Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...