Homeಕರ್ನಾಟಕಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

- Advertisement -
- Advertisement -

ತರಕಾರಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಒತ್ತಾಯವಾಗಿ ಗಾಂಜಾ ಸೇವನೆ ಮಾಡಿಸಿ, ಆತನ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಮೇಲೆ ಗಾಂಜಾ ಸೇವಿಸಿದ್ದಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿದ್ದ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಸಿ ಯಾರ್ಡ್‌ ಠಾಣೆಯ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಆಂಜಿನಪ್ಪ ಹಾಗೂ ಇತ್ತಿಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ.

ಲಂಚ ಕೊಡದ ಕಾರಣಕ್ಕೆ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಎಂಬಾತನ ಮೇಲೆ ಗಾಂಜಾ ಸೇವಿಸಿದ್ದ ಸುಳ್ಳು ಪ್ರಕರಣ ದಾಖಲಿಸಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಇದಾದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಡಿಸಿಪಿಗೆ ಪ್ರಕರಣದ ವರದಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಯಶವಂತಪುರ ಉಪವಿಭಾಗದ ಎಸಿಪಿ ಮತ್ತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಪ್ರಕರಣದ ತನಿಖೆಯನ್ನು ನಡೆಸಿದ್ದರು. ತನಿಖೆ ವೇಳೆ ಪಿಎಸ್‌ಐ ಆಂಜಿನಪ್ಪ ಡಿಸಿಪಿ ಅವರ ವಾಯ್ಸ್‌ ರೆಕಾರ್ಡ್‌ ಮಾಡಿ ಸಿಕ್ಕಿಬಿದ್ದಿದ್ದಾರೆ. ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ನಾಲ್ವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ವರದಿಯ ಪ್ರಕಾರ, ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಜುಲೈ 14 ರ ರಾತ್ರಿ ಗೋರಗುಂಟೆಪಾಳ್ಯ ಬಳಿ ಗಸ್ತಿನಲ್ಲಿದ್ದಾಗ ಇಬ್ಬರು ಯುವಕರನ್ನು ವಶಕ್ಕೆ ತೆಗೆದುಕೊಂಡರು. “ಅವರಲ್ಲಿ ಒಬ್ಬರು ಸಿಗರೇಟು ಸೇದುತ್ತಿದ್ದರು ಮತ್ತು ಪೊಲೀಸ್ ವಾಹನವನ್ನು ನೋಡಿದ ಮೇಲೆ ಸಿಗರೇಟು ಎಸೆದರು. ಆತ ಮಾದಕ ದ್ರವ್ಯ ಸೇವಿಸುತ್ತಿದ್ದಾನೆಂದು ಪೊಲೀಸರು ಭಾವಿಸಿದ್ದರು. ಇಬ್ಬರನ್ನು ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ, ನಾಲ್ಕು ಮಂದಿ ಪೊಲೀಸರು ಯುವಕನಿಗೆ ಗಾಂಜಾ ತುಂಬಿದ ಸಿಗರೇಟನ್ನು ಕೊಟ್ಟು ಅದನ್ನು ಧೂಮಪಾನ ಮಾಡಲು ಒತ್ತಾಯಿಸಿದ್ದಾರೆ” ಎಂದು ಹೇಳಿದೆ.

“ಯುವಕರು ಗಾಂಜಾ ತುಂಬಿದ ಸಿಗರೇಟು ಸೇವನೆ ಮಾಡಲು ಒಪ್ಪದ ಕಾರಣ, ಧೂಮಪಾನ ಮಾಡಿದರೆ ಕೇಸ್‌ನಿಂದ ತೆಗೆದುಹಾಕುವುದಾಗಿ ತಿಳಿಸಿದ್ದಾರೆ. ಯವಕರನ್ನು ಬಲವಂತವಾಗಿ ಗಾಂಜಾ ಸೇವಿಸುವಂತೆ ಮಾಡಿ,   ಇಬ್ಬರು ಕಾನ್‌ಸ್ಟೆಬಲ್‌ಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯು ಗಾಂಜಾ ಸೇವನೆಯನ್ನು ದೃಢಪಡಿಸಿದೆ. ತರುವಾಯ, ಆತನ ವಿರುದ್ಧ ಪ್ರಕರಣ ದಾಖಲಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

“ಈ ಘಟನೆಯಿಂದ ಬೇಸರಗೊಂಡ ಯುವಕ ಜುಲೈ 17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.  ಅದೃಷ್ಟವಶಾತ್, ಆತ ಶೀಘ್ರವೇ ಚೇತರಿಸಿಕೊಂಡಿದ್ದಾರೆ. ನಂತರ ನಾವು ವಿಚಾರಣೆ ನಡೆಸಿದ್ದೇವೆ ”ಎಂದು ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಅವರ ವರದಿ ತಿಳಿಸಿದೆ.

ಘಟನೆಯಿಂದ ಮನನೊಂದಿದ್ದ ಶಿವರಾಜ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ನಂತರ ಆತ ಗುಣಮುಖನಾಗಿ ಮನೆಗೆ ಮರಳಿದ್ದಾರೆ. ಬಳಿಕ ವಿಡಿಯೋ ಮಾಡಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದರು. ವಿಡಿಯೊ ವೈರಲ್‌ ಆದ ಬಳಿಕ ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ನಂತರ ತನಿಖೆಗೆ ಆದೇಶಿಸಿದ್ದ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಅವರು ನಾಲ್ವರನ್ನು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...