Homeಮುಖಪುಟಕೆಲಸ ಸಿಗದ ಕಾರಣಕ್ಕೆ ವಿಷ ತೆಗೆದುಕೊಂಡ ಕುಟುಂಬ: ನಾಲ್ವರ ದುರ್ಮರಣ...

ಕೆಲಸ ಸಿಗದ ಕಾರಣಕ್ಕೆ ವಿಷ ತೆಗೆದುಕೊಂಡ ಕುಟುಂಬ: ನಾಲ್ವರ ದುರ್ಮರಣ…

- Advertisement -
- Advertisement -

ಕೆಲಸ ಕಳೆದುಕೊಂಡ ಒತ್ತಡದಲ್ಲಿದಲ್ಲಿ ಜೀವನ ನಿರ್ವಹಣೆ ಮಾಡಲು ವಿಫಲವಾದ ಸಾಫ್ಟ್‌ವೇರ್‌ ದಂಪತಿಯೊಂದು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಧ್ಯಪ್ರದೇಶದ ಇಂದೋರ್‌ನಲ್ಲಿ ಜರುಗಿದೆ.

ಇಂದೋರ್‌ನ ಖುಡೆಲ್ ಪ್ರದೇಶದ ರೆಸಾರ್ಟ್‌ನಲ್ಲಿ ಅಭಿಷೇಕ್ ಸಕ್ಸೇನಾ (45), ಅವರ ಪತ್ನಿ ಪ್ರೀತಿ ಸಕ್ಸೇನಾ (42), ಅವರ 14 ವರ್ಷದ ಅವಳಿ ಮಕ್ಕಳಾದ ಮಗ ಅಡ್ವಿತ್ ಮತ್ತು ಮಗಳು ಅನನ್ಯಾ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಅಭಿಷೇಕ್ ಸಕ್ಸೇನಾ ಸೋಡಿಯಂ ನೈಟ್ರೇಟ್ ಅನ್ನು ಆನ್‌ಲೈನ್‌ನಲ್ಲಿ ಖರೀದಿಸಿದ ಸಾಕ್ಷಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಬಹುಶಃ ಅವನು ತನ್ನ ಕುಟುಂಬ ಮತ್ತು ತನ್ನನ್ನು ಕೊಲ್ಲಲು ಅದನ್ನು  ಬಳಸಿರಬಹುದು ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಳು ಬಂದ ನಂತರ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

ಆನ್‌ಲೈನ್ ವಹಿವಾಟಿನಲ್ಲಿ ಆತ ನಷ್ಟ ಅನುಭವಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನೂ ಅವರ ಲ್ಯಾಪ್ಟಾಪ್ ಮತ್ತು ಮೊಬೈಲ್ ಫೋನ್ಗಳಲ್ಲಿ ಬ್ಯಾಂಕ್ ಖಾತೆಗಳ ವಿವರಗಳು, ಇ-ಮೇಲ್ಗಳು ಮತ್ತು ಇತರ ವಿಷಯಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ..

ಅಪೋಲೋ ಡಿಬಿ ಸಿಟಿಯಲ್ಲಿರುವ ತಮ್ಮ ಬಾಡಿಗೆ ಫ್ಲ್ಯಾಟ್‌ನಲ್ಲಿ ಅಭಿಷೇಕ್ ಅವರ 82 ವರ್ಷದ ತಾಯಿ ಒಬ್ಬಂಟಿಯಾಗಿರುವಾಗ ಕುಟುಂಬವು ಬುಧವಾರ ರೆಸಾರ್ಟ್‌ಗೆ ತೆರಳಿತ್ತು. ಗುರುವಾರ ಸಂಜೆ ತನಕ ಅವರು ತಮ್ಮ ಕೊಠಡಿಯಿಂದ ಹೊರಗೆ ಬರದಿದ್ದಾಗ, ರೆಸಾರ್ಟ್ ಸಿಬ್ಬಂದಿ ಅನುಮಾನ ಬಂದು ಬಾಗಿಲು ಬಡಿದಾಗ ತೆರೆದಿರಲಿಲ್ಲ. ಕೊನೆಗೆ ಮಾಸ್ಟರ್ ಕೀ ಸಹಾಯದಿಂದ ಬಾಗಿಲು ತೆರೆದಾಗ ಮೃತ ದೇಹಗಳು ಪತ್ತೆಯಾಗಿವೆ.

ಖುಡೆಲ್ ಪೊಲೀಸ್ ಠಾಣೆಯ ಪೊಲೀಸ್ ತಂಡ ರೆಸಾರ್ಟ್ ತಲುಪಿದ್ದು, ಪರೀಕ್ಷೆಯಲ್ಲಿ ಮೃತ ವ್ಯಕ್ತಿಯ ಉಗುರುಗಳು ನೀಲಿ ಬಣ್ಣಕ್ಕೆ ತಿರುಗಿದ್ದು ಅವರ ಬಾಯಿಯಲ್ಲಿ ನೊರೆ ಇರುವುದು ಕಂಡುಬಂದಿದೆ. ಒಂದು ಕೋಣೆಯಲ್ಲಿ ಬಾಟಲಿಯಲ್ಲಿನ ರಾಸಾಯನಿಕವೂ ಕಂಡುಬಂದಿದೆ.

ನಾಲ್ಕು ವರ್ಷಗಳ ಹಿಂದೆ ಈ ಕುಟುಂಬವು ದೆಹಲಿಯ ದ್ವಾರಕಾದಿಂದ ಇಂದೋರ್‌ಗೆ ಸ್ಥಳಾಂತರಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ನಡೆಸುತ್ತಿರುವ ಅಧಿಕಾರಿಯೊಬ್ಬರು, “ನಾವು ಮರಣೋತ್ತರ ವರದಿಗಾಗಿ ಕಾಯುತ್ತಿದ್ದರೂ, ಸಾಂದರ್ಭಿಕ ಸಾಕ್ಷ್ಯಗಳು ದಂಪತಿಗಳು ತಮ್ಮನ್ನು ಕೊಲ್ಲುವ ಮೊದಲು ತಮ್ಮ ಮಕ್ಕಳನ್ನು ಕೊಂದಿದ್ದಾರೆ” ಎಂದು ಸೂಚಿಸುತ್ತದೆ ಎಂದಿದ್ದಾರೆ.

ಅಭಿಷೇಕ್ ಮೊದಲು ತನ್ನ ಹೆಂಡತಿ ಮತ್ತು ಮಕ್ಕಳನ್ನು ಒಂದು ನಿರ್ದಿಷ್ಟ ಪ್ರಮಾಣದ ರಾಸಾಯನಿಕವನ್ನು ಕೊಟ್ಟು ಕೊಂದು ನಂತರ ತನ್ನನ್ನು ತಾನೇ ಕೊಂದಿರುವ ಸಾಧ್ಯತೆಯೂ ಇದೆ. ಸೋಡಿಯಂ ನೈಟ್ರೇಟ್ ಖರೀದಿಗೆ ನೀಡಿರುವ ಬೇಡಿಕೆಯ ಕುರಿತು ನಾವು ಎಂಜಿನಿಯರ್‌ನ ಲ್ಯಾಪ್‌ಟಾಪ್‌ನಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇವೆ ಎಂದಿದ್ದಾರೆ.

ಇಂದೋರ್‌ನ ಪಲಾಸಿಯಾದಲ್ಲಿ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಕಳೆದುಕೊಂಡಿದ್ದರಿಂದ ಟೆಕ್ಕಿ ಅಭಿಷೇಕ್ ಸಕ್ಸೇನಾ ಬಹುಶಃ ಒತ್ತಡಕ್ಕೆ ಒಳಗಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಅವರ ಪತ್ನಿ ಬಹುರಾಷ್ಟ್ರೀಯ ಇ-ಕಾಮರ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೂ ಸಹ ಜೀವನ ನಡೆಸುವಷ್ಟು ಸಂಬಳ ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆಯ ನಂತರ ಶುಕ್ರವಾರ ಶವಗಳನ್ನು ದೆಹಲಿಯ ಕೆಲವು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...