಂತಿದ್ದ ಮಗಳು ಶಮ್ಳನ್ನು ನಿಮಗೆ ವಹಿಸುತ್ತಿದ್ದೇನೆ, ಅವಳು ಬೆಳೆಯುವುದನ್ನು ನೋಡುವ ಆಸೆ ನನಗೆ ಈಡೇರಲಿಲ್ಲ. ನನ್ನ ಮಗ ಸಲಾಹ್‌ನನ್ನು ನಿಮಗೆ ಒಪ್ಪಿಸುತ್ತೇನೆ, ಅವನು ನನ್ನ ಜವಾಬ್ದಾರಿಯನ್ನು ಹೊರುವಷ್ಟು ಶಕ್ತಿಯುತನಾಗುವವರೆಗೆ ನಾನು ಅವನ ಬೆಂಬಲಕ್ಕೆ ನಿಲ್ಲಬೇಕಿತ್ತು.

ನನ್ನ ಶಕ್ತಿಯಾಗಿದ್ದ ಪ್ರೀತಿಯ ತಾಯಿಯನ್ನು, ಅವರ ಪ್ರಾರ್ಥನೆಗಳು ನನ್ನನ್ನು ಕಾಪಾಡಿದವು, ನಿಮಗೆ ಒಪ್ಪಿಸುತ್ತೇನೆ. ಜೀವನದುದ್ದಕ್ಕೂ ನನ್ನ ಜೊತೆಗಿದ್ದ ನನ್ನ ಪತ್ನಿ ಬಯಾನ್ಳನ್ನು ನಿಮಗೆ ವಹಿಸುತ್ತೇನೆ. ಯುದ್ಧವು ನಮ್ಮನ್ನು ದೂರಮಾಡಿದರೂ, ಅವಳು ದೃಢವಾಗಿ ಮತ್ತು ನಿಷ್ಠೆಯಿಂದ ಕುಟುಂಬವನ್ನು ನೋಡಿಕೊಂಡಳು. ದಯವಿಟ್ಟು ನೀವು ಎಲ್ಲರೂ ಸೇರಿ, ಅವರಿಗೆ ಅಲ್ಲಾಹನ ನಂತರ ದೊಡ್ಡ ಬೆಂಬಲವಾಗಿರಿ.

ನನ್ನ ಅಂತ್ಯ ಸಂಭವಿಸಿದರೆ, ನನ್ನ ತತ್ವಗಳಿಗೆ ಬದ್ಧನಾಗಿ ಈ ಜಗತ್ತನ್ನು ಬಿಡುತ್ತೇನೆ. ಅಲ್ಲಾಹನ ಇಚ್ಛೆಯಿಂದ ನಾನು ತೃಪ್ತನಾಗಿದ್ದೇನೆ ಮತ್ತು ಆತನನ್ನು ಸೇರುವುದು ಶಾಶ್ವತ ಶಾಂತಿಯ ದಾರಿ ಎಂದು ನಾನು ನಂಬಿದ್ದೇನೆ.

ಓ ಅಲ್ಲಾಹ್, ನನ್ನನ್ನು ಹುತಾತ್ಮನಾಗಿ ಸ್ವೀಕರಿಸು. ನನ್ನ ಭೂತ ಮತ್ತು ಭವಿಷ್ಯದ ಪಾಪಗಳನ್ನು ಕ್ಷಮಿಸು. ನನ್ನ ರಕ್ತದ ಹನಿಯು ನನ್ನ ಜನ ಮತ್ತು ಕುಟುಂಬದ ಸ್ವಾತಂತ್ರ್ಯಕ್ಕಾಗಿ ಪ್ರಕಾಶಿಸುವ ಬೆಳಕಾಗಲಿ. ಒಂದು ವೇಳೆ ನಾನು ಎಲ್ಲಿಯಾದರೂ ತಪ್ಪು ಮಾಡಿದ್ದರೆ ನನ್ನನ್ನು ಕ್ಷಮಿಸು. ನನ್ನ ಒಡಂಬಡಿಕೆಗೆ ನಾನು ಸದಾ ನಿಷ್ಠನಾಗಿದ್ದೇನೆ. ಗಾಜಾವನ್ನು ಮರೆಯಬೇಡಿ… ಮತ್ತು ನಿಮ್ಮ ಒಳ್ಳೆಯ ಪ್ರಾರ್ಥನೆಗಳಲ್ಲಿ ನನ್ನನ್ನು ದಯೆಯಿಂದ ನೆನಪಿಸಿಕೊಳ್ಳಿ.

ಅನಾಸ್ ಅಲ್-ಶರೀಫ್

06.04.2025″

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ರಾಹುಲ್ ಗಾಂಧಿಯಿಂದ ದಾಖಲೆ ಕೇಳಿದ ರಾಜ್ಯ ಚುನಾವಣಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...