Homeಮುಖಪುಟಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

- Advertisement -
- Advertisement -

2022ರಲ್ಲಿ ನಡೆದಿದ್ದ ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೆ ನಾಲ್ವರನ್ನು ಬಂಧಿಸಿದೆ. ತಮಿಳುನಾಡಿನಾದ್ಯಂತ 27 ಸ್ಥಳಗಳಲ್ಲಿ ನಡೆಸಿದ ದಾಳಿಯ ವೇಳೆ ಈ ಬಂಧನ ನಡೆದಿದೆ.

ಬಂಧಿತರನ್ನು ಜಮೀಲ್ ಬಾಷಾ ಉಮರಿ, ಮೊಹಮ್ಮದ್ ಹುಸೇನ್ ಫೈಜಿ, ಇರ್ಷಾತ್, ಸೈಯದ್ ಅಬ್ದುರ್ ರೆಹಮಾನ್ ಉಮರಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎನ್‌ಐಎ 6 ಲ್ಯಾಪ್‌ಟಾಪ್‌ಗಳು, 25 ಸೆಲ್ ಫೋನ್‌ಗಳು, 34 ಸಿಮ್ ಕಾರ್ಡ್‌ಗಳು, ಹಲವಾರು ಎಸ್‌ಡಿ ಕಾರ್ಡ್‌ಗಳು ಮತ್ತು ಹಾರ್ಡ್ ಡ್ರೈವ್‌ಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 23, 2022ರಂದು ಕೊಯಮತ್ತೂರಿನ ಉದಕ್ಕಂನಲ್ಲಿ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಸ್ಫೋಟ ಸಂಭವಿಸಿದೆ. ದೀಪಾವಳಿಯ ದಿನದ ಸಂಜೆ ಜಮೇಶ ಮುಬಿನ್ ಎಂಬ ವ್ಯಕ್ತಿ ಚಲಾಯಿಸುತ್ತಿದ್ದ ಕಾರಿನಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮುಬಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಮಾರ್ಬಲ್‌ಗಳು, ಮೊಳೆಗಳು ಮತ್ತು ಇತರ ಚೂರುಗಳು ಇದ್ದವು ಎಂದು ತಿಳಿದುಬಂದಿದೆ.

ಬಳಿಕ ಕೊಯಮತ್ತೂರು ಪೊಲೀಸರು ಮುಬಿನ್ ನಿವಾಸದಿಂದ ಸಾಮಾನ್ಯವಾಗಿ  ಬಾಂಬ್‌ಗಳನ್ನು ತಯಾರಿಸಲು ಬಳಸುವ ಪೊಟಾಷಿಯಂ ನೈಟ್ರೇಟ್ ಮತ್ತು ಅಲ್ಯೂಮಿನಿಯಂ ಪುಡಿ, ಇದ್ದಿಲು ಮತ್ತು ಸಲ್ಫರ್ ಸೇರಿದಂತೆ 75 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಮೊಹಮ್ಮದ್ ಥಲ್ಕಾ, ಮೊಹಮ್ಮದ್ ಅಸರುದ್ದೀನ್, ಮೊಹಮ್ಮದ್ ರಿಯಾಜ್, ಫಿರೋಜ್ ಇಸ್ಮಾಯಿಲ್, ಮೊಹಮ್ಮದ್ ನವಾಜ್ ಇಸ್ಮಾಯಿಲ್ ಮತ್ತು ಅಸ್ಫರ್ ಖಾನ್ ಎಂಬ ಆರು ಜನರನ್ನು ಬಂಧಿಸಿದ್ದರು.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಶಿಫಾರಸಿನ ಮೇರೆಗೆ ತನಿಖೆಯನ್ನು ಅಕ್ಟೋಬರ್ 27 ರಂದು ಎನ್ಐಎಗೆ ವರ್ಗಾಯಿಸಲಾಗಿತ್ತು.

2019ರಲ್ಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಮುಬಿನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ನಂತರ ಪ್ರಕರಣದಿಂದ ಕೈಬಿಡಲಾಗಿತ್ತು. ಆದರೆ ಅವರ ಚಲನವಲನವನ್ನು ರಾಜ್ಯ ಮತ್ತು ರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದವು. ಇಂಜಿನಿಯರಿಂಗ್ ಪದವೀಧರರಾಗಿದ್ದ 25 ವರ್ಷದ ಮುಬಿನ್‌ನ್ನು ಕೊಯಮತ್ತೂರು ಕಾರು ಸ್ಫೋಟ ಪ್ರಕರಣಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ಇದನ್ನು ಓದಿ: ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...