Homeಕರ್ನಾಟಕಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

- Advertisement -
- Advertisement -

ತರಕಾರಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಒತ್ತಾಯವಾಗಿ ಗಾಂಜಾ ಸೇವನೆ ಮಾಡಿಸಿ, ಆತನ ವಿರುದ್ಧ ಸುಳ್ಳು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಮೇಲೆ ಗಾಂಜಾ ಸೇವಿಸಿದ್ದಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿದ್ದ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಸಿ ಯಾರ್ಡ್‌ ಠಾಣೆಯ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಆಂಜಿನಪ್ಪ ಹಾಗೂ ಇತ್ತಿಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ.

ಲಂಚ ಕೊಡದ ಕಾರಣಕ್ಕೆ ಬೀದಿ ಬದಿ ವ್ಯಾಪಾರಿ ಶಿವರಾಜ್‌ ಎಂಬಾತನ ಮೇಲೆ ಗಾಂಜಾ ಸೇವಿಸಿದ್ದ ಸುಳ್ಳು ಪ್ರಕರಣ ದಾಖಲಿಸಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಇದಾದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಡಿಸಿಪಿಗೆ ಪ್ರಕರಣದ ವರದಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಯಶವಂತಪುರ ಉಪವಿಭಾಗದ ಎಸಿಪಿ ಮತ್ತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಪ್ರಕರಣದ ತನಿಖೆಯನ್ನು ನಡೆಸಿದ್ದರು. ತನಿಖೆ ವೇಳೆ ಪಿಎಸ್‌ಐ ಆಂಜಿನಪ್ಪ ಡಿಸಿಪಿ ಅವರ ವಾಯ್ಸ್‌ ರೆಕಾರ್ಡ್‌ ಮಾಡಿ ಸಿಕ್ಕಿಬಿದ್ದಿದ್ದಾರೆ. ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ನಾಲ್ವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ವರದಿಯ ಪ್ರಕಾರ, ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಜುಲೈ 14 ರ ರಾತ್ರಿ ಗೋರಗುಂಟೆಪಾಳ್ಯ ಬಳಿ ಗಸ್ತಿನಲ್ಲಿದ್ದಾಗ ಇಬ್ಬರು ಯುವಕರನ್ನು ವಶಕ್ಕೆ ತೆಗೆದುಕೊಂಡರು. “ಅವರಲ್ಲಿ ಒಬ್ಬರು ಸಿಗರೇಟು ಸೇದುತ್ತಿದ್ದರು ಮತ್ತು ಪೊಲೀಸ್ ವಾಹನವನ್ನು ನೋಡಿದ ಮೇಲೆ ಸಿಗರೇಟು ಎಸೆದರು. ಆತ ಮಾದಕ ದ್ರವ್ಯ ಸೇವಿಸುತ್ತಿದ್ದಾನೆಂದು ಪೊಲೀಸರು ಭಾವಿಸಿದ್ದರು. ಇಬ್ಬರನ್ನು ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ, ನಾಲ್ಕು ಮಂದಿ ಪೊಲೀಸರು ಯುವಕನಿಗೆ ಗಾಂಜಾ ತುಂಬಿದ ಸಿಗರೇಟನ್ನು ಕೊಟ್ಟು ಅದನ್ನು ಧೂಮಪಾನ ಮಾಡಲು ಒತ್ತಾಯಿಸಿದ್ದಾರೆ” ಎಂದು ಹೇಳಿದೆ.

“ಯುವಕರು ಗಾಂಜಾ ತುಂಬಿದ ಸಿಗರೇಟು ಸೇವನೆ ಮಾಡಲು ಒಪ್ಪದ ಕಾರಣ, ಧೂಮಪಾನ ಮಾಡಿದರೆ ಕೇಸ್‌ನಿಂದ ತೆಗೆದುಹಾಕುವುದಾಗಿ ತಿಳಿಸಿದ್ದಾರೆ. ಯವಕರನ್ನು ಬಲವಂತವಾಗಿ ಗಾಂಜಾ ಸೇವಿಸುವಂತೆ ಮಾಡಿ,   ಇಬ್ಬರು ಕಾನ್‌ಸ್ಟೆಬಲ್‌ಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯು ಗಾಂಜಾ ಸೇವನೆಯನ್ನು ದೃಢಪಡಿಸಿದೆ. ತರುವಾಯ, ಆತನ ವಿರುದ್ಧ ಪ್ರಕರಣ ದಾಖಲಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

“ಈ ಘಟನೆಯಿಂದ ಬೇಸರಗೊಂಡ ಯುವಕ ಜುಲೈ 17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.  ಅದೃಷ್ಟವಶಾತ್, ಆತ ಶೀಘ್ರವೇ ಚೇತರಿಸಿಕೊಂಡಿದ್ದಾರೆ. ನಂತರ ನಾವು ವಿಚಾರಣೆ ನಡೆಸಿದ್ದೇವೆ ”ಎಂದು ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ಅವರ ವರದಿ ತಿಳಿಸಿದೆ.

ಘಟನೆಯಿಂದ ಮನನೊಂದಿದ್ದ ಶಿವರಾಜ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆ ನಂತರ ಆತ ಗುಣಮುಖನಾಗಿ ಮನೆಗೆ ಮರಳಿದ್ದಾರೆ. ಬಳಿಕ ವಿಡಿಯೋ ಮಾಡಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದರು. ವಿಡಿಯೊ ವೈರಲ್‌ ಆದ ಬಳಿಕ ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ನಂತರ ತನಿಖೆಗೆ ಆದೇಶಿಸಿದ್ದ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಅವರು ನಾಲ್ವರನ್ನು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...