Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...