Homeಮುಖಪುಟಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ (ಡಿ.2) ವರದಿ ಮಾಡಿದೆ.

ಈ ನಾಲ್ವರು ಪುರುಷರು ಹಲವಾರು ವರ್ಷಗಳಿಂದ ನಯಾಗಢದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೊಳ್ಳೆ ಪರದೆ, ಹೊದಿಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದರು. ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಡೊಮ್ಕಲ್ ಉಪವಿಭಾಗದ ಜಲಂಗಿ ಬ್ಲಾಕ್‌ನಲ್ಲಿರುವ ಸಾಗರ್‌ಪಾರ ಗ್ರಾಮ ಪಂಚಾಯತ್‌ಗೆ ಸೇರಿದವರು.

ನವೆಂಬರ್ 27ರಂದು, ನಾಲ್ವರಲ್ಲಿ ಒಬ್ಬರಾದ ಸಾಹೇಬ್ ಶೇಖ್ ಎಂಬವರ ಬಾಡಿಗೆ ಮನೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, “ನೀವು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳು” ಎಂದು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅಧಿಕಾರಿಗಳು ತನ್ನ ಗುರುತಿನ ಚೀಟಿಗಳನ್ನು ಕೇಳಿದ್ದಾರೆ ಎಂದು ಶೇಖ್ ಹೇಳಿರುವುದಾಗಿ ವರದಿ ತಿಳಿಸಿದೆ.

“ಅಧಿಕಾರಿಗೆ ನಾನು ನನ್ನ ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ತೋರಿಸಿದೆ. ಅದಕ್ಕೆ ಅವರು ತೃಪ್ತರಾಗಲಿಲ್ಲ. ನನ್ನ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ಸಂಜೆ 5 ಗಂಟೆಯೊಳಗೆ ಎಲ್ಲರೂ ಠಾಣೆಗೆ ಬರುವಂತೆ ಸೂಚಿಸಿದರು” ಎಂದು ಸಾಹೇಬ್ ಶೇಖ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸ್ ಅಧಿಕಾರಿ ಹೇಳಿದಂತೆ ನಾಲ್ವರೂ ಓಡಗಾಂವ್ ಪೊಲೀಸ್ ಠಾಣೆಗ ಹೋಗಿದ್ದರು. ಅಲ್ಲಿ ಒಬ್ಬ ಅಧಿಕಾರಿ ನಾಲ್ವರೂ ಮೂರು ದಿನಗಳಲ್ಲಿ ಪಟ್ಟಣ ತೊರೆಯುವಂತೆ ಸೂಚಿಸಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಕಾರಣ ಅವರನ್ನು ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಂಬುವುದಾಗಿ ಆರೋಪಿಸಲಾಗಿದೆ ಎಂದು ವರದಿ ಹೇಳಿದೆ.

ಪೊಲೀಸರು ನಾಲ್ವರಿಂದಲೂ ಸಹಿ ಮಾಡಿದ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

“ನಾವು ಠಾಣೆಗೆ ಹೋದಾಗ ನಮಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪು ಕೂಡ ಠಾಣೆಯಲ್ಲಿ ಇತ್ತು. ಅವರನ್ನು ನಾವು ಮಾರುಕಟ್ಟೆ ಸೇರಿದಂತೆ ವಿವಿದೆಡೆಗಳಲ್ಲಿ ನೋಡಿದ್ದೇವೆ. ಅವರ ಮುಖ ನಮಗೆ ಪರಿಚಯವಿದೆ” ಎಂದು ನಾಲ್ವರಲ್ಲಿ ಒಬ್ಬರಾದ ಅಬ್ದುಸ್ಸಲಾಂ ಎಂಬವರು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವಿವರಿಸಿದೆ.

ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಮರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ, ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಕೇಳುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾದೇಶಕ್ಕೆ ಕಳುಹಿಸಲ್ಪಟ್ಟ ವ್ಯಕ್ತಿಗಳು ಭಾರತದಲ್ಲಿನ ರಾಜ್ಯ ಅಧಿಕಾರಿಗಳು ಅವರು ಭಾರತೀಯರು ಎಂದು ಸಾಬೀತುಪಡಿಸಿದ ನಂತರ ದೇಶಕ್ಕೆ ಮರಳಿದ್ದಾರೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

ಒಡಿಶಾದಲ್ಲಿ, ಇತ್ತೀಚಿನ ದಿನಗಳಲ್ಲಿ ಬಂಗಾಳಿ ಮುಸ್ಲಿಮರು ಹಿಂಸಾಚಾರ ಮತ್ತು ಬೆದರಿಕೆಗಳನ್ನು ಎದುರಿಸುತ್ತಿರುವ ಬಗ್ಗೆ ಹಲವಾರು ವರದಿಯಾಗಿದೆ.

ನವೆಂಬರ್ 24ರಂದು, ಮುರ್ಷಿದಾಬಾದ್‌ನ ಚಳಿಗಾಲದ ಉಡುಪುಗಳ ಮಾರಾಟಗಾರ 24 ವರ್ಷದ ರಾಹುಲ್ ಇಸ್ಲಾಂ ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಲಾಗಿತ್ತು. ಗಂಜಾಂನಲ್ಲಿ ‘ಜೈ ಶ್ರೀ ರಾಮ್’ ಎಂದು ಹೇಳಲು ಅವರಿಗೆ ಒತ್ತಾಯಿಸಲಾಗಿತ್ತು. ನಿರಾಕರಿಸಿದ್ದಕ್ಕೆ ಗುಂಪೊಂದು ಅವರನ್ನು ಥಳಿಸಿತ್ತು ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮುರ್ಷಿದಾಬಾದ್‌ನಲ್ಲಿರುವ ತನ್ನ ಮನೆಗೆ ಹಿಂದಿರುಗಿದ ಇಸ್ಲಾಂನ ಉದ್ಯೋಗದಾತ ಮೈನುಲ್ ಸರ್ಕಾರ್, ಸಹಾಯಕ್ಕಾಗಿ ಒಡಿಶಾದ ಪೊಲೀಸರ ಬಳಿ ಹೋಗಿದ್ದೆ ಆದರೆ ಯಾವುದೇ ಮಾಹಿತಿ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈನಲ್ಲಿ, ಒಡಿಶಾದ ಜಾರ್ಸುಗುಡದಲ್ಲಿ ನೂರಾರು ಬಂಗಾಳಿ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು. ಅಧಿಕಾರಿಗಳು ಅವರು ಭಾರತೀಯರು ಎಂದು ಖಚಿತಪಡಿಸಿಕೊಂಡ ನಂತರ ಅವರಲ್ಲಿ ಹಲವರನ್ನು ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...