Homeಮುಖಪುಟಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

ಮಣಿವಣ್ಣನ್‌ ವರ್ಗಾವಣೆ ಕುರಿತು ರಾಜ್ಯ ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾದಿಂದ ನಾಲ್ಕು ಪ್ರಶ್ನೆಗಳು

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ಈ ಕಾಲಘಟ್ಟದಲ್ಲಿ ಅತೀವ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ಪರಿಹಾರ ಕಾರ್ಯಗಳಲ್ಲಿ ನಿರತರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವುದು ತೀರಾ ಆಘಾತಕಾರಿ ಎಂದು ಸ್ವರಾಜ್‌ ಇಂಡಿಯಾ ಪಕ್ಷ ಖಂಡಿಸಿದೆ.

ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನೂ ಒಳಗೊಂಡು ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಿಕ್ಕಾಗಿ ಸ್ವಯಂಸೇವಕರು ಹಾಗೂ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಸಂತ್ರಸ್ತರನ್ನು ತಲುಪಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಮಣಿವಣ್ಣನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಇಂಥ ಬಿಕ್ಕಟ್ಟಿನ ನಡುವೆ, ಅವರನ್ನು ವರ್ಗಾವಣೆ ಮಾಡಿರುವುದರಿಂದ ಪರಿಹಾರ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿ, ಪರಿಣಾಮವಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಲಕ್ಷಾಂತರ ಕೂಲಿಕಾರ್ಮಿಕರ ಬವಣೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಿದ್ದರೂ, ರಾಜಕೀಯ ಕಾರಣಗಳಿಗಾಗಿ ಮಣಿವಣ್ಣನ್ ಅವರಿಗೆ ಮುಂದಿನ ಹುದ್ದೆಯನ್ನೂ ನಿಗದಿ ಮಾಡದೆ ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಸ್ವರಾಜ್ ಇಂಡಿಯಾದ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ವರ್ಗಾವಣೆ ರಾಜಕೀಯದ ಹಿನ್ನೆಯಲ್ಲಿ ನಾವು ಸರ್ಕಾರಕ್ಕೆ ಸ್ವರಾಜ್‌ ಇಂಡಿಯಾ ಕೆಲ ಪ್ರಶ್ನೆಗಳನ್ನು ಕೇಳಿದೆ.
1) ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಮಣಿವಣ್ಣನ್ ವಿರೋಧಿಸಿದ ಕಾರಣಕ್ಕಾಗಿ ಈ ವರ್ಗಾವಣೆ ಮಾಡಲಾಗಿದೆಯೆ?

2) ಕೋವಿಡ್-19 ಪರಿಹಾರದ ದಿನಸಿ ಪದಾರ್ಥಗಳ ಕಿಟ್‍ಗಳನ್ನು ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಮೂಲಕ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದ ಮಣಿವಣ್ಣನ್ ಅವರು, ಈ ವಿತರಣಾ ಕಾರ್ಯವನ್ನು ರಾಜಕಾರಣಿಗಳು ಹಾಗೂ ಎಂಎಲ್‍ಎಗಳ ಕೈಗೊಪ್ಪಿಸಲು ತಡೆಯಾಗಿದ್ದರು ಎಂಬ ಕಾರಣಕ್ಕಾಗಿ ವರ್ಗಾವಣೆ ಶಿಕ್ಷೆ ನೀಡಲಾಗಿದೆಯೆ?

3) ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನವನ್ನು ಆಯಾ ಕಂಪನಿಗಳ ಮಾಲಿಕರೇ ನೀಡಬೇಕೆಂಬ ನಿಲುವನ್ನು ಹೊಂದಿದ್ದ ಕಾರಣಕ್ಕಾಗಿ ವರ್ಗಾವಣೆ ಮಾಡಿದ್ದೀರಾ?

4) ಕೋವಿಡ್-19 ಪರಿಹಾರ ಕಾರ್ಯಗಳಲ್ಲಿ ಪಾರದರ್ಶಕತೆ ತರಬೇಕೆಂಬ ಪ್ರಯತ್ನಕ್ಕೆ ವಿರುದ್ಧವಾದ ರಾಜಕೀಯ ಒತ್ತಡದ ಕಾರಣಕ್ಕಾಗಿ ನಡೆದಿದೆಯೆ?

ಕಾರಣ ಏನೇ ಇರಲಿ, ಈ ಬಿಕ್ಕಟ್ಟಿನ ಸಮಯದಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಅವಕಾಶ ಕೊಡದೆ ಲಕ್ಷಾಂತರ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ಕೂಡಲೇ ಈ ವರ್ಗಾವಣೆ ಆದೇಶವನ್ನು ಹಿಂಪಡೆದು ಮಣಿವಣ್ಣನ್ ಅವರು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: #BringBackCaptain : ಮಣಿವಣ್ಣನ್‌ ಪರ ಟ್ವಿಟ್‌ರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...