Homeಕರ್ನಾಟಕಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್, ಶಿವಬಸಪ್ಪ ಮಗದುಮ್ಮ ಮತ್ತು ಕೊಲ್ಲಾಪುರ ಹಾಗೂ ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರು ಗಂಡು ಮಗುವನ್ನು ಬಯಸಿದ್ದರು ಎಂದು ತಿಳಿಸಿದ್ದಾರೆ.

ಶಿವಬಸಪ್ಪ ಮಗದುಮ್ಮ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಹಾವೇರಿ ಜಿಲ್ಲೆಯ ಬ್ಯಾತನಾಳದ ಸಂಗೀತಾ ಗುಡಪ್ಪ ಕಮ್ಮಾರ (30) ಅವರನ್ನು ವಿವಾಹವಾಗಿದ್ದರು. ಮಗದುಮ್ಮಗೆ ಅವರ ಈ ಹಿಂದಿನ ಪತ್ನಿಯಿಂದ ಮಕ್ಕಳಿದ್ದರು. ಅವರು ಆಗಾಗ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗದುಮ್ಮ ಬಾಲಕನನ್ನು ಮಾರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಿವಬಸಪ್ಪ ಮಗದುಮ್ಮ ಅವರು ಸಂಗೀತಾರನ್ನು ಮದುವೆಯಾಗಲು ಲಕ್ಷ್ಮಿ ಬಾಬು ಗೋಲಬಾವಿ ಸಹಾಯ ಮಾಡಿದ್ದರು. ಇದೇ ಲಕ್ಷ್ಮಿ ಬಾಬು ಸಂಗೀತಾ ಅವರ ಮನವೊಲಿಸಿ ಮಗುವನ್ನು ಕಾರವಾರದ ಕೆಸ್ರೋಲಿಯಲ್ಲಿರುವ ಅನಸೂಯಾ ದೊಡ್ಮನಿ ಅವರಿಗೆ ಹಸ್ತಾಂತರಿಸುವಂತೆ ಮಾಡಿದ್ದರು. ನಂತರ ಅನಸೂಯಾ ಆ ಮಗುವನ್ನು ದಿಲ್ಶಾದ್ ಅವರಿಗೆ ಮಾರಿದ್ದರು. ಬಾಲಕ ಅನಾಥನೆಂದು ದಿಲ್ಶಾದ್ ಅವರಿಗೆ ಸುಳ್ಳು ಹೇಳಿದ್ದರು.

ಈ ನಡುವೆ ಮಗುವಿನ ತಾಯಿ ಸಂಗೀತಾ ಕಮ್ಮಾರ್ ತನ್ನ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯೊಂದರಲ್ಲಿ ಮಗುವನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳಾದ ಖಾನಾಪುರ ತಾಲೂಕಿನ ಲೊಂಡಾದ ಭರತ ಪೂಜಾರಿ, ಹಣ ಕೊಟ್ಟು ಮಗುವನ್ನು ಪಡೆದಿದ್ದ ಬೆಳಗಾವಿಯ ದಿಲ್ಶಾದ್ ತಹಶೀಲ್ದಾರ್‌ ಅವರ ಪತ್ತೆಗೆ ಜಾಲ ಬೀಸಲಾಗಿದೆ. ರಕ್ಷಣೆ ಮಾಡಲಾದ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಹುಕ್ಕೇರಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಕೆ.ಬಸಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮಗು ಮಾರಾಟದ ಮೂರನೇ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...