Homeಕರ್ನಾಟಕಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್, ಶಿವಬಸಪ್ಪ ಮಗದುಮ್ಮ ಮತ್ತು ಕೊಲ್ಲಾಪುರ ಹಾಗೂ ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರು ಗಂಡು ಮಗುವನ್ನು ಬಯಸಿದ್ದರು ಎಂದು ತಿಳಿಸಿದ್ದಾರೆ.

ಶಿವಬಸಪ್ಪ ಮಗದುಮ್ಮ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಹಾವೇರಿ ಜಿಲ್ಲೆಯ ಬ್ಯಾತನಾಳದ ಸಂಗೀತಾ ಗುಡಪ್ಪ ಕಮ್ಮಾರ (30) ಅವರನ್ನು ವಿವಾಹವಾಗಿದ್ದರು. ಮಗದುಮ್ಮಗೆ ಅವರ ಈ ಹಿಂದಿನ ಪತ್ನಿಯಿಂದ ಮಕ್ಕಳಿದ್ದರು. ಅವರು ಆಗಾಗ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗದುಮ್ಮ ಬಾಲಕನನ್ನು ಮಾರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಿವಬಸಪ್ಪ ಮಗದುಮ್ಮ ಅವರು ಸಂಗೀತಾರನ್ನು ಮದುವೆಯಾಗಲು ಲಕ್ಷ್ಮಿ ಬಾಬು ಗೋಲಬಾವಿ ಸಹಾಯ ಮಾಡಿದ್ದರು. ಇದೇ ಲಕ್ಷ್ಮಿ ಬಾಬು ಸಂಗೀತಾ ಅವರ ಮನವೊಲಿಸಿ ಮಗುವನ್ನು ಕಾರವಾರದ ಕೆಸ್ರೋಲಿಯಲ್ಲಿರುವ ಅನಸೂಯಾ ದೊಡ್ಮನಿ ಅವರಿಗೆ ಹಸ್ತಾಂತರಿಸುವಂತೆ ಮಾಡಿದ್ದರು. ನಂತರ ಅನಸೂಯಾ ಆ ಮಗುವನ್ನು ದಿಲ್ಶಾದ್ ಅವರಿಗೆ ಮಾರಿದ್ದರು. ಬಾಲಕ ಅನಾಥನೆಂದು ದಿಲ್ಶಾದ್ ಅವರಿಗೆ ಸುಳ್ಳು ಹೇಳಿದ್ದರು.

ಈ ನಡುವೆ ಮಗುವಿನ ತಾಯಿ ಸಂಗೀತಾ ಕಮ್ಮಾರ್ ತನ್ನ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯೊಂದರಲ್ಲಿ ಮಗುವನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳಾದ ಖಾನಾಪುರ ತಾಲೂಕಿನ ಲೊಂಡಾದ ಭರತ ಪೂಜಾರಿ, ಹಣ ಕೊಟ್ಟು ಮಗುವನ್ನು ಪಡೆದಿದ್ದ ಬೆಳಗಾವಿಯ ದಿಲ್ಶಾದ್ ತಹಶೀಲ್ದಾರ್‌ ಅವರ ಪತ್ತೆಗೆ ಜಾಲ ಬೀಸಲಾಗಿದೆ. ರಕ್ಷಣೆ ಮಾಡಲಾದ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಹುಕ್ಕೇರಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಕೆ.ಬಸಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮಗು ಮಾರಾಟದ ಮೂರನೇ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...