Homeಮುಖಪುಟಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ.

ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್ ಖಾನ್ ಬಿಡುಗಡೆಗೊಂಡವರು. ಜನವರಿ 5ರಂದು ಐವರು ಬಂಧಿತರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅಗತ್ಯ ಜಾಮೀನು ಷರತ್ತುಗಳನ್ನು ಪೂರೈಸಿದ ನಂತರ ನಾಲ್ವರು ಬಿಡುಗಡೆಗೊಂಡಿದ್ದಾರೆ.

ಅಡಿಷನಲ್ ಸೆಷನ್ಸ್ ಜಡ್ಜ್ ಸಮೀರ್ ಬಜ್ಪಾಯಿ ಅವರು, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಅವರು ಸಲ್ಲಿಸಿದ್ದ ಪ್ರತಿ ವ್ಯಕ್ತಿಗೆ 2 ಲಕ್ಷ ರೂಪಾಯಿ ಮೊತ್ತದ ಜಾಮೀನು ಬಾಂಡ್ ಮತ್ತು ಅದೇ ಮೊತ್ತದ (2 ಲಕ್ಷ ರೂಪಾಯಿ) ಎರಡು ಸ್ಥಳೀಯ ಜಾಮೀನುದಾರರನ್ನು ಸ್ವೀಕರಿಸಿದ್ದಾರೆ. ನಂತರ ನಾಲ್ವರ ಬಿಡುಗಡೆ ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಇನೊಬ್ಬ ಬಂಧಿತ ಶಾದಾಬ್ ಅಹ್ಮದ್, ಜಾಮೀನು ಬಾಂಡ್‌ಗಳನ್ನು ಸಲ್ಲಿಸಲು ಬುಧವಾರ ನ್ಯಾಯಾಲಯದ ಮುಂದೆ ಹಾಜರಾಗಿಲ್ಲ. ಹಾಗಾಗಿ, ಅವರು ಬಿಡುಗಡೆಗೊಂಡಿಲ್ಲ ಎಂದು ವರದಿಗಳು ಹೇಳಿವೆ.

ಬುಧವಾರ ರಾತ್ರಿ ತಿಹಾರ್ ಜೈಲಿನಿಂದ ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೀರಾನ್ ಹೈದರ್ ಬಿಡುಗಡೆಗೊಂಡರೆ, ಮೊಹಮ್ಮದ್ ಸಲೀಮ್ ಖಾನ್ ಮಂಡೋಲಿ ಜೈಲಿನಿಂದ ಹೊರಬಂದಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರಕರಣದ ಇನ್ನಿಬ್ಬರು ಪ್ರಮುಖ ಬಂಧಿತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.

ಎಲ್ಲರೂ, ಕಳೆದ 6 ವರ್ಷಗಳಿಂದ ಜೈಲಿನಲ್ಲಿದ್ದರು. ಜಾಮೀನು ದೊರೆತವರು ಹೊರಬಂದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಇನ್ನೂ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಗಮನಾರ್ಹ ಸಂಗತಿಯೆಂದರೆ, ಇವರಲ್ಲಿ ಯಾರೂ ಕೂಡ ಅಪರಾಧಿಗಳು ಎಂದು ಇನ್ನೂ ಸಾಭೀತಾಗಿಲ್ಲ.

ಐವರಿಗೆ ಜಾಮೀನು ದೊರೆತ ಹಿನ್ನೆಲೆ, ಪ್ರಕರಣ 11ನೇ ಆರೋಪಿಯಾಗಿರುವ ಸಲೀಂ ಮಲಿಕ್ ದೆಹಲಿಯ ಕಾರ್ಕರ್ಡೂಮಾ ಕೋರ್ಟ್‌ನಲ್ಲಿ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಜಾಮೀನು ಕೊಟ್ಟ ಒಬ್ಬರ ಮೇಲಿರುವಂತೆಯೇ (ಬಹುಶಃ ಮೊಹಮ್ಮದ್ ಸಲೀಂ ಖಾನ್ ಅಥವಾ ಇತರರಂತೆ)ನನ್ನ ಮೇಲೆಯೂ ಆರೋಪಗಳಿವೆ. ಹಾಗಾಗಿ, ಸಮಾನತೆಯ ಆಧಾರದ ಮೇಲೆ ಜಾಮೀನು ನೀಡಬೇಕೆಂದು ಕೋರಿದ್ದಾರೆ. ಅಂದರೆ, ಅವರಿಗೆ ಕೊಟ್ಟ ಮೇಲೆ ನನಗೂ ಕೊಡಿ, ನಮ್ಮಿಬ್ಬರ ಮೇಲಿರುವ ಆರೋಪಗಳು ಒಂದೇ ರೀತಿ ಇವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...