Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...