Homeಮುಖಪುಟಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ.

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಕೊನೆಗೂ ಮುಗಿದಿದೆ. ಹಾಲಿ ಸಚಿವರಾಗಿದ್ದ 11 ಮಂದಿ ರಾಜೀನಾಮೆ ನೀಡಿದ್ದು, ಹೊಸದಾಗಿ ಒಟ್ಟು 43 ಜನರಿಗೆ ಸ್ಥಾನ ಕಲ್ಪಿಸಲಾಗಿದೆ. ಅದರಲ್ಲಿ ಕರ್ನಾಟಕದ ನಾಲ್ವರು ಸೇರಿದ್ದಾರೆ.

ಕರ್ನಾಟವನ್ನು ಪ್ರತಿನಿಧಿಸಿ ಈ ಮೊದಲು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗದ ಎ.ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ಕರ್ನಾಟಕದ ವತಿಯಿಂದ ಮೋದಿ ಸಂಪುಟ ಸೇರಿದವರಾಗಿದ್ದಾರೆ. ಇವರ ಸಣ್ಣ ಪರಿಚಯ ಹೀಗಿದೆ.

ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರು, ಕರ್ನಾಟಕ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾದ ಏಕೈಕ ಮಹಿಳಾ ಸಂಸದರು. ಎಬಿವಿಪಿ ಹಿನ್ನೆಲೆಯ ಇವರು ಯಡಿಯೂರಪ್ಪನವರ ಆಪ್ತರು. 2004ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಇವರು 2008ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕರಾವಳಿ ಕರ್ನಾಟಕ, ಒಕ್ಕಲಿಗ ಸಮುದಾಯ ಮತ್ತು ಮಹಿಳೆ ಈ ಎಲ್ಲಾ ಮಾನದಂಡಗಳಿಂದ ಇವರು ಸಚಿವ ಸಂಪುಟ ಸೇರಿದ್ದಾರೆ ಎನ್ನಲಾಗುತ್ತಿದೆ.

ಎ.ನಾರಾಯಣಸ್ವಾಮಿ

ಚಿತ್ರದುರ್ಗ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದ ಎ.ನಾರಾಯಣಸ್ವಾಮಿಯವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ. ಎಡಗೈ ದಲಿತ ಸಮುದಾಯವನ್ನು ಪ್ರತಿನಿಧಿಸುವ ಕಾರಣದಿಂದ ಇವರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಎ ನಾರಾಯಣಸ್ವಾಮಿಯವರು ಬೆಂಗಳೂರಿನ ಆನೇಕಲ್‌ನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದರು. ಈಗ ಕೇಂದ್ರ ಸಚಿವರಾಗಿದ್ದಾರೆ.

ಭಗವಂತ ಖೂಬಾ

ಎರಡು ಬಾರಿ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖೂಬಾರವರು ಲೋಕಸಭೆ ಸದಸ್ಯರಿಗೆ ಗಣಕ ವಿತರಿಸುವ ಸಮಿತಿ ಮತ್ತು ಸದಸ್ಯರಾಗಿದ್ದಾರೆ. ಈ ಬಾರಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೀವ್‌ ಚಂದ್ರಶೇಖರ್

ಮೂಲತಃ ಗುಜರಾತ್‌ನವರಾದ ರಾಜೀವ್ ಚಂದ್ರಶೇಖರ್ 2006ರಿಂದ ಸ್ವತಂತ್ರ ರಾಜ್ಯಸಭಾ ಸದಸ್ಯರಾಗಿದ್ದು, 2018ರಲ್ಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇವರು ಬಿಜೆಪಿ ರಾಷ್ಟ್ರೀಯ ವಕ್ತಾರರು ಹೌದು.

ಏಷ್ಯಾ ನೆಟ್ ಮಾಧ್ಯಮ ಸಂಸ್ಥೆಯ ಮಾಲೀಕರದು ಇವರು ಇತ್ತೀಚೆಗೆ ಪುದುಚೇರಿಯಲ್ಲಿ ಎನ್‌ಡಿಎ ಗೆಲುವಿಗೆ ಕಾರ್ಯತಂತ್ರ ರೂಪಿಸಿದವರು ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮೋದಿ ಸಂಪುಟ ಸೇರಿದ 43 ಜನರ ಪಟ್ಟಿ ಈ ಕೆಳಗಿನಂತಿದೆ.


ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಪುನರ್ರಚನೆ: ಡಾ. ಹರ್ಷವರ್ಧನ್‌ ಸೇರಿ 9 ಸಚಿವರ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...