Homeಅಂಕಣಗಳುಆಲ್ಬರ್ಟ್ ಕಾಮು ಅಮೆರಿಕಾಕ್ಕೆ ಹೋಗಿ ಫಾಕ್‍ನರ್‌ನನ್ನು ಭೆಟ್ಟಿಯಾಗಿದ್ದರ ಪುಸ್ತಕ ಸಿಕ್ಕರೆ ತಗೊಂಡು ಬಾ

ಆಲ್ಬರ್ಟ್ ಕಾಮು ಅಮೆರಿಕಾಕ್ಕೆ ಹೋಗಿ ಫಾಕ್‍ನರ್‌ನನ್ನು ಭೆಟ್ಟಿಯಾಗಿದ್ದರ ಪುಸ್ತಕ ಸಿಕ್ಕರೆ ತಗೊಂಡು ಬಾ

- Advertisement -
- Advertisement -

ಗೌರಿ ಅವರಿಗೆ ಲಂಕೇಶ್ ಬರೆದಿದ್ದ ನಾಲ್ಕು ಪತ್ರಗಳು

1) 19-10-1993
ಪ್ರೀತಿಯ ಗೌರು,

ನಿನ್ನ ಪತ್ರ. Sorry. ಕಳೆದ ಮೂರು ದಿನಗಳಿಂದ ಉತ್ತರ ಬರೆಯಲು ಸಮಯ ಸಿಕ್ಕಿರಲಿಲ್ಲ.

ಆ ಯುರೋಪ್‍ನ ದೇಶಗಳು ಎಷ್ಟು ಸಜ್ಜಾಗಿ ವ್ಯವಸ್ಥಿತವಾಗಿವೆ ಎಂಬುದು ನನಗೆ ಗೊತ್ತು. ಆದರೆ ನಮ್ಮಂಥವರಿಗೆ ಅವರ ಪಿತ್ರಾರ್ಜಿತ ಕಲಾವಸ್ತುಗಳು ಉಸಿರುಗಟ್ಟಿಸುವಂತೆ ಇರುತ್ತವೆ. ಹಾಗೆಯೇ ಅವುಗಳಲ್ಲಿ ಅವರಿಗಿರುವ ಉತ್ಸಾಹ ಹಾಸ್ಯಾಸ್ಪದವಾಗಿ ಕಾಣುತ್ತದೆ,

ಆದರೆ ಪ್ಯಾರಿಸ್‍ನಂತಹ ನಗರ (ಈಗ ಅಲ್ಲಿಂದ ಜಗತ್‍ಪ್ರಖ್ಯಾತ ಮೇಧಾವಿಗಳು ಸಂಪೂರ್ಣವಾಗಿ ಮಾಯವಾಗಿದ್ದಾರೆ ಎಂದೆನಿಸುತ್ತದೆ) ನಿನಗೆ “Moveable Feast” (ಇದು ಏರ್ನೆಸ್ಟ್ ಹೆಮಿಂಗ್ವೆನ ಪುಸ್ತಕದ ಟೈಟಲ್ – ಗೌರಿ ಲಂಕೇಶ್) ಆಗುವುದು ಯಾವಾಗ ಅಂದರೆ, ನೀನು ಅದರ ಲಯವನ್ನು ಗ್ರಹಿಸಿದಾಗ; ಗೆಳೆಯರೊಂದಿಗೆ ಆ ನಗರವನ್ನು ಸೂಕ್ಷ್ಮವಾಗಿ ಗ್ರಹಿಸಿದಾಗ; ಇವೆಲ್ಲ ಅನೇಕ ದಿನ ನೀನು ಅಲ್ಲಿ ತಂಗಿದಾಗ ಮಾತ್ರ ಸಾಧ್ಯವಾಗುತ್ತದೆ.

ನೀನು ನಿನ್ನ ಕೋರ್ಸ್‍ನ್ನು ಇಷ್ಟಪಡುತ್ತಿರುವೆ ಎಂದು ನಂಬಿದ್ದೇನೆ. ಸಮಯವಾದಾಗ ಪ್ಯಾರಿಸ್‍ನಿಂದ ಹೊರಗೆ ಹೋಗಿ ಆ ದೇಶದ ಗ್ರಾಮ ಪ್ರದೇಶಗಳನ್ನು ನೋಡು.

ಈ ದೇಶ ಇದ್ದಹಾಗೇ ಇದೆ; ಹಲವು ದುರಂತಗಳನ್ನು ಹೊರತುಪಡಿಸಿದರೆ. ಭೂಕಂಪ, ಕಾಂಗ್ರೆಸ್ ಪಕ್ಷದ ದುರಾಡಳಿತ… ಎಲ್ಲವೂ ಅಸಹ್ಯಕರವಾಗಿವೆ.

ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಸೌಖ್ಯ,

ನಿನ್ನ ಪ್ರೀತಿಯ
ಅಪ್ಪ

2) 2-11-1993
ಪ್ರೀತಿಯ ಗೌರು,

ಹತ್ತು ದಿನಗಳ ಹಿಂದೆ ನಾನು ಬರೆದ ಪತ್ರ ತಲುಪಿದೆ ಎಂದು ನಂಬಿರುವೆ. ಇಲ್ಲಿಂದ ಯಾರೂ ಪತ್ರ ಬರೆದಿಲ್ಲ ಎಂದು ನಿನಗೆ ಬೇಸರವಾಗಿದೆ ಎಂದು ಕೇಳಿದೆ. ಒಂದನ್ನು ನನಪಿನಲಿಟ್ಟುಕೋ. ಜನರು ಮೂಲಭೂತವಾಗಿ ಸ್ವಾರ್ಥಿಗಳಾಗಿರುತ್ತಾರೆ, ಯಾರಿಂದಲೂ ಯಾವುದನ್ನೂ ನಿರೀಕ್ಷಿಸುವುದು ತಪ್ಪು. ನೀನು ಇದನ್ನು ಅರಿತರೆ ಜೀವನದಲ್ಲಿ ಹೊರೆ ಕಡಿಮೆಯಾದಂತಾಗುತ್ತದೆ. ಸಾಕು ಈ ಉಪದೇಶಗಳು!

ಹೇಗಿದ್ದೀ? ಇಷ್ಟೋತ್ತಿಗಾಗಲೇ ನಿನಗೆ ಪ್ಯಾರಿಸ್ ಇಷ್ಟವಾಗಿರಬೇಕು. ಇಲ್ಲಿ ಮೊನ್ನೆಯವರೆಗೂ ಮಳೆ ಬರುತ್ತಿತ್ತು. ಆದರೆ ಈ ದಿನ ಸುಂದರವಾಗಿದೆ, bright, cool & thrilling! ಸದ್ಯದಲ್ಲೇ ಚಳಿಗಾಲ ಬರಲಿದೆ. ಈ ಬಾರಿಯ ದಸರಾ ಮತ್ತು ಗಣೇಶ ಹಬ್ಬಗಳು ತುಂಬಾ ಗದ್ದಲಮಯವಾಗಿದ್ದವು. ಈ ಗದ್ದಲಗಳ ನಡುವೆಯೇ 1970ರಲ್ಲಿ ಪ್ರಥಮವಾಗಿ ಪ್ರಕಟವಾಗಿದ್ದ ನನ್ನ “ಅಕ್ಷರ ಹೊಸಕಾವ್ಯ”ದ ಮರುಮುದ್ರಿಕೆಯನ್ನು ಹೊರತಂದೆವು.

ನಿನ್ನ ಪ್ರೀತಿಯ
ಅಪ್ಪ

3) 7-4-1994
ಪ್ರೀತಿಯ ಗೌರು,

ಇದೇ ಕೊನೆಯ ಕಾಗದ – ನೀನು ಪ್ಯಾರಿಸ್‍ನಿಂದ ಭಾರತಕ್ಕೆ ಹಿಂದಿರುಗುವ ಮುನ್ನ ಅನ್ನಿಸುತ್ತದೆ. ನೀನು ಟರ್ಕಿ ದೇಶದ ಜನರ ಬಗ್ಗೆ ಬರೆದದ್ದು ಕುತೂಹಲಕಾರಿಯಾಗಿತ್ತು. ಅವರು ಯುರೋಪಿಯನ್ ದೇಶದವರಿಗಿಂತ Courteous ಎಂದು ಬರೆದಿದ್ದೀ. ಆದರೆ ನ್ಯೂಸ್‍ವೀಕ್‍ನಲ್ಲಿ ಇತ್ತೀಚಿಗೆ ಮುಸ್ಲಿಂ ಮೂಲಭೂತವಾದಿಗಳು ಅಲ್ಜೀರಿಯ ಮತ್ತು ಈಜಿಪ್ಟ್ ದೇಶಗಳಲ್ಲಿಯಂತೆ ಟರ್ಕಿಯಲ್ಲಿಯೂ ತಮ್ಮ ಕಿತಾಪತಿ ಶುರು ಮಾಡಿದ್ದಾರೆ ಎಂದು ವರದಿಯಾಗಿತ್ತು. ಅದೊಂದು ದೊಡ್ಡ ದುರಂತ. ಯಾಕೆಂದರೆ, ಕಮಲ್ ಅತಾರುಕ್‍ನ ದೊಡ್ಡ ಸಾಧನೆ ಏನೆಂದರೆ, ಆತ ಟರ್ಕಿ ದೇಶವನ್ನು ಜಾತ್ಯತೀತ ರಾಜ್ಯವನ್ನಾಗಿಸಿದ್ದ. ಆದ್ದರಿಂದಲೇ ಟರ್ಕಿ ಯುರೋಪಿಗೆ ಹತ್ತಿರವಾಗಿತ್ತು.

ಈಗ ಫ್ರಾನ್ಸ್‌ನಲ್ಲಿ ವಸಂತ ಋತುಗಾಲ… ಪಶ್ಚಿಮ ಯುರೋಪ್ ದೇಶಗಳು ಈ ಸುಂದರವಾದ ಋತುಗಾಲಕ್ಕಾಗಿಯೇ ಹೇಳಿ ಮಾಡಿಸಿದಂತಿರಬೇಕು! ಅದರಲ್ಲಿಯೂ ಮೇ ತಿಂಗಳಂತೂ ಅತ್ಯಂತ ಆನಂದದಾಯಕವಾಗಿರುತ್ತದೆ ಎಂದು ಕೇಳಿದ್ದೇನೆ.

ನೀನು ಹಿಂದಿರುಗುವಾಗ ಮರೆಯದೇ ಒಂದೆರಡು ಸ್ಕಾಚ್ ಬಾಟಲ್‍ಗಳನ್ನು ತೆಗೆದುಕೊಂಡು ಬಾ. ತುಂಬಾ ದುಬಾರಿಯಾದದ್ದೇನೂ ಬೇಡ.

ನಿಜ, ನನಗೆ ಸಣ್ಣ ಸ್ಟ್ರೋಕ್ ಆಗಿತ್ತು. ಆದರೆ ಈಗ ಪರವಾಗಿಲ್ಲ.. ಡಾಲರ್‌ನಷ್ಟೇ ಸ್ಥಿರವಾಗಿದ್ದೇನೆ. (ಆದರೆ ಡಾಲರ್ ಮಾತ್ರ ಕುಸಿಯುತ್ತಿದೆಯಂತೆ!)

ಪುಸ್ತಕಗಳ ಬಗ್ಗೆ ಕೇಳಿದ್ದೀ. ಆದಷ್ಟು ಪುಸ್ತಕಗಳನ್ನು ತಗೊಂಡು ಬಾ. ಐಯೊನೆಸ್ಕೊ ತೀರಿಹೋದದ್ದು ಕೇಳಿ ಬೇಸರವಾಯಿತು. ಅವನು lovely fellow. ಆಲ್ಬರ್ಟ್ ಕಾಮು ಅಮೆರಿಕಾಕ್ಕೆ ಹೋಗಿ ಫಾಕ್‍ನರ್‌ನನ್ನು ಭೆಟ್ಟಿಯಾಗಿದ್ದರ ಪುಸ್ತಕ ಸಿಕ್ಕರೆ ತಗೊಂಡು ಬಾ. (ಅದರ ಹೆಸರು ಸದ್ಯಕ್ಕೆ ನನಗೆ ಬರುತ್ತಿಲ್ಲ).

ನಿನ್ನ ಪ್ರೀತಿಯ
ಅಪ್ಪ

4) 29-4-1994
ಪ್ರೀತಿಯ ಗೌರು,

ಇಂಗ್ಲೆಂಡ್‍ಗೆ ಮತ್ತೆ ಹೋದಾಗ ಒಂದು ಒಳ್ಳೆಯ ಅಂಗಡಿಗೆ ಹೋಗಿ ಜಾರ್ಜ್||| ಬಗ್ಗೆ ಪ್ರಕಟವಾಗಿರುವ ನಾಟಕದ ಪುಸ್ತಕವನ್ನು ಮರೆಯದೇ ತಗೊಂಡು ಬಾ. ಜಾರ್ಜ್||| ಎಂಬ ರಾಜನಿಗೆ ಅಮೆರಿಕಾದ ಸ್ವಾತಂತ್ರ್ಯ ಯುದ್ಧ ನಡೆಯುತ್ತಿರುವಾಗ ಹುಚ್ಚು ಹಿಡಿದಿತ್ತು. ಅವನು ಒಳ್ಳೆಯವನಾಗಿದ್ದರೂ ಅವನ ಸುತ್ತಲೂ ಇದ್ದ ಜನ ಅವನಿಗೆ ಹುಚ್ಚು ಹಿಡಿಸಿದ್ದರು! ಅವನ ಕಥೆ ಒಂದು ಒಳ್ಳೆಯ ನಾಟಕವಾಗಿ ಮೂಡಿಬಂದಿದೆಯಂತೆ. (ಆ ನಾಟಕದ ಪ್ರದರ್ಶನ ಈಗ ಇಂಗ್ಲೆಂಡ್‍ನಲ್ಲಿ ಆಗುತ್ತಿದೆಯೋ ಇಲ್ಲವೋ ಗೊತ್ತಿಲ್ಲ. ಬಹುಶಃ ನಾನು ಅಮೆರಿಕಾದಲ್ಲಿನ ಪ್ರದರ್ಶನದ ಬಗ್ಗೆ ವಿಮರ್ಶೆ ಓದಿರಬೇಕು) ಆ ನಾಟಕದ ಪುಸ್ತಕ ಸಿಕ್ಕರೆ ಮರೆಯದೇ ತಗೊಂಡು ಬಾ.

ನಾನೀಗ ಆರಾಮವಾಗಿದ್ದೇನೆ. rest, meditation ಮತ್ತು will powerಗಳಿಂದಾಗಿ!

ನೀ ಹೇಗಿದ್ದೀ? ಫ್ರಾನ್ಸ್ ಹೇಗಿದೆ? ನೀನು ನಿನ್ನ ಗೆಳೆಯರೊಂದಿಗೆ ಇರುವ ಹಲವು ಫೋಟೋಗಳನ್ನು ನೋಡಿದೆ. ನೀನು ಚೆನ್ನಾಗಿ ಕಾಣಿಸುತ್ತೀ..

ಚಿದು ಕಾಗದ ಬರೆದಿದ್ದ ಬೇರೆ ದೇಶಗಳಿಗೆ ಒಮ್ಮೆ ಪ್ರಯಾಣ ಮಾಡಿ ಎಂದು ಸೂಚಿಸಿದ್ದ. ಆದರೆ ನನಗೆ ಪ್ರಯಾಣ ಮಾಡುವಷ್ಟು ಆರೋಗ್ಯ ಇಲ್ಲ. ಹಾಗೆಯೇ ಈ ಟೂರಿಸ್ಟ್ ಜಾಗಗಳನ್ನು ಕಂಡರೆ ನನಗೆ ಆಸಹ್ಯ!

ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಮಳೆಯಾಗಿಲ್ಲ. ಬಹಳ ಸೆಖೆ. ಸಾಮಾನ್ಯವಾಗಿ ಏಪ್ರಿಲ್ ಕೊನೆಯ ಭಾಗದಲ್ಲಿ ಬೆಂಗಳೂರಿನಲ್ಲಿ ಮಳೆಯಾಗುತ್ತದೆ, ಅದಾದ ನಂತರ ಬೆಂಗಳೂರು ಟರ್ಫ್ ಕ್ಲಬ್‍ನವರು ರೇಸ್‍ಗಳಿಗೆ ತಮ್ಮ ಟ್ರ್ಯಾಕ್‍ಗಳನ್ನು ಸಿದ್ಧಪಡಿಸುತ್ತಾರೆ. ಈ ಬಾರಿ ಅದು doubtful.

ನಿನ್ನ ಪ್ರೀತಿಯ
ಅಪ್ಪ


ಇದನ್ನೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...