Homeಮುಖಪುಟಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

ಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್ (41), ಯೋಗೇಶ್ ಕುಲಕರ್ಣಿ (57), ಸಾಗರ್ ಸಂಗ್ವಾಯ್ (37) ಮತ್ತು ಜಾಫರ್ ಅಹ್ಮದ್ ರಶೀದ್ ಅಹ್ಮದ್ ಉಸ್ಮಾನಿ (53) ಎಂದು ಗುರುತಿಸಲಾಗಿದೆ.

ದೌಂಡ್‌ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು, ತಮ್ಮ ಆಪ್ತ ಸಹಾಯಕನಿಗೆ ಜುಲೈ 16 ರಂದು ತನ್ನನ್ನು ರಿಯಾಜ್ ಶೇಖ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದರು. ಅವರು ದೂರು ನೀಡಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ಸಚಿವ ಸ್ಥಾನ ನೀಡುವ ಬಗ್ಗೆಗಿನ ಪ್ರಸ್ತಾಪವನ್ನು ಚರ್ಚಿಸಲು ಕುಲ್ ಅವರನ್ನು ಭೇಟಿಯಾಗಲು ಬಯಸುವುದಾಗಿ ರಿಯಾಜ್ ಹೇಳಿದ್ದಾರೆ ಎಂದು ಅವರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಶಾಸಕ ರಾಹುಲ್‌ ಕುಲ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಅಲ್ಲಿ ಆರೋಪಿಯು, ಸಚಿವ ಸ್ಥಾನ ನೀಡಲು ಹಿರಿಯ ರಾಜಕಾರಣಿಯೊಬ್ಬರು ಕೆಲಸ ಮಾಡಲಿದ್ದು, ಅದಕ್ಕಾಗಿ 100 ಕೋಟಿ ರೂ. ನೀಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ನಂತರ ಮಾತುಕತೆ ನಡೆಸಿದ ಶಾಸಕ ರಾಹುಲ್ ಅಂತಿಮವಾಗಿ 100 ಕೋಟಿಗಳ ಬದಲಿಗೆ 90 ಕೋಟಿ ರೂ.ಗಳು ಪಾವತಿಸುವುದಾಗಿ ಆರೋಪಿಗಳೊಂದಿಗೆ ಒಪ್ಪಿಕೊಂಡಿದ್ದಾರೆ. ಆದರೆ ಆರೋಪಿ ರಿಯಾಜ್ ಮುಂಗಡವಾಗಿ 20%ದಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ವೇಳೆ ಶಾಸಕ ಕೂಡ 20% ಹಣ ಮುಂಗಡವಾಗಿ ಕೊಡಲು ಒಪ್ಪಿಕೊಂಡು ಮತ್ತೊಮ್ಮೆ ಭೇಟಿಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ ರಾಹುಲ್ ಕುಲ್ ಅವರು ಘಟನೆಯ ಬಗ್ಗೆ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ತನಿಖೆಯ ಮೇಲ್ವಿಚಾರಣೆ ನಡೆಸಿ, ಪ್ರಕರಣವನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ಬಳಿಕ ನಗರ ಅಪರಾಧ ವಿಭಾಗದ ಪೊಲೀಸರು ಆರೋಪಿಗೆ ಬಲೆ ಬೀಸಿ, 18 ಕೋಟಿ ಮುಂಗಡವಾಗಿ ವಸೂಲಿ ಮಾಡಲು ಶಾಸಕರನ್ನು ಭೇಟಿ ಮಾಡಲು ಹೋಟೆಲ್‌ಗೆ ಬಂದಿದ್ದ ಆರೋಪಿ ಮತ್ತು ಆತನ ಸಹಚರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ವಿಚಾರಣೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ. ನಾಲ್ವರನ್ನು ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

“ಜಾಫರ್‌‌ ಉಸ್ಮಾನಿ ದೆಹಲಿಯಲ್ಲಿ ಯಾರೊಂದಿಗೊ ಸಂಪರ್ಕದಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಎಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಹೇಳಿದೆ. ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯ ಪಾತ್ರವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...