Homeಮುಖಪುಟಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ (ಡಿ.2) ವರದಿ ಮಾಡಿದೆ.

ಈ ನಾಲ್ವರು ಪುರುಷರು ಹಲವಾರು ವರ್ಷಗಳಿಂದ ನಯಾಗಢದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೊಳ್ಳೆ ಪರದೆ, ಹೊದಿಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದರು. ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಡೊಮ್ಕಲ್ ಉಪವಿಭಾಗದ ಜಲಂಗಿ ಬ್ಲಾಕ್‌ನಲ್ಲಿರುವ ಸಾಗರ್‌ಪಾರ ಗ್ರಾಮ ಪಂಚಾಯತ್‌ಗೆ ಸೇರಿದವರು.

ನವೆಂಬರ್ 27ರಂದು, ನಾಲ್ವರಲ್ಲಿ ಒಬ್ಬರಾದ ಸಾಹೇಬ್ ಶೇಖ್ ಎಂಬವರ ಬಾಡಿಗೆ ಮನೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, “ನೀವು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳು” ಎಂದು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅಧಿಕಾರಿಗಳು ತನ್ನ ಗುರುತಿನ ಚೀಟಿಗಳನ್ನು ಕೇಳಿದ್ದಾರೆ ಎಂದು ಶೇಖ್ ಹೇಳಿರುವುದಾಗಿ ವರದಿ ತಿಳಿಸಿದೆ.

“ಅಧಿಕಾರಿಗೆ ನಾನು ನನ್ನ ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ತೋರಿಸಿದೆ. ಅದಕ್ಕೆ ಅವರು ತೃಪ್ತರಾಗಲಿಲ್ಲ. ನನ್ನ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ಸಂಜೆ 5 ಗಂಟೆಯೊಳಗೆ ಎಲ್ಲರೂ ಠಾಣೆಗೆ ಬರುವಂತೆ ಸೂಚಿಸಿದರು” ಎಂದು ಸಾಹೇಬ್ ಶೇಖ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸ್ ಅಧಿಕಾರಿ ಹೇಳಿದಂತೆ ನಾಲ್ವರೂ ಓಡಗಾಂವ್ ಪೊಲೀಸ್ ಠಾಣೆಗ ಹೋಗಿದ್ದರು. ಅಲ್ಲಿ ಒಬ್ಬ ಅಧಿಕಾರಿ ನಾಲ್ವರೂ ಮೂರು ದಿನಗಳಲ್ಲಿ ಪಟ್ಟಣ ತೊರೆಯುವಂತೆ ಸೂಚಿಸಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಕಾರಣ ಅವರನ್ನು ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಂಬುವುದಾಗಿ ಆರೋಪಿಸಲಾಗಿದೆ ಎಂದು ವರದಿ ಹೇಳಿದೆ.

ಪೊಲೀಸರು ನಾಲ್ವರಿಂದಲೂ ಸಹಿ ಮಾಡಿದ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

“ನಾವು ಠಾಣೆಗೆ ಹೋದಾಗ ನಮಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪು ಕೂಡ ಠಾಣೆಯಲ್ಲಿ ಇತ್ತು. ಅವರನ್ನು ನಾವು ಮಾರುಕಟ್ಟೆ ಸೇರಿದಂತೆ ವಿವಿದೆಡೆಗಳಲ್ಲಿ ನೋಡಿದ್ದೇವೆ. ಅವರ ಮುಖ ನಮಗೆ ಪರಿಚಯವಿದೆ” ಎಂದು ನಾಲ್ವರಲ್ಲಿ ಒಬ್ಬರಾದ ಅಬ್ದುಸ್ಸಲಾಂ ಎಂಬವರು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವಿವರಿಸಿದೆ.

ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಮರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ, ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಕೇಳುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾದೇಶಕ್ಕೆ ಕಳುಹಿಸಲ್ಪಟ್ಟ ವ್ಯಕ್ತಿಗಳು ಭಾರತದಲ್ಲಿನ ರಾಜ್ಯ ಅಧಿಕಾರಿಗಳು ಅವರು ಭಾರತೀಯರು ಎಂದು ಸಾಬೀತುಪಡಿಸಿದ ನಂತರ ದೇಶಕ್ಕೆ ಮರಳಿದ್ದಾರೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

ಒಡಿಶಾದಲ್ಲಿ, ಇತ್ತೀಚಿನ ದಿನಗಳಲ್ಲಿ ಬಂಗಾಳಿ ಮುಸ್ಲಿಮರು ಹಿಂಸಾಚಾರ ಮತ್ತು ಬೆದರಿಕೆಗಳನ್ನು ಎದುರಿಸುತ್ತಿರುವ ಬಗ್ಗೆ ಹಲವಾರು ವರದಿಯಾಗಿದೆ.

ನವೆಂಬರ್ 24ರಂದು, ಮುರ್ಷಿದಾಬಾದ್‌ನ ಚಳಿಗಾಲದ ಉಡುಪುಗಳ ಮಾರಾಟಗಾರ 24 ವರ್ಷದ ರಾಹುಲ್ ಇಸ್ಲಾಂ ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಲಾಗಿತ್ತು. ಗಂಜಾಂನಲ್ಲಿ ‘ಜೈ ಶ್ರೀ ರಾಮ್’ ಎಂದು ಹೇಳಲು ಅವರಿಗೆ ಒತ್ತಾಯಿಸಲಾಗಿತ್ತು. ನಿರಾಕರಿಸಿದ್ದಕ್ಕೆ ಗುಂಪೊಂದು ಅವರನ್ನು ಥಳಿಸಿತ್ತು ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮುರ್ಷಿದಾಬಾದ್‌ನಲ್ಲಿರುವ ತನ್ನ ಮನೆಗೆ ಹಿಂದಿರುಗಿದ ಇಸ್ಲಾಂನ ಉದ್ಯೋಗದಾತ ಮೈನುಲ್ ಸರ್ಕಾರ್, ಸಹಾಯಕ್ಕಾಗಿ ಒಡಿಶಾದ ಪೊಲೀಸರ ಬಳಿ ಹೋಗಿದ್ದೆ ಆದರೆ ಯಾವುದೇ ಮಾಹಿತಿ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈನಲ್ಲಿ, ಒಡಿಶಾದ ಜಾರ್ಸುಗುಡದಲ್ಲಿ ನೂರಾರು ಬಂಗಾಳಿ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು. ಅಧಿಕಾರಿಗಳು ಅವರು ಭಾರತೀಯರು ಎಂದು ಖಚಿತಪಡಿಸಿಕೊಂಡ ನಂತರ ಅವರಲ್ಲಿ ಹಲವರನ್ನು ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...