Homeಕರ್ನಾಟಕರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ವಿಧಾನಪರಿಷತ್‌ಗೆ ನಾಮನಿರ್ದೇಶನ

ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ವಿಧಾನಪರಿಷತ್‌ಗೆ ನಾಮನಿರ್ದೇಶನ

- Advertisement -
- Advertisement -

ವಿಧಾನಪರಿಷತ್‌ನಲ್ಲಿ ಖಾಲಿ ಇದ್ದ ನಾಲ್ಕು ಸ್ಥಾನಗಳು ಭರ್ತಿಯಾಗಿದ್ದು, ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್‌.ಎಚ್ ಜಕ್ಕಪ್ಪನವರ್ ಮತ್ತು ಶಿವಕುಮಾರ್‌ ಕೆ. ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಭಾನುವಾರ (ಸೆ.7) ಅಧಿಕೃತ ಆದೇಶ ಹೊರಡಿಸಿದೆ.

ನಾಲ್ಕು ಸ್ಥಾನಗಳ ನಾಮ ನಿರ್ದೇಶನಕ್ಕೆ ರಾಜ್ಯಪಾಲರು ಅಂಗೀಕಾರ ಹಾಕಿದ್ದರಿಂದಾಗಿ, 37 ಸದಸ್ಯರೊಂದಿಗೆ ಪರಿಷತ್ತಿನಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದಂತಾಗಿದೆ. ಬಿಜೆಪಿ–ಜೆಡಿಎಸ್‌ ಸೇರಿ 37 ಸದಸ್ಯರ ಬಲ ಹೊಂದಿವೆ. ಮೇಲ್ನೋಟಕ್ಕೆ ಸಮಬಲ ಎನಿಸುವಂತಿದ್ದರೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಮ್ಮ ಲಖನ್ ಜಾರಕಿಹೊಳಿ ಪಕ್ಷೇತರ ಸದಸ್ಯರಾಗಿ ಮೇಲ್ಮನೆಯಲ್ಲಿದ್ದಾರೆ. ಹೀಗಾಗಿ, ಪರಿಷತ್ತಿನಲ್ಲಿ ಎದುರಿಸುತ್ತಿದ್ದ ಮುಜುಗರದಿಂದ ಪಾರಾಗುವ ದಾರಿ ಕಾಂಗ್ರೆಸ್‌ ಸಿಕ್ಕಂತಾಗಿದೆ.

ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ದಿನಾಂಕವನ್ನು ನೀಡಿದ ನಂತರ ಹೊಸದಾಗಿ ನಾಮನಿರ್ದೇನಗೊಂಡ ನಾಲ್ವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಕರ್ನಾಟಕ ಸರ್ಕಾರದ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷೆ, ಎಐಸಿಸಿ ಎಸ್‌ಸಿ ಸೆಲ್‌ನ ಡಾ. ಅಂಬೇಡ್ಕರ್ ಫೌಂಡೇಶನ್‌ನ ಉಪಾಧ್ಯಕ್ಷೆ ಸೇರಿದಂತೆ ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ಹೊಂದಿರುವ ಡಾ. ಆರತಿ ಕೃಷ್ಣ, ಎಐಸಿಸಿ ಎಸ್‌ಸಿ ಸೆಲ್‌ನ ಎಫ್‌ಎಚ್ ಜಕ್ಕಪ್ಪನವರ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಹಿರಿಯ ಸಹಾಯಕ ಸಂಪಾದಕ ಶಿವಕುಮಾರ್ ಕೆ ಮತ್ತು ಕೆಪಿಸಿಸಿ ಮಾಧ್ಯಮ ಕೋಶದ ಅಧ್ಯಕ್ಷ ಮತ್ತು ಮಾಜಿ ಜೆಡಿಎಸ್ ಎಂಎಲ್‌ಸಿ ರಮೇಶ್ ಬಾಬು ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ವಿಧಾನ ಪರಿಷತ್‌ನಲ್ಲಿ ಬಹುಮತ ಇರಲಿಲ್ಲ. ಹಾಗಾಗಿ, ಮಸೂದೆಗಳಿಗೆ ಮೇಲ್ಮನೆಯ ಅಂಗೀಕಾರ ಪಡೆಯುವುದು ಸರ್ಕಾರಕ್ಕೆ ಸವಾಲಾಗಿತ್ತು. ಈ ನಾಮನಿರ್ದೇಶನದ ಮೂಲಕ ಪರಿಷತ್‌ನಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಮಸೂದೆಗಳಿಗೆ ಅಂಗೀಕಾರ ಪಡೆಯುವ ಹಾದಿ ಸುಗಮವಾಗಿದೆ.

ದೇವನಹಳ್ಳಿ ರೈತರ ಹೋರಾಟ: ಗೆಲುವಿನ ಬೆನ್ನಲ್ಲೇ ಆತಂಕ – ಲಿಖಿತ ಆದೇಶಕ್ಕಾಗಿ ಒತ್ತಾಯ; ಸರಕಾರದ ವಿರುದ್ಧ ತಿರುಗಿಬಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...