Homeಮುಖಪುಟಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ.

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಕೊನೆಗೂ ಮುಗಿದಿದೆ. ಹಾಲಿ ಸಚಿವರಾಗಿದ್ದ 11 ಮಂದಿ ರಾಜೀನಾಮೆ ನೀಡಿದ್ದು, ಹೊಸದಾಗಿ ಒಟ್ಟು 43 ಜನರಿಗೆ ಸ್ಥಾನ ಕಲ್ಪಿಸಲಾಗಿದೆ. ಅದರಲ್ಲಿ ಕರ್ನಾಟಕದ ನಾಲ್ವರು ಸೇರಿದ್ದಾರೆ.

ಕರ್ನಾಟವನ್ನು ಪ್ರತಿನಿಧಿಸಿ ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗದ ಎ.ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ಕರ್ನಾಟಕದ ವತಿಯಿಂದ ಮೋದಿ ಸಂಪುಟ ಸೇರಿದವರಾಗಿದ್ದಾರೆ. ಇವರ ಸಣ್ಣ ಪರಿಚಯ ಹೀಗಿದೆ.

ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರು, ಕರ್ನಾಟಕ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾದ ಏಕೈಕ ಮಹಿಳಾ ಸಂಸದರು. ಎಬಿವಿಪಿ ಹಿನ್ನೆಲೆಯ ಇವರು ಯಡಿಯೂರಪ್ಪನವರ ಆಪ್ತರು. 2004ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಇವರು 2008ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕರಾವಳಿ ಕರ್ನಾಟಕ, ಒಕ್ಕಲಿಗ ಸಮುದಾಯ ಮತ್ತು ಮಹಿಳೆ ಈ ಎಲ್ಲಾ ಮಾನದಂಡಗಳಿಂದ ಇವರು ಸಚಿವ ಸಂಪುಟ ಸೇರಿದ್ದಾರೆ ಎನ್ನಲಾಗುತ್ತಿದೆ.

ಎ.ನಾರಾಯಣಸ್ವಾಮಿ

ಚಿತ್ರದುರ್ಗ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದ ಎ.ನಾರಾಯಣಸ್ವಾಮಿಯವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ. ಎಡಗೈ ದಲಿತ ಸಮುದಾಯವನ್ನು ಪ್ರತಿನಿಧಿಸುವ ಕಾರಣದಿಂದ ಇವರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಎ ನಾರಾಯಣಸ್ವಾಮಿಯವರು ಬೆಂಗಳೂರಿನ ಆನೇಕಲ್‌ನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದರು. ಈಗ ಕೇಂದ್ರ ಸಚಿವರಾಗಿದ್ದಾರೆ.

ಭಗವಂತ ಖೂಬಾ

ಎರಡು ಬಾರಿ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖೂಬಾರವರು ಲೋಕಸಭೆ ಸದಸ್ಯರಿಗೆ ಗಣಕ ವಿತರಿಸುವ ಸಮಿತಿ ಮತ್ತು ಸದಸ್ಯರಾಗಿದ್ದಾರೆ. ಈ ಬಾರಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೀವ್‌ ಚಂದ್ರಶೇಖರ್

ಮೂಲತಃ ಗುಜರಾತ್‌ನವರಾದ ರಾಜೀವ್ ಚಂದ್ರಶೇಖರ್ 2006ರಿಂದ ಸ್ವತಂತ್ರ ರಾಜ್ಯಸಭಾ ಸದಸ್ಯರಾಗಿದ್ದು, 2018ರಲ್ಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇವರು ಬಿಜೆಪಿ ರಾಷ್ಟ್ರೀಯ ವಕ್ತಾರರು ಹೌದು.

ಏಷ್ಯಾ ನೆಟ್ ಮಾಧ್ಯಮ ಸಂಸ್ಥೆಯ ಮಾಲೀಕರದು ಇವರು ಇತ್ತೀಚೆಗೆ ಪುದುಚೇರಿಯಲ್ಲಿ ಎನ್‌ಡಿಎ ಗೆಲುವಿಗೆ ಕಾರ್ಯತಂತ್ರ ರೂಪಿಸಿದವರು ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮೋದಿ ಸಂಪುಟ ಸೇರಿದ 43 ಜನರ ಪಟ್ಟಿ ಈ ಕೆಳಗಿನಂತಿದೆ.


ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಪುನರ್ರಚನೆ: ಡಾ. ಹರ್ಷವರ್ಧನ್‌ ಸೇರಿ 9 ಸಚಿವರ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...