Homeಮುಖಪುಟಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ (ಡಿ.2) ವರದಿ ಮಾಡಿದೆ.

ಈ ನಾಲ್ವರು ಪುರುಷರು ಹಲವಾರು ವರ್ಷಗಳಿಂದ ನಯಾಗಢದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೊಳ್ಳೆ ಪರದೆ, ಹೊದಿಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದರು. ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಡೊಮ್ಕಲ್ ಉಪವಿಭಾಗದ ಜಲಂಗಿ ಬ್ಲಾಕ್‌ನಲ್ಲಿರುವ ಸಾಗರ್‌ಪಾರ ಗ್ರಾಮ ಪಂಚಾಯತ್‌ಗೆ ಸೇರಿದವರು.

ನವೆಂಬರ್ 27ರಂದು, ನಾಲ್ವರಲ್ಲಿ ಒಬ್ಬರಾದ ಸಾಹೇಬ್ ಶೇಖ್ ಎಂಬವರ ಬಾಡಿಗೆ ಮನೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, “ನೀವು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳು” ಎಂದು ಆರೋಪಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಅಧಿಕಾರಿಗಳು ತನ್ನ ಗುರುತಿನ ಚೀಟಿಗಳನ್ನು ಕೇಳಿದ್ದಾರೆ ಎಂದು ಶೇಖ್ ಹೇಳಿರುವುದಾಗಿ ವರದಿ ತಿಳಿಸಿದೆ.

“ಅಧಿಕಾರಿಗೆ ನಾನು ನನ್ನ ಆಧಾರ್ ಕಾರ್ಡ್‌ ಮತ್ತು ವೋಟರ್ ಐಡಿ ತೋರಿಸಿದೆ. ಅದಕ್ಕೆ ಅವರು ತೃಪ್ತರಾಗಲಿಲ್ಲ. ನನ್ನ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ಸಂಜೆ 5 ಗಂಟೆಯೊಳಗೆ ಎಲ್ಲರೂ ಠಾಣೆಗೆ ಬರುವಂತೆ ಸೂಚಿಸಿದರು” ಎಂದು ಸಾಹೇಬ್ ಶೇಖ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸ್ ಅಧಿಕಾರಿ ಹೇಳಿದಂತೆ ನಾಲ್ವರೂ ಓಡಗಾಂವ್ ಪೊಲೀಸ್ ಠಾಣೆಗ ಹೋಗಿದ್ದರು. ಅಲ್ಲಿ ಒಬ್ಬ ಅಧಿಕಾರಿ ನಾಲ್ವರೂ ಮೂರು ದಿನಗಳಲ್ಲಿ ಪಟ್ಟಣ ತೊರೆಯುವಂತೆ ಸೂಚಿಸಿದ್ದಾರೆ. ಬಂಗಾಳಿ ಭಾಷೆಯಲ್ಲಿ ಮಾತನಾಡಿದ ಕಾರಣ ಅವರನ್ನು ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಂಬುವುದಾಗಿ ಆರೋಪಿಸಲಾಗಿದೆ ಎಂದು ವರದಿ ಹೇಳಿದೆ.

ಪೊಲೀಸರು ನಾಲ್ವರಿಂದಲೂ ಸಹಿ ಮಾಡಿದ ದಾಖಲೆಗಳ ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

“ನಾವು ಠಾಣೆಗೆ ಹೋದಾಗ ನಮಗೆ ಕಿರುಕುಳ ನೀಡುತ್ತಿದ್ದ ಹಿಂದುತ್ವ ಗುಂಪು ಕೂಡ ಠಾಣೆಯಲ್ಲಿ ಇತ್ತು. ಅವರನ್ನು ನಾವು ಮಾರುಕಟ್ಟೆ ಸೇರಿದಂತೆ ವಿವಿದೆಡೆಗಳಲ್ಲಿ ನೋಡಿದ್ದೇವೆ. ಅವರ ಮುಖ ನಮಗೆ ಪರಿಚಯವಿದೆ” ಎಂದು ನಾಲ್ವರಲ್ಲಿ ಒಬ್ಬರಾದ ಅಬ್ದುಸ್ಸಲಾಂ ಎಂಬವರು ಹೇಳಿದ್ದಾರೆ ಎಂದು ದಿ ಟೆಲಿಗ್ರಾಫ್ ವಿವರಿಸಿದೆ.

ನಾಲ್ವರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ಗೆ ಮರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ, ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಕೇಳುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾದೇಶಕ್ಕೆ ಕಳುಹಿಸಲ್ಪಟ್ಟ ವ್ಯಕ್ತಿಗಳು ಭಾರತದಲ್ಲಿನ ರಾಜ್ಯ ಅಧಿಕಾರಿಗಳು ಅವರು ಭಾರತೀಯರು ಎಂದು ಸಾಬೀತುಪಡಿಸಿದ ನಂತರ ದೇಶಕ್ಕೆ ಮರಳಿದ್ದಾರೆ.

ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

ಒಡಿಶಾದಲ್ಲಿ, ಇತ್ತೀಚಿನ ದಿನಗಳಲ್ಲಿ ಬಂಗಾಳಿ ಮುಸ್ಲಿಮರು ಹಿಂಸಾಚಾರ ಮತ್ತು ಬೆದರಿಕೆಗಳನ್ನು ಎದುರಿಸುತ್ತಿರುವ ಬಗ್ಗೆ ಹಲವಾರು ವರದಿಯಾಗಿದೆ.

ನವೆಂಬರ್ 24ರಂದು, ಮುರ್ಷಿದಾಬಾದ್‌ನ ಚಳಿಗಾಲದ ಉಡುಪುಗಳ ಮಾರಾಟಗಾರ 24 ವರ್ಷದ ರಾಹುಲ್ ಇಸ್ಲಾಂ ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಲಾಗಿತ್ತು. ಗಂಜಾಂನಲ್ಲಿ ‘ಜೈ ಶ್ರೀ ರಾಮ್’ ಎಂದು ಹೇಳಲು ಅವರಿಗೆ ಒತ್ತಾಯಿಸಲಾಗಿತ್ತು. ನಿರಾಕರಿಸಿದ್ದಕ್ಕೆ ಗುಂಪೊಂದು ಅವರನ್ನು ಥಳಿಸಿತ್ತು ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮುರ್ಷಿದಾಬಾದ್‌ನಲ್ಲಿರುವ ತನ್ನ ಮನೆಗೆ ಹಿಂದಿರುಗಿದ ಇಸ್ಲಾಂನ ಉದ್ಯೋಗದಾತ ಮೈನುಲ್ ಸರ್ಕಾರ್, ಸಹಾಯಕ್ಕಾಗಿ ಒಡಿಶಾದ ಪೊಲೀಸರ ಬಳಿ ಹೋಗಿದ್ದೆ ಆದರೆ ಯಾವುದೇ ಮಾಹಿತಿ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈನಲ್ಲಿ, ಒಡಿಶಾದ ಜಾರ್ಸುಗುಡದಲ್ಲಿ ನೂರಾರು ಬಂಗಾಳಿ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು. ಅಧಿಕಾರಿಗಳು ಅವರು ಭಾರತೀಯರು ಎಂದು ಖಚಿತಪಡಿಸಿಕೊಂಡ ನಂತರ ಅವರಲ್ಲಿ ಹಲವರನ್ನು ಬಿಡುಗಡೆ ಮಾಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...