Homeಕರ್ನಾಟಕಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್, ಶಿವಬಸಪ್ಪ ಮಗದುಮ್ಮ ಮತ್ತು ಕೊಲ್ಲಾಪುರ ಹಾಗೂ ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರು ಗಂಡು ಮಗುವನ್ನು ಬಯಸಿದ್ದರು ಎಂದು ತಿಳಿಸಿದ್ದಾರೆ.

ಶಿವಬಸಪ್ಪ ಮಗದುಮ್ಮ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಹಾವೇರಿ ಜಿಲ್ಲೆಯ ಬ್ಯಾತನಾಳದ ಸಂಗೀತಾ ಗುಡಪ್ಪ ಕಮ್ಮಾರ (30) ಅವರನ್ನು ವಿವಾಹವಾಗಿದ್ದರು. ಮಗದುಮ್ಮಗೆ ಅವರ ಈ ಹಿಂದಿನ ಪತ್ನಿಯಿಂದ ಮಕ್ಕಳಿದ್ದರು. ಅವರು ಆಗಾಗ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗದುಮ್ಮ ಬಾಲಕನನ್ನು ಮಾರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಿವಬಸಪ್ಪ ಮಗದುಮ್ಮ ಅವರು ಸಂಗೀತಾರನ್ನು ಮದುವೆಯಾಗಲು ಲಕ್ಷ್ಮಿ ಬಾಬು ಗೋಲಬಾವಿ ಸಹಾಯ ಮಾಡಿದ್ದರು. ಇದೇ ಲಕ್ಷ್ಮಿ ಬಾಬು ಸಂಗೀತಾ ಅವರ ಮನವೊಲಿಸಿ ಮಗುವನ್ನು ಕಾರವಾರದ ಕೆಸ್ರೋಲಿಯಲ್ಲಿರುವ ಅನಸೂಯಾ ದೊಡ್ಮನಿ ಅವರಿಗೆ ಹಸ್ತಾಂತರಿಸುವಂತೆ ಮಾಡಿದ್ದರು. ನಂತರ ಅನಸೂಯಾ ಆ ಮಗುವನ್ನು ದಿಲ್ಶಾದ್ ಅವರಿಗೆ ಮಾರಿದ್ದರು. ಬಾಲಕ ಅನಾಥನೆಂದು ದಿಲ್ಶಾದ್ ಅವರಿಗೆ ಸುಳ್ಳು ಹೇಳಿದ್ದರು.

ಈ ನಡುವೆ ಮಗುವಿನ ತಾಯಿ ಸಂಗೀತಾ ಕಮ್ಮಾರ್ ತನ್ನ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯೊಂದರಲ್ಲಿ ಮಗುವನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳಾದ ಖಾನಾಪುರ ತಾಲೂಕಿನ ಲೊಂಡಾದ ಭರತ ಪೂಜಾರಿ, ಹಣ ಕೊಟ್ಟು ಮಗುವನ್ನು ಪಡೆದಿದ್ದ ಬೆಳಗಾವಿಯ ದಿಲ್ಶಾದ್ ತಹಶೀಲ್ದಾರ್‌ ಅವರ ಪತ್ತೆಗೆ ಜಾಲ ಬೀಸಲಾಗಿದೆ. ರಕ್ಷಣೆ ಮಾಡಲಾದ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಹುಕ್ಕೇರಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಕೆ.ಬಸಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮಗು ಮಾರಾಟದ ಮೂರನೇ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...