Homeಮುಖಪುಟಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

- Advertisement -
- Advertisement -

ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನಿಸಿರುವುದಕ್ಕೆ ಸಂಬಂಧಪಟ್ಟಂತೆ ಕೇರಳದಲ್ಲಿ ನಾಲ್ವರು ವೈದ್ಯರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಸರ್ಕಾರ ತನಿಖೆಗೆ ಆದೇಶಿಸಿದೆ.

ನವೆಂಬರ್ 2ರಂದು ಜನಿಸಿದ ಮಗುವಿಗೆ ಹಲವು ರೀತಿಯ ಗಂಭೀರ ಸಮಸ್ಯೆಗಳಿವೆ. ಇದಕ್ಕೆ ಕಾರಣ ಸರ್ಕಾರಿ ವೈದ್ಯರು ಮತ್ತು ಎರಡು ಸ್ಕ್ಯಾನಿಂಗ್ ಸೆಂಟರ್‌ಗಳ ನಿರ್ಲಕ್ಷ್ಯ ಎಂದು ಮಗುವಿನ ಪೋಷಕರಾದ ಸುರುಮಿ ಮತ್ತು ಅನೀಶ್ ದಂಪತಿ ಆರೋಪಿಸಿದ್ದಾರೆ.

ಸುರುಮಿಯ ಗರ್ಭಾವಸ್ಥೆಯಲ್ಲಿ ಅನೇಕ ಅಲ್ಟ್ರಾಸೌಂಡ್‌ಗಳನ್ನು ನಡೆಸಿದರೂ ಭ್ರೂಣದ ಅಸಹಜತೆಗಳನ್ನು ಪತ್ತೆಹಚ್ಚಲು ವೈದ್ಯರು ಮತ್ತು ಸ್ಕ್ಯಾನಿಂಗ್ ಕೇಂದ್ರದವರು ವಿಫಲರಾಗಿದ್ದಾರೆ ಎಂದು ದಂಪತಿ ದೂರಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರಿಗೆ ದೂರು ನೀಡಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಿಂದ ವರದಿ ಕೇಳಿದೆ. ಪ್ರಕರಣ ಕುರಿತು ಆಲಪ್ಪುಝ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಕೆ ಶ್ರೀಜಿತ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಎಂ ಆರ್ ಮಧುಬಾಬು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಸುರುಮಿ ಅವರು ಗರ್ಭಾವಸ್ಥೆಯಲ್ಲಿ ಅಲಪ್ಪುಝ ಕಡ್ಡಪ್ಪುರ (ಬೀಚ್) ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ (ಡಬ್ಲ್ಯುಎಸಿ ಆಸ್ಪತ್ರೆ) ಇಬ್ಬರು ಹಿರಿಯ ವೈದ್ಯರ ಆರೈಕೆಯಲ್ಲಿದ್ದರು ಮತ್ತು ಏಳು ಸ್ಕ್ಯಾನ್‌ಗಳಿಗೆ ಒಳಗಾಗಿದ್ದರು. ಆದರೆ, ಈ ಸ್ಕ್ಯಾನ್‌ಗಳು ಗಮನಾರ್ಹವಾದ ಭ್ರೂಣದ ಅಸಹಜತೆಗಳನ್ನು ಪತ್ತೆ ಹಚ್ಚಲು ವಿಫಲವಾಗಿವೆ.

ನವೆಂಬರ್ 2 ರಂದು ಮಗು ಜನಿಸಿದಾಗ, ಅದರ ಮುಖದಲ್ಲಿ ಅಸಹಜತೆಗಳು, ಹೃದಯ ದೋಷ, ಕಾರ್ಯನಿರ್ವಹಿಸದ ಹಾಗೂ ತಪ್ಪಾಗಿ ಜೋಡಿಸಲಾದ ಕಣ್ಣುಗಳು ಮತ್ತು ಕಿವಿಗಳು, ಅಂಗ ವಿರೂಪಗಳು ಮತ್ತು ಬಾಯಿ ತೆರೆಯಲು ಆಗದಿರುವುದು ಸೇರಿದಂತೆ ಗಂಭೀರ ಸಮಸ್ಯೆಗಳು ಕಂಡು ಬಂದಿವೆ.

“ಹೆರಿಗೆಗಾಗಿ ಅಕ್ಟೋಬರ್ 30 ರಂದು ಡಬ್ಲ್ಯುಎಸಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿ ತೊಡಕುಗಳ ಕಾರಣ ಅಲಪ್ಪುಝ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಂಸಿಹೆಚ್) ವರ್ಗಾಯಿಸಲಾಗಿತ್ತು. ಎಂಸಿಹೆಚ್‌ನ ವೈದ್ಯರು ಮಗುವಿಗೆ ಸಮಸ್ಯೆಗಳು ಇರುವುದನ್ನು ತಕ್ಷಣ ಪತ್ತೆ ಹಚ್ಚಿದ್ದಾರೆ. ಈ ಹಿಂದಿನ ಸ್ಕ್ಯಾನ್‌ಗಳ ಸಾಮರ್ಥ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಸುರುಮಿ ಹೇಳಿದ್ದಾರೆ.

“ಭ್ರೂಣ ಸಮಸ್ಯೆಯಿಂದ ಕೂಡಿರುವುದು ಸ್ಕ್ಯಾನಿಂಗ್ ವೇಳೆ ಪತ್ತೆ ಮಾಡಿದ್ದರೆ, ಗರ್ಭಧಾರಣೆಯನ್ನು ಕೊನೆಗೊಳಿಸುವ ಒಂದು ಆಯ್ಕೆ ಇತ್ತು. ನನ್ನ ನಿಗದಿತ ಸ್ಕ್ಯಾನಿಂಗ್‌ ಸಮಯಗಳಲ್ಲಿ ವೈದ್ಯರು ಯಾವಾಗಲೂ ಇರುತ್ತಿರಲಿಲ್ಲ” ಎಂದು ಸುರುಮಿ ಆರೋಪಿಸಿದ್ದಾರೆ.

ಡಬ್ಲ್ಯುಎಸಿ ಆಸ್ಪತ್ರೆಯ ವೈದ್ಯರು ಮತ್ತು ಸ್ಕ್ಯಾನಿಂಗ್ ಸೆಂಟರ್‌ಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ದಂಪತಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಮುಖ್ಯಸ್ಥರಿಗೂ ದೂರು ನೀಡಿದ್ದಾರೆ. ಪ್ರಸ್ತುತ ಈ ಪ್ರಕರಣ ಕೇರಳದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ.

ಇದನ್ನೂ ಓದಿ | ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...