Homeಕರ್ನಾಟಕಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್, ಶಿವಬಸಪ್ಪ ಮಗದುಮ್ಮ ಮತ್ತು ಕೊಲ್ಲಾಪುರ ಹಾಗೂ ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರು ಗಂಡು ಮಗುವನ್ನು ಬಯಸಿದ್ದರು ಎಂದು ತಿಳಿಸಿದ್ದಾರೆ.

ಶಿವಬಸಪ್ಪ ಮಗದುಮ್ಮ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಹಾವೇರಿ ಜಿಲ್ಲೆಯ ಬ್ಯಾತನಾಳದ ಸಂಗೀತಾ ಗುಡಪ್ಪ ಕಮ್ಮಾರ (30) ಅವರನ್ನು ವಿವಾಹವಾಗಿದ್ದರು. ಮಗದುಮ್ಮಗೆ ಅವರ ಈ ಹಿಂದಿನ ಪತ್ನಿಯಿಂದ ಮಕ್ಕಳಿದ್ದರು. ಅವರು ಆಗಾಗ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗದುಮ್ಮ ಬಾಲಕನನ್ನು ಮಾರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಿವಬಸಪ್ಪ ಮಗದುಮ್ಮ ಅವರು ಸಂಗೀತಾರನ್ನು ಮದುವೆಯಾಗಲು ಲಕ್ಷ್ಮಿ ಬಾಬು ಗೋಲಬಾವಿ ಸಹಾಯ ಮಾಡಿದ್ದರು. ಇದೇ ಲಕ್ಷ್ಮಿ ಬಾಬು ಸಂಗೀತಾ ಅವರ ಮನವೊಲಿಸಿ ಮಗುವನ್ನು ಕಾರವಾರದ ಕೆಸ್ರೋಲಿಯಲ್ಲಿರುವ ಅನಸೂಯಾ ದೊಡ್ಮನಿ ಅವರಿಗೆ ಹಸ್ತಾಂತರಿಸುವಂತೆ ಮಾಡಿದ್ದರು. ನಂತರ ಅನಸೂಯಾ ಆ ಮಗುವನ್ನು ದಿಲ್ಶಾದ್ ಅವರಿಗೆ ಮಾರಿದ್ದರು. ಬಾಲಕ ಅನಾಥನೆಂದು ದಿಲ್ಶಾದ್ ಅವರಿಗೆ ಸುಳ್ಳು ಹೇಳಿದ್ದರು.

ಈ ನಡುವೆ ಮಗುವಿನ ತಾಯಿ ಸಂಗೀತಾ ಕಮ್ಮಾರ್ ತನ್ನ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯೊಂದರಲ್ಲಿ ಮಗುವನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳಾದ ಖಾನಾಪುರ ತಾಲೂಕಿನ ಲೊಂಡಾದ ಭರತ ಪೂಜಾರಿ, ಹಣ ಕೊಟ್ಟು ಮಗುವನ್ನು ಪಡೆದಿದ್ದ ಬೆಳಗಾವಿಯ ದಿಲ್ಶಾದ್ ತಹಶೀಲ್ದಾರ್‌ ಅವರ ಪತ್ತೆಗೆ ಜಾಲ ಬೀಸಲಾಗಿದೆ. ರಕ್ಷಣೆ ಮಾಡಲಾದ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಹುಕ್ಕೇರಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಕೆ.ಬಸಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮಗು ಮಾರಾಟದ ಮೂರನೇ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...