Homeಮುಖಪುಟಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

ಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್ (41), ಯೋಗೇಶ್ ಕುಲಕರ್ಣಿ (57), ಸಾಗರ್ ಸಂಗ್ವಾಯ್ (37) ಮತ್ತು ಜಾಫರ್ ಅಹ್ಮದ್ ರಶೀದ್ ಅಹ್ಮದ್ ಉಸ್ಮಾನಿ (53) ಎಂದು ಗುರುತಿಸಲಾಗಿದೆ.

ದೌಂಡ್‌ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು, ತಮ್ಮ ಆಪ್ತ ಸಹಾಯಕನಿಗೆ ಜುಲೈ 16 ರಂದು ತನ್ನನ್ನು ರಿಯಾಜ್ ಶೇಖ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದರು. ಅವರು ದೂರು ನೀಡಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ಸಚಿವ ಸ್ಥಾನ ನೀಡುವ ಬಗ್ಗೆಗಿನ ಪ್ರಸ್ತಾಪವನ್ನು ಚರ್ಚಿಸಲು ಕುಲ್ ಅವರನ್ನು ಭೇಟಿಯಾಗಲು ಬಯಸುವುದಾಗಿ ರಿಯಾಜ್ ಹೇಳಿದ್ದಾರೆ ಎಂದು ಅವರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಶಾಸಕ ರಾಹುಲ್‌ ಕುಲ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಅಲ್ಲಿ ಆರೋಪಿಯು, ಸಚಿವ ಸ್ಥಾನ ನೀಡಲು ಹಿರಿಯ ರಾಜಕಾರಣಿಯೊಬ್ಬರು ಕೆಲಸ ಮಾಡಲಿದ್ದು, ಅದಕ್ಕಾಗಿ 100 ಕೋಟಿ ರೂ. ನೀಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ನಂತರ ಮಾತುಕತೆ ನಡೆಸಿದ ಶಾಸಕ ರಾಹುಲ್ ಅಂತಿಮವಾಗಿ 100 ಕೋಟಿಗಳ ಬದಲಿಗೆ 90 ಕೋಟಿ ರೂ.ಗಳು ಪಾವತಿಸುವುದಾಗಿ ಆರೋಪಿಗಳೊಂದಿಗೆ ಒಪ್ಪಿಕೊಂಡಿದ್ದಾರೆ. ಆದರೆ ಆರೋಪಿ ರಿಯಾಜ್ ಮುಂಗಡವಾಗಿ 20%ದಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ವೇಳೆ ಶಾಸಕ ಕೂಡ 20% ಹಣ ಮುಂಗಡವಾಗಿ ಕೊಡಲು ಒಪ್ಪಿಕೊಂಡು ಮತ್ತೊಮ್ಮೆ ಭೇಟಿಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ ರಾಹುಲ್ ಕುಲ್ ಅವರು ಘಟನೆಯ ಬಗ್ಗೆ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ತನಿಖೆಯ ಮೇಲ್ವಿಚಾರಣೆ ನಡೆಸಿ, ಪ್ರಕರಣವನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ಬಳಿಕ ನಗರ ಅಪರಾಧ ವಿಭಾಗದ ಪೊಲೀಸರು ಆರೋಪಿಗೆ ಬಲೆ ಬೀಸಿ, 18 ಕೋಟಿ ಮುಂಗಡವಾಗಿ ವಸೂಲಿ ಮಾಡಲು ಶಾಸಕರನ್ನು ಭೇಟಿ ಮಾಡಲು ಹೋಟೆಲ್‌ಗೆ ಬಂದಿದ್ದ ಆರೋಪಿ ಮತ್ತು ಆತನ ಸಹಚರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ವಿಚಾರಣೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ. ನಾಲ್ವರನ್ನು ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

“ಜಾಫರ್‌‌ ಉಸ್ಮಾನಿ ದೆಹಲಿಯಲ್ಲಿ ಯಾರೊಂದಿಗೊ ಸಂಪರ್ಕದಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಎಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಹೇಳಿದೆ. ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯ ಪಾತ್ರವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...