Homeಕರ್ನಾಟಕ‘ಆಕ್ಟ್‌-1978' ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

‘ಆಕ್ಟ್‌-1978′ ಸೇರಿ ನಾಲ್ಕು ಕನ್ನಡ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ

- Advertisement -
- Advertisement -

ಲಾಕ್‌ಡೌನ್‌ ತೆರವಿನ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಕನ್ನಡಿಗರ ಮನಗೆದ್ದಿರುವ ‘ಆಕ್ಟ್-1978′ ಸೇರಿ ನಾಲ್ಕು ಸಿನಿಮಾಗಳು ಭಾರತ ಸರಕಾರ ಆಯೋಜಿಸುವ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

‘ಹರಿವು’, ‘ನಾತಿಚರಾಮಿ’ ಸಿನಿಮಾಗಳ ನಿರ್ದೇಶಕರಾದ ಮಂಸೋರೆಯವರ ‘ಆಕ್ಟ್‌‌- 1978′, ಅಕಾಲಿಕ ಮರಣದಕ್ಕೆ ತುತ್ತಾದ ನಟ ಸಂಚಾರಿ ವಿಜಯ್‌ ಅಭಿನಯದ ಕೊನೆಯ ಸಿನಿಮಾ ‘ತಲೆದಂಡ’, ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ (ನಿರ್ದೇಶಕ ಸಾಗರ್‌ ಪುರಾಣಿಕ್‌), ಗಣೇಶ್‌ ಹೆಗಡೆ ನಿರ್ದೇಶನದ ‘ನೀಲಿ ಹಕ್ಕಿ’ ಸಿನಿಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿವೆ.

ನಿರ್ದೇಶಕ ಮಂಸೋರೆಯವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್ ಅವರನ್ನು ನೆನೆದಿದ್ದಾರೆ. “ಸಂಚಾರಿ ವಿಜಯ್‌ ಸರ್ ಅಭಿನಂದನೆಗಳು. ನೀವು ನಟಿಸಿರುವ ಎರಡು ಸಿನೆಮಾಗಳು ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿದೆ. ನಿಮ್ಮೊಂದಿಗೆ ಹಂಚಿಕೊಂಡಿದ್ದ ದೀರ್ಘಕಾಲದ ಕನಸೊಂದು ಇಂದು ನನಸಾಗಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ-ನಿಮ್ಮ ಆಕ್ಟ್-1978 ಸಿನಿಮಾ ‘ಭಾರತ ಸರಕಾರ’ ಆಯೋಜಿಸುವ ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಭಾರತೀಯ ಪನೋರಮಾ ವಿಭಾಗಕ್ಕೆ ಆಯ್ಕೆ ಆಗಿರುವುದು ಹೆಮ್ಮೆ ಮತ್ತು ಖುಷಿಯ ವಿಚಾರ. ನಮ್ಮ ಖುಷಿಯನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ. ಕೊರೋನಾ ನಂತರದ ದುರಿತ ಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಿದಾಗಲೂ ಕೈ ಹಿಡಿದು ಪೊರೆದು, ನಮಗೂ ಚಿತ್ರರಂಗಕ್ಕೂ ಧೈರ್ಯ ತುಂಬಿದ ಪ್ರೇಕ್ಷಕರಿಗೂ, ಎಲ್ಲಾ ಹಂತಗಳಲ್ಲೂ ನಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ತಂಡದ ಪರವಾಗಿ ಧನ್ಯವಾದಗಳು” ಎಂದು ಮಂಸೋರೆ ತಿಳಿಸಿದ್ದಾರೆ.

ಭಾರತೀಯ ಪನೋರಮಾದ 52ನೇ ಆವೃತ್ತಿ ಗೋವಾದಲ್ಲಿ ನಡೆಯಲಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರ ವತಿಯಿಂದ ನವೆಂಬರ್‌ 20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಒಟ್ಟು 25 ಚಲನಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. 221 ಸಮಕಾಲೀನ ಭಾರತೀಯ ಚಲನಚಿತ್ರಗಳ ಪೈಕಿ ಈ ಸಿನಿಮಾಗಳನ್ನು ಆಯ್ಕೆಮಾಡಲಾಗಿದೆ. ಬಂಗಾಳಿ ಭಾಷೆಯ ಐದು ಸಿನಿಮಾ, ಬೊಡೊ-1, ಸಿನಿಮಾ, ದಿಮಸ- 1, ಗುಜರಾತಿ- 1, ಹಿಂದಿ- 2, ಕನ್ನಡ- 4, ಮಲಯಾಳಂ- 2, ಮರಾಠಿ- 5, ಮಿಶಿಂಗ್‌-1, ಸಂಸ್ಕೃತ- 1, ತಮಿಳು- 1, ತೆಲುಗು- 1 ಸಿನಿಮಾಗಳು ಪ್ರದರ್ಶನ ಕಾಣಲಿವೆ.


ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...