Homeಮುಖಪುಟಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

ಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್ (41), ಯೋಗೇಶ್ ಕುಲಕರ್ಣಿ (57), ಸಾಗರ್ ಸಂಗ್ವಾಯ್ (37) ಮತ್ತು ಜಾಫರ್ ಅಹ್ಮದ್ ರಶೀದ್ ಅಹ್ಮದ್ ಉಸ್ಮಾನಿ (53) ಎಂದು ಗುರುತಿಸಲಾಗಿದೆ.

ದೌಂಡ್‌ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು, ತಮ್ಮ ಆಪ್ತ ಸಹಾಯಕನಿಗೆ ಜುಲೈ 16 ರಂದು ತನ್ನನ್ನು ರಿಯಾಜ್ ಶೇಖ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದರು. ಅವರು ದೂರು ನೀಡಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ಸಚಿವ ಸ್ಥಾನ ನೀಡುವ ಬಗ್ಗೆಗಿನ ಪ್ರಸ್ತಾಪವನ್ನು ಚರ್ಚಿಸಲು ಕುಲ್ ಅವರನ್ನು ಭೇಟಿಯಾಗಲು ಬಯಸುವುದಾಗಿ ರಿಯಾಜ್ ಹೇಳಿದ್ದಾರೆ ಎಂದು ಅವರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಶಾಸಕ ರಾಹುಲ್‌ ಕುಲ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಅಲ್ಲಿ ಆರೋಪಿಯು, ಸಚಿವ ಸ್ಥಾನ ನೀಡಲು ಹಿರಿಯ ರಾಜಕಾರಣಿಯೊಬ್ಬರು ಕೆಲಸ ಮಾಡಲಿದ್ದು, ಅದಕ್ಕಾಗಿ 100 ಕೋಟಿ ರೂ. ನೀಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ನಂತರ ಮಾತುಕತೆ ನಡೆಸಿದ ಶಾಸಕ ರಾಹುಲ್ ಅಂತಿಮವಾಗಿ 100 ಕೋಟಿಗಳ ಬದಲಿಗೆ 90 ಕೋಟಿ ರೂ.ಗಳು ಪಾವತಿಸುವುದಾಗಿ ಆರೋಪಿಗಳೊಂದಿಗೆ ಒಪ್ಪಿಕೊಂಡಿದ್ದಾರೆ. ಆದರೆ ಆರೋಪಿ ರಿಯಾಜ್ ಮುಂಗಡವಾಗಿ 20%ದಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ವೇಳೆ ಶಾಸಕ ಕೂಡ 20% ಹಣ ಮುಂಗಡವಾಗಿ ಕೊಡಲು ಒಪ್ಪಿಕೊಂಡು ಮತ್ತೊಮ್ಮೆ ಭೇಟಿಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ ರಾಹುಲ್ ಕುಲ್ ಅವರು ಘಟನೆಯ ಬಗ್ಗೆ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ತನಿಖೆಯ ಮೇಲ್ವಿಚಾರಣೆ ನಡೆಸಿ, ಪ್ರಕರಣವನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ಬಳಿಕ ನಗರ ಅಪರಾಧ ವಿಭಾಗದ ಪೊಲೀಸರು ಆರೋಪಿಗೆ ಬಲೆ ಬೀಸಿ, 18 ಕೋಟಿ ಮುಂಗಡವಾಗಿ ವಸೂಲಿ ಮಾಡಲು ಶಾಸಕರನ್ನು ಭೇಟಿ ಮಾಡಲು ಹೋಟೆಲ್‌ಗೆ ಬಂದಿದ್ದ ಆರೋಪಿ ಮತ್ತು ಆತನ ಸಹಚರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ವಿಚಾರಣೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ. ನಾಲ್ವರನ್ನು ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

“ಜಾಫರ್‌‌ ಉಸ್ಮಾನಿ ದೆಹಲಿಯಲ್ಲಿ ಯಾರೊಂದಿಗೊ ಸಂಪರ್ಕದಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಎಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಹೇಳಿದೆ. ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯ ಪಾತ್ರವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...