Homeಕರ್ನಾಟಕಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

- Advertisement -
- Advertisement -

ತರಕಾರಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಒತ್ತಾಯವಾಗಿ ಗಾಂಜಾ ಸೇವನೆ ಮಾಡಿಸಿ, ಆತನ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಮೇಲೆ ಗಾಂಜಾ ಸೇವಿಸಿದ್ದಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿದ್ದ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಸಿ ಯಾರ್ಡ್‌ ಠಾಣೆಯ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಆಂಜಿನಪ್ಪ ಹಾಗೂ ಇತ್ತಿಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ.

ಲಂಚ ಕೊಡದ ಕಾರಣಕ್ಕೆ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಎಂಬಾತನ ಮೇಲೆ ಗಾಂಜಾ ಸೇವಿಸಿದ್ದ ಸುಳ್ಳು ಪ್ರಕರಣ ದಾಖಲಿಸಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಇದಾದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಡಿಸಿಪಿಗೆ ಪ್ರಕರಣದ ವರದಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಯಶವಂತಪುರ ಉಪವಿಭಾಗದ ಎಸಿಪಿ ಮತ್ತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಪ್ರಕರಣದ ತನಿಖೆಯನ್ನು ನಡೆಸಿದ್ದರು. ತನಿಖೆ ವೇಳೆ ಪಿಎಸ್‌ಐ ಆಂಜಿನಪ್ಪ ಡಿಸಿಪಿ ಅವರ ವಾಯ್ಸ್‌ ರೆಕಾರ್ಡ್‌ ಮಾಡಿ ಸಿಕ್ಕಿಬಿದ್ದಿದ್ದಾರೆ. ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ನಾಲ್ವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ವರದಿಯ ಪ್ರಕಾರ, ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಜುಲೈ 14 ರ ರಾತ್ರಿ ಗೋರಗುಂಟೆಪಾಳ್ಯ ಬಳಿ ಗಸ್ತಿನಲ್ಲಿದ್ದಾಗ ಇಬ್ಬರು ಯುವಕರನ್ನು ವಶಕ್ಕೆ ತೆಗೆದುಕೊಂಡರು. “ಅವರಲ್ಲಿ ಒಬ್ಬರು ಸಿಗರೇಟು ಸೇದುತ್ತಿದ್ದರು ಮತ್ತು ಪೊಲೀಸ್ ವಾಹನವನ್ನು ನೋಡಿದ ಮೇಲೆ ಸಿಗರೇಟು ಎಸೆದರು. ಆತ ಮಾದಕ ದ್ರವ್ಯ ಸೇವಿಸುತ್ತಿದ್ದಾನೆಂದು ಪೊಲೀಸರು ಭಾವಿಸಿದ್ದರು. ಇಬ್ಬರನ್ನು ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ, ನಾಲ್ಕು ಮಂದಿ ಪೊಲೀಸರು ಯುವಕನಿಗೆ ಗಾಂಜಾ ತುಂಬಿದ ಸಿಗರೇಟನ್ನು ಕೊಟ್ಟು ಅದನ್ನು ಧೂಮಪಾನ ಮಾಡಲು ಒತ್ತಾಯಿಸಿದ್ದಾರೆ” ಎಂದು ಹೇಳಿದೆ.

“ಯುವಕರು ಗಾಂಜಾ ತುಂಬಿದ ಸಿಗರೇಟು ಸೇವನೆ ಮಾಡಲು ಒಪ್ಪದ ಕಾರಣ, ಧೂಮಪಾನ ಮಾಡಿದರೆ ಕೇಸ್‌ನಿಂದ ತೆಗೆದುಹಾಕುವುದಾಗಿ ತಿಳಿಸಿದ್ದಾರೆ. ಯವಕರನ್ನು ಬಲವಂತವಾಗಿ ಗಾಂಜಾ ಸೇವಿಸುವಂತೆ ಮಾಡಿ,   ಇಬ್ಬರು ಕಾನ್‌ಸ್ಟೆಬಲ್‌ಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯು ಗಾಂಜಾ ಸೇವನೆಯನ್ನು ದೃಢಪಡಿಸಿದೆ. ತರುವಾಯ, ಆತನ ವಿರುದ್ಧ ಪ್ರಕರಣ ದಾಖಲಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

“ಈ ಘಟನೆಯಿಂದ ಬೇಸರಗೊಂಡ ಯುವಕ ಜುಲೈ 17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.  ಅದೃಷ್ಟವಶಾತ್, ಆತ ಶೀಘ್ರವೇ ಚೇತರಿಸಿಕೊಂಡಿದ್ದಾರೆ. ನಂತರ ನಾವು ವಿಚಾರಣೆ ನಡೆಸಿದ್ದೇವೆ ”ಎಂದು ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಅವರ ವರದಿ ತಿಳಿಸಿದೆ.

ಘಟನೆಯಿಂದ ಮನನೊಂದಿದ್ದ ಶಿವರಾಜ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ನಂತರ ಆತ ಗುಣಮುಖನಾಗಿ ಮನೆಗೆ ಮರಳಿದ್ದಾರೆ. ಬಳಿಕ ವಿಡಿಯೋ ಮಾಡಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದರು. ವಿಡಿಯೊ ವೈರಲ್‌ ಆದ ಬಳಿಕ ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ನಂತರ ತನಿಖೆಗೆ ಆದೇಶಿಸಿದ್ದ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಅವರು ನಾಲ್ವರನ್ನು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...