Homeಅಂತರಾಷ್ಟ್ರೀಯಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ಬಿಬಿಸಿ 2020 ರ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನಪಡೆದ ನಾಲ್ವರು ಭಾರತೀಯರು!

- Advertisement -
- Advertisement -

2020 ನೇ ಇಸವಿಯ ವಿಶ್ವದ 100 ಸ್ಪೂರ್ತಿದಾಯಕ ಮತ್ತು ಪ್ರಭಾವಶಾಲಿ  ಮಹಿಳೆಯರ ಪಟ್ಟಿಯನ್ನು ಬಿಬಿಸಿ ಬಹಿರಂಗಪಡಿಸಿದೆ. ಜ್ಞಾನ, ನಾಯಕತ್ವ, ಸೃಜನಶೀಲತೆ ಮತ್ತು ಅಸ್ಮಿತೆ ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ಈ ಆಯ್ಕೆ ನಡೆದಿದ್ದು ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ.

ಸೃಜನಶೀಲತೆಯ ವಿಭಾಗದಲ್ಲಿ ತಮಿಳು ಸಿನಿಮಾ ನಿರ್ದೇಶಕ ಪಾ. ರಂಜಿತ್‌ ಅವರ ತಂಡವಾದ “ಕ್ಯಾಸ್ಟ್‌ಲೆಸ್ ಕಲೆಕ್ಟಿವ್” ನ ಹಾಡುಗಾರ್ತಿ “ಇಸೈವಾಣಿ” ಅವರು ಸ್ಥಾನ ಪಡೆದಿದ್ದರೆ. ನಾಯಕತ್ವ ವಿಭಾಗದಲ್ಲಿ “ಶಾಹಿನ್‌ಬಾಗ್ ಅಜ್ಜಿ” ಎಂದೇ ಪ್ರಸಿದ್ದರಾದ ಬಿಲ್ಕೀಸ್ ಬಾನು, ಕ್ರೀಡಾಪಟು ಮಾನಸಿ ಜೋಶಿ ಹಾಗೂ ಪರಿಸರ ಹೋರಾಟಗಾರ್ತಿ ರಿಧಿಮಾ ಪಾಂಡೆ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಪಾ. ರಂಜಿತ್‍ನ ಐತಿಹಾಸಿಕ ಪ್ರಜ್ಞೆ ಮತ್ತು ಬೆದರಿಕೆಯ ಹುನ್ನಾರ

ಅಷ್ಟೇ ಅಲ್ಲದೆ ಈ ಸಂಧಿಗ್ಧ ವರ್ಷದಲ್ಲಿ ಪ್ರಪಂಚದಾದ್ಯಂತ ಅಸಂಖ್ಯಾತ ಮಹಿಳೆಯರು ಇತರರಿಗೆ ಸಹಾಯ ಮಾಡಲು ತ್ಯಾಗ ಮಾಡಿರುವ ಸಂಕೇತವಾಗಿ 100 ಮಹಿಳಾ ಪಟ್ಟಿಯಲ್ಲಿ ಒಂದು ಹೆಸರನ್ನು ಬಿಬಿಸಿ ಗೌರವಯುತವಾಗಿ ಖಾಲಿ ಬಿಟ್ಟಿದೆ.

ಇಸೈವಾಣಿ

ಇಸೈವಾಣಿ (PC: The Lede)

ಇಸೈವಾಣಿ ಭಾರತದ ವಿಶಿಷ್ಟ ಗಾನಾ ಗಾಯಕಿಯಾಗಿದ್ದು, ಕಾರ್ಮಿಕ ವರ್ಗವೆ ಹೆಚ್ಚಿರುವ ತಮಿಳುನಾಡಿನ ಉತ್ತರ ಚೆನ್ನೈನಿಂದ ಹೊರಹೊಮ್ಮಿದ್ದಾರೆ. ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಪಾ ರಂಜಿತ್ ಅವರ ’ನೀಲಂ ಪ್ರೊಡಕ್ಷನ್’ ಅಡಿಯಲ್ಲಿರುವ ’ಕ್ಯಾಸ್ಟ್‌ಲೆಸ್ ಕಲೆಕ್ಟಿವ್’ ತಂಡದ ಪ್ರಧಾನ ಗಾಯಕಿಯಾಗಿದ್ದಾರೆ. ಅವರು ಹಾಡಿರುವ ಟಿಕ್ ಟಿಕ್ ಮತ್ತು ಬೀಫ್ ಹಾಡುಗಳು ಲಕ್ಷಾಂತರ ವೀಕ್ಷಣೆ ಹೊಂದಿವೆ.

ಶೋಷಿತರ ಪರ ಮತ್ತು ವ್ಯವಸ್ಥೆಯ ವಿರುದ್ಧ ಜನಸಾಮಾನ್ಯರ ಭಾಷೆಯಲ್ಲಿ ಹಾಡು ಹಾಡುವುದರಲ್ಲಿ ಇವರು ನಿಸ್ಸೀಮರು. ಇವರ ಪ್ರತಿಭೆ ಗಮನಿಸಿ ಹಲವು ಸಿನಿಮಾ ಅವಕಾಶಗಳು ಅವರನ್ನು ಹುಡುಕಿ ಬಂದಿವೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ಬಿಲ್ಕೀಸ್ ಬಾನು

ಸಿಎಎ ವಿರುದ್ದದ ಪ್ರತಿಭಟನೆಯ ಸಮಯದಲ್ಲಿ ’ಶಾಹಿನ್ ಬಾಗ್‌‌ ಅಜ್ಜಿ’ ಎಂದೇ ಪ್ರಖ್ಯಾತಿ ಹೊಂದಿದ್ದ 82 ವರ್ಷದ ಬಿಲ್ಕೀಸ್‌ ನಾಯಕತ್ವ ವಿಭಾಗದಲ್ಲಿ ಸ್ಥಾನಪಡೆದಿದ್ದಾರೆ. ಈ ಹಿಂದೆ ಅವರು , ’ಟೈಮ್’‌‌ ನಿಯತಕಾಲಿಕೆಯ ವರ್ಷದ ಅತ್ಯಂತ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಪತ್ರಕರ್ತೆ ರಾಣಾ ಅಯೂಬ್ ಇವರನ್ನು “ಅಂಚಿನಲ್ಲಿರುವವರ ಧ್ವನಿ” ಎಂದು ಬಣ್ಣಿಸಿದ್ದರು.

ಬಿಲ್ಕೀಸ್ ಬಾನು (PC: Times)

“ಒಂದು ಕೈಯಲ್ಲಿ ಜಪ ಮಣಿ, ಇನ್ನೊಂದು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಕುಳಿತಿರುತ್ತಿದ್ದ ಬಿಲ್ಕಿಸ್ 82 ರ ವಯಸ್ಸಿನಲ್ಲಿಯೂ ಭಾರತದ ಧ್ವನಿಯಾದರು. ಬೆಳಿಗ್ಗೆ 8 ರಿಂದ ಮಧ್ಯರಾತ್ರಿಯವರೆಗೂ ಅವರು ಪ್ರತಿಭಟನಾ ಸ್ಥಳದಲ್ಲಿ ಕುಳಿತುಕೊಳ್ಳುತ್ತಿದ್ದರು” ಎಂದು ಪತ್ರಕರ್ತೆ ಬರೆದಿದ್ದಾರೆ.

“ನನ್ನ ನರನಾಡಿಗಳಲ್ಲಿ ರಕ್ತ ಹರಿಯುವುದು ನಿಲ್ಲುವವರೆಗೂ ನಾನು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ. ಇದರಿಂದ, ಈ ದೇಶದ ಮತ್ತು ಜಗತ್ತಿನ ಜನರು ನ್ಯಾಯ ಮತ್ತು ಸಮಾನತೆಯ ಗಾಳಿಯನ್ನು ಉಸಿರಾಡುತ್ತಾರೆ” ಎಂದು ಬಿಲ್ಕೀಸ್ ಹೇಳಿದ್ದಾಗಿ ಪತ್ರಕರ್ತೆ ರಾಣಾ ಅಯೂಬ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಮಾನಸಿ ಜೋಶಿ

ಪ್ಯಾರಾ-ಅಥ್ಲೀಟ್ ಮಾನಸಿ ಜೋಶಿ ಪ್ರಸ್ತುತ ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್. ಜೂನ್ 2020 ರಲ್ಲಿ, ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಎಸ್‌ಎಲ್ 3 ಸಿಂಗಲ್ಸ್‌ನಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿದೆ. ಎಂಜಿನಿಯರ್ ಕೂಡಾ ಆಗಿರುವ ಮಾನಸಿ, ಭಾರತದಲ್ಲಿ ಅಂಗವೈಕಲ್ಯ ಮತ್ತು ಪ್ಯಾರಾ-ಸ್ಪೋರ್ಟ್ಸ್ ಬಗೆಗಿನ ಗ್ರಹಿಕೆಯನ್ನು ಬದಲಾವಣೆ ಮಾಡಬೇಕು ಎಂದು ಅವರು ಆಶಿಸುತ್ತಾರೆ.

ಮಾನಸಿ ಜೋಶಿ (PC: huffingtonpost)

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ

ರಿಧಿಮಾ ಪಾಂಡೆ ಪರಿಸರ ಕಾರ್ಯಕರ್ತೆಯಾಗಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸುವುದಕ್ಕಾಗಿ ಭಾರತ ಸರ್ಕಾರದ ವಿರುದ್ಧ ತನ್ನ ಒಂಬತ್ತನೇ ವಯಸ್ಸಿನಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ, ಇತರ 15 ಮಕ್ಕಳ ಅರ್ಜಿದಾರರೊಂದಿಗೆ, ರಿಧಿಮಾ ವಿಶ್ವಸಂಸ್ಥೆಯಲ್ಲಿ ಐದು ದೇಶಗಳ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ರಿಧಿಮಾ ಪ್ರಸ್ತುತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸುತ್ತಿದ್ದು, ಇತರ ವಿದ್ಯಾರ್ಥಿಗಳಿಗೆ, ಎಲ್ಲಾ ಹಂತಗಳಲ್ಲಿ, ಅವರ ಭವಿಷ್ಯಕ್ಕಾಗಿ ಮತ್ತು ವಿಶ್ವದ ಜೀವವೈವಿಧ್ಯತೆಗಾಗಿ ಹೋರಾಡಲು ಸಹಾಯ ಮಾಡುತ್ತಿದ್ದಾರೆ. ರಿಧಿಮಾ ತನ್ನ ಭವಿಷ್ಯವನ್ನು ಮತ್ತು ಮುಂಬರುವ ಪೀಳಿಗೆಗಳನ್ನು ಉಳಿಸಲು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...