Homeಮುಖಪುಟಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ (ಡಿ.2) ವರದಿ ಮಾಡಿದೆ.

ಈ ನಾಲ್ವರು ಪುರುಷರು ಹಲವಾರು ವರ್ಷಗಳಿಂದ ನಯಾಗಢದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೊಳ್ಳೆ ಪರದೆ, ಹೊದಿಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದರು. ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಡೊಮ್ಕಲ್ ಉಪವಿಭಾಗದ ಜಲಂಗಿ ಬ್ಲಾಕ್‌ನಲ್ಲಿರುವ ಸಾಗರ್‌ಪಾರ ಗ್ರಾಮ ಪಂಚಾಯತ್‌ಗೆ ಸೇರಿದವರು.

ನವೆಂಬರ್ 27ರಂದು, ನಾಲ್ವರಲ್ಲಿ ಒಬ್ಬರಾದ ಸಾಹೇಬ್ ಶೇಖ್ ಎಂಬವರ ಬಾಡಿಗೆ ಮನೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, “ನೀವು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳು” ಎಂದು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅಧಿಕಾರಿಗಳು ತನ್ನ ಗುರುತಿನ ಚೀಟಿಗಳನ್ನು ಕೇಳಿದ್ದಾರೆ ಎಂದು ಶೇಖ್ ಹೇಳಿರುವುದಾಗಿ ವರದಿ ತಿಳಿಸಿದೆ.

“ಅಧಿಕಾರಿಗೆ ನಾನು ನನ್ನ ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ತೋರಿಸಿದೆ. ಅದಕ್ಕೆ ಅವರು ತೃಪ್ತರಾಗಲಿಲ್ಲ. ನನ್ನ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ಸಂಜೆ 5 ಗಂಟೆಯೊಳಗೆ ಎಲ್ಲರೂ ಠಾಣೆಗೆ ಬರುವಂತೆ ಸೂಚಿಸಿದರು” ಎಂದು ಸಾಹೇಬ್ ಶೇಖ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸ್ ಅಧಿಕಾರಿ ಹೇಳಿದಂತೆ ನಾಲ್ವರೂ ಓಡಗಾಂವ್ ಪೊಲೀಸ್ ಠಾಣೆಗ ಹೋಗಿದ್ದರು. ಅಲ್ಲಿ ಒಬ್ಬ ಅಧಿಕಾರಿ ನಾಲ್ವರೂ ಮೂರು ದಿನಗಳಲ್ಲಿ ಪಟ್ಟಣ ತೊರೆಯುವಂತೆ ಸೂಚಿಸಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಕಾರಣ ಅವರನ್ನು ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಂಬುವುದಾಗಿ ಆರೋಪಿಸಲಾಗಿದೆ ಎಂದು ವರದಿ ಹೇಳಿದೆ.

ಪೊಲೀಸರು ನಾಲ್ವರಿಂದಲೂ ಸಹಿ ಮಾಡಿದ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

“ನಾವು ಠಾಣೆಗೆ ಹೋದಾಗ ನಮಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪು ಕೂಡ ಠಾಣೆಯಲ್ಲಿ ಇತ್ತು. ಅವರನ್ನು ನಾವು ಮಾರುಕಟ್ಟೆ ಸೇರಿದಂತೆ ವಿವಿದೆಡೆಗಳಲ್ಲಿ ನೋಡಿದ್ದೇವೆ. ಅವರ ಮುಖ ನಮಗೆ ಪರಿಚಯವಿದೆ” ಎಂದು ನಾಲ್ವರಲ್ಲಿ ಒಬ್ಬರಾದ ಅಬ್ದುಸ್ಸಲಾಂ ಎಂಬವರು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವಿವರಿಸಿದೆ.

ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಮರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ, ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಕೇಳುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾದೇಶಕ್ಕೆ ಕಳುಹಿಸಲ್ಪಟ್ಟ ವ್ಯಕ್ತಿಗಳು ಭಾರತದಲ್ಲಿನ ರಾಜ್ಯ ಅಧಿಕಾರಿಗಳು ಅವರು ಭಾರತೀಯರು ಎಂದು ಸಾಬೀತುಪಡಿಸಿದ ನಂತರ ದೇಶಕ್ಕೆ ಮರಳಿದ್ದಾರೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

ಒಡಿಶಾದಲ್ಲಿ, ಇತ್ತೀಚಿನ ದಿನಗಳಲ್ಲಿ ಬಂಗಾಳಿ ಮುಸ್ಲಿಮರು ಹಿಂಸಾಚಾರ ಮತ್ತು ಬೆದರಿಕೆಗಳನ್ನು ಎದುರಿಸುತ್ತಿರುವ ಬಗ್ಗೆ ಹಲವಾರು ವರದಿಯಾಗಿದೆ.

ನವೆಂಬರ್ 24ರಂದು, ಮುರ್ಷಿದಾಬಾದ್‌ನ ಚಳಿಗಾಲದ ಉಡುಪುಗಳ ಮಾರಾಟಗಾರ 24 ವರ್ಷದ ರಾಹುಲ್ ಇಸ್ಲಾಂ ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಲಾಗಿತ್ತು. ಗಂಜಾಂನಲ್ಲಿ ‘ಜೈ ಶ್ರೀ ರಾಮ್’ ಎಂದು ಹೇಳಲು ಅವರಿಗೆ ಒತ್ತಾಯಿಸಲಾಗಿತ್ತು. ನಿರಾಕರಿಸಿದ್ದಕ್ಕೆ ಗುಂಪೊಂದು ಅವರನ್ನು ಥಳಿಸಿತ್ತು ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮುರ್ಷಿದಾಬಾದ್‌ನಲ್ಲಿರುವ ತನ್ನ ಮನೆಗೆ ಹಿಂದಿರುಗಿದ ಇಸ್ಲಾಂನ ಉದ್ಯೋಗದಾತ ಮೈನುಲ್ ಸರ್ಕಾರ್, ಸಹಾಯಕ್ಕಾಗಿ ಒಡಿಶಾದ ಪೊಲೀಸರ ಬಳಿ ಹೋಗಿದ್ದೆ ಆದರೆ ಯಾವುದೇ ಮಾಹಿತಿ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈನಲ್ಲಿ, ಒಡಿಶಾದ ಜಾರ್ಸುಗುಡದಲ್ಲಿ ನೂರಾರು ಬಂಗಾಳಿ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು. ಅಧಿಕಾರಿಗಳು ಅವರು ಭಾರತೀಯರು ಎಂದು ಖಚಿತಪಡಿಸಿಕೊಂಡ ನಂತರ ಅವರಲ್ಲಿ ಹಲವರನ್ನು ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...