Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...