Homeಕರ್ನಾಟಕ‘ಆಕ್ಟ್‌-1978' ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

‘ಆಕ್ಟ್‌-1978′ ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

- Advertisement -
- Advertisement -

ಲಾಕ್‌ಡೌನ್‌ ತೆರವಿನ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಕನ್ನಡಿಗರ ಮನಗೆದ್ದಿರುವ ‘ಆಕ್ಟ್-1978′ ಸೇರಿ ನಾಲ್ಕು ಸಿನಿಮಾಗಳು ಭಾರತ ಸರಕಾರ ಆಯೋಜಿಸುವ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

‘ಹರಿವು’, ‘ನಾತಿಚರಾಮಿ’ ಸಿನಿಮಾಗಳ ನಿರ್ದೇಶಕರಾದ ಮಂಸೋರೆಯವರ ‘ಆಕ್ಟ್‌‌- 1978′, ಅಕಾಲಿಕ ಮರಣದಕ್ಕೆ ತುತ್ತಾದ ನಟ ಸಂಚಾರಿ ವಿಜಯ್‌ ಅಭಿನಯದ ಕೊನೆಯ ಸಿನಿಮಾ ‘ತಲೆದಂಡ’, ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ (ನಿರ್ದೇಶಕ ಸಾಗರ್‌ ಪುರಾಣಿಕ್‌), ಗಣೇಶ್‌ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್ ಅವರನ್ನು ನೆನೆದಿದ್ದಾರೆ. “ಸಂಚಾರಿ ವಿಜಯ್‌ ಸರ್ ಅಭಿನಂದನೆಗಳು. ನೀವು ನಟಿಸಿರುವ ಎರಡು ಸಿನೆಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿದೆ. ನಿಮ್ಮೊಂದಿಗೆ ಹಂಚಿಕೊಂಡಿದ್ದ ದೀರ್ಘಕಾಲದ ಕನಸೊಂದು ಇಂದು ನನಸಾಗಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ-ನಿಮ್ಮ ಆಕ್ಟ್-1978 ಸಿನಿಮಾ ‘ಭಾರತ ಸರಕಾರ’ ಆಯೋಜಿಸುವ ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಆಗಿರುವುದು ಹೆಮ್ಮೆ ಮತ್ತು ಖುಷಿಯ ವಿಚಾರ. ನಮ್ಮ ಖುಷಿಯನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ. ಕೊರೋನಾ ನಂತರದ ದುರಿತ ಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಿದಾಗಲೂ ಕೈ ಹಿಡಿದು ಪೊರೆದು, ನಮಗೂ ಚಿತ್ರರಂಗಕ್ಕೂ ಧೈರ್ಯ ತುಂಬಿದ ಪ್ರೇಕ್ಷಕರಿಗೂ, ಎಲ್ಲಾ ಹಂತಗಳಲ್ಲೂ ನಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ತಂಡದ ಪರವಾಗಿ ಧನ್ಯವಾದಗಳು” ಎಂದು ಮಂಸೋರೆ ತಿಳಿಸಿದ್ದಾರೆ.

ಭಾರತೀಯ ಪನೋರಮಾದ 52ನೇ ಆವೃತ್ತಿ ಗೋವಾದಲ್ಲಿ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರ ವತಿಯಿಂದ ನವೆಂಬರ್‌ 20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಒಟ್ಟು 25 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. 221 ಸಮಕಾಲೀನ ಭಾರತೀಯ ಚಲನಚಿತ್ರಗಳ ಪೈಕಿ ಈ ಸಿನಿಮಾಗಳನ್ನು ಆಯ್ಕೆಮಾಡಲಾಗಿದೆ. ಬಂಗಾಳಿ ಭಾಷೆಯ ಐದು ಸಿನಿಮಾ, ಬೊಡೊ-1, ಸಿನಿಮಾ, ದಿಮಸ- 1, ಗುಜರಾತಿ- 1, ಹಿಂದಿ- 2, ಕನ್ನಡ- 4, ಮಲಯಾಳಂ- 2, ಮರಾಠಿ- 5, ಮಿಶಿಂಗ್‌-1, ಸಂಸ್ಕೃತ- 1, ತಮಿಳು- 1, ತೆಲುಗು- 1 ಸಿನಿಮಾಗಳು ಪ್ರದರ್ಶನ ಕಾಣಲಿವೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...