Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....