Homeಮುಖಪುಟಕೆಲಸ ಸಿಗದ ಕಾರಣಕ್ಕೆ ವಿಷ ತೆಗೆದುಕೊಂಡ ಕುಟುಂಬ: ನಾಲ್ವರ ದುರ್ಮರಣ...

ಕೆಲಸ ಸಿಗದ ಕಾರಣಕ್ಕೆ ವಿಷ ತೆಗೆದುಕೊಂಡ ಕುಟುಂಬ: ನಾಲ್ವರ ದುರ್ಮರಣ…

- Advertisement -
- Advertisement -

ಕೆಲಸ ಕಳೆದುಕೊಂಡ ಒತ್ತಡದಲ್ಲಿದಲ್ಲಿ ಜೀವನ ನಿರ್ವಹಣೆ ಮಾಡಲು ವಿಫಲವಾದ ಸಾಫ್ಟ್‌ವೇರ್‌ ದಂಪತಿಯೊಂದು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಧ್ಯಪ್ರದೇಶದ ಇಂದೋರ್‌ನಲ್ಲಿ ಜರುಗಿದೆ.

ಇಂದೋರ್‌ನ ಖುಡೆಲ್ ಪ್ರದೇಶದ ರೆಸಾರ್ಟ್‌ನಲ್ಲಿ ಅಭಿಷೇಕ್ ಸಕ್ಸೇನಾ (45), ಅವರ ಪತ್ನಿ ಪ್ರೀತಿ ಸಕ್ಸೇನಾ (42), ಅವರ 14 ವರ್ಷದ ಅವಳಿ ಮಕ್ಕಳಾದ ಮಗ ಅಡ್ವಿತ್ ಮತ್ತು ಮಗಳು ಅನನ್ಯಾ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಅಭಿಷೇಕ್ ಸಕ್ಸೇನಾ ಸೋಡಿಯಂ ನೈಟ್ರೇಟ್ ಅನ್ನು ಆನ್‌ಲೈನ್‌ನಲ್ಲಿ ಖರೀದಿಸಿದ ಸಾಕ್ಷಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಬಹುಶಃ ಅವನು ತನ್ನ ಕುಟುಂಬ ಮತ್ತು ತನ್ನನ್ನು ಕೊಲ್ಲಲು ಅದನ್ನು  ಬಳಸಿರಬಹುದು ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಳು ಬಂದ ನಂತರ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

ಆನ್‌ಲೈನ್ ವಹಿವಾಟಿನಲ್ಲಿ ಆತ ನಷ್ಟ ಅನುಭವಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನೂ ಅವರ ಲ್ಯಾಪ್ಟಾಪ್ ಮತ್ತು ಮೊಬೈಲ್ ಫೋನ್ಗಳಲ್ಲಿ ಬ್ಯಾಂಕ್ ಖಾತೆಗಳ ವಿವರಗಳು, ಇ-ಮೇಲ್ಗಳು ಮತ್ತು ಇತರ ವಿಷಯಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ..

ಅಪೋಲೋ ಡಿಬಿ ಸಿಟಿಯಲ್ಲಿರುವ ತಮ್ಮ ಬಾಡಿಗೆ ಫ್ಲ್ಯಾಟ್‌ನಲ್ಲಿ ಅಭಿಷೇಕ್ ಅವರ 82 ವರ್ಷದ ತಾಯಿ ಒಬ್ಬಂಟಿಯಾಗಿರುವಾಗ ಕುಟುಂಬವು ಬುಧವಾರ ರೆಸಾರ್ಟ್‌ಗೆ ತೆರಳಿತ್ತು. ಗುರುವಾರ ಸಂಜೆ ತನಕ ಅವರು ತಮ್ಮ ಕೊಠಡಿಯಿಂದ ಹೊರಗೆ ಬರದಿದ್ದಾಗ, ರೆಸಾರ್ಟ್ ಸಿಬ್ಬಂದಿ ಅನುಮಾನ ಬಂದು ಬಾಗಿಲು ಬಡಿದಾಗ ತೆರೆದಿರಲಿಲ್ಲ. ಕೊನೆಗೆ ಮಾಸ್ಟರ್ ಕೀ ಸಹಾಯದಿಂದ ಬಾಗಿಲು ತೆರೆದಾಗ ಮೃತ ದೇಹಗಳು ಪತ್ತೆಯಾಗಿವೆ.

ಖುಡೆಲ್ ಪೊಲೀಸ್ ಠಾಣೆಯ ಪೊಲೀಸ್ ತಂಡ ರೆಸಾರ್ಟ್ ತಲುಪಿದ್ದು, ಪರೀಕ್ಷೆಯಲ್ಲಿ ಮೃತ ವ್ಯಕ್ತಿಯ ಉಗುರುಗಳು ನೀಲಿ ಬಣ್ಣಕ್ಕೆ ತಿರುಗಿದ್ದು ಅವರ ಬಾಯಿಯಲ್ಲಿ ನೊರೆ ಇರುವುದು ಕಂಡುಬಂದಿದೆ. ಒಂದು ಕೋಣೆಯಲ್ಲಿ ಬಾಟಲಿಯಲ್ಲಿನ ರಾಸಾಯನಿಕವೂ ಕಂಡುಬಂದಿದೆ.

ನಾಲ್ಕು ವರ್ಷಗಳ ಹಿಂದೆ ಈ ಕುಟುಂಬವು ದೆಹಲಿಯ ದ್ವಾರಕಾದಿಂದ ಇಂದೋರ್‌ಗೆ ಸ್ಥಳಾಂತರಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ನಡೆಸುತ್ತಿರುವ ಅಧಿಕಾರಿಯೊಬ್ಬರು, “ನಾವು ಮರಣೋತ್ತರ ವರದಿಗಾಗಿ ಕಾಯುತ್ತಿದ್ದರೂ, ಸಾಂದರ್ಭಿಕ ಸಾಕ್ಷ್ಯಗಳು ದಂಪತಿಗಳು ತಮ್ಮನ್ನು ಕೊಲ್ಲುವ ಮೊದಲು ತಮ್ಮ ಮಕ್ಕಳನ್ನು ಕೊಂದಿದ್ದಾರೆ” ಎಂದು ಸೂಚಿಸುತ್ತದೆ ಎಂದಿದ್ದಾರೆ.

ಅಭಿಷೇಕ್ ಮೊದಲು ತನ್ನ ಹೆಂಡತಿ ಮತ್ತು ಮಕ್ಕಳನ್ನು ಒಂದು ನಿರ್ದಿಷ್ಟ ಪ್ರಮಾಣದ ರಾಸಾಯನಿಕವನ್ನು ಕೊಟ್ಟು ಕೊಂದು ನಂತರ ತನ್ನನ್ನು ತಾನೇ ಕೊಂದಿರುವ ಸಾಧ್ಯತೆಯೂ ಇದೆ. ಸೋಡಿಯಂ ನೈಟ್ರೇಟ್ ಖರೀದಿಗೆ ನೀಡಿರುವ ಬೇಡಿಕೆಯ ಕುರಿತು ನಾವು ಎಂಜಿನಿಯರ್‌ನ ಲ್ಯಾಪ್‌ಟಾಪ್‌ನಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇವೆ ಎಂದಿದ್ದಾರೆ.

ಇಂದೋರ್‌ನ ಪಲಾಸಿಯಾದಲ್ಲಿ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಕಳೆದುಕೊಂಡಿದ್ದರಿಂದ ಟೆಕ್ಕಿ ಅಭಿಷೇಕ್ ಸಕ್ಸೇನಾ ಬಹುಶಃ ಒತ್ತಡಕ್ಕೆ ಒಳಗಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಅವರ ಪತ್ನಿ ಬಹುರಾಷ್ಟ್ರೀಯ ಇ-ಕಾಮರ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೂ ಸಹ ಜೀವನ ನಡೆಸುವಷ್ಟು ಸಂಬಳ ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆಯ ನಂತರ ಶುಕ್ರವಾರ ಶವಗಳನ್ನು ದೆಹಲಿಯ ಕೆಲವು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...